ಹಿಜಾಬ್ ವಿವಾದ: ಸಚಿವ ಸಂಪುಟದಲ್ಲಿ ಚರ್ಚೆ ಬಳಿಕ ಸೂಕ್ತ ನಿರ್ಧಾರ; ಸಚಿವ ಮಾಧುಸ್ವಾಮಿ
Team Udayavani, Feb 7, 2022, 5:23 PM IST
ಚಿಕ್ಕಮಗಳೂರು : ಪ್ರತಿಭಟನೆ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ನಾವೆಲ್ಲರೂ ಪ್ರತಿಭಟನೆ ಮಾಡಿಯೇ ಈ ಹಂತಕ್ಕೆ ಬಂದಿರುವುದು. ಸದ್ಯ ನಡೆಯುತ್ತಿರುವ ಹಿಜಬ್ ವಿವಾದ ಸಚಿವ ಸಂಪುಟದಲ್ಲಿ ಚರ್ಚೆಯಾಗಿ ಸ್ಪಷ್ಟವಾದ ನಿರ್ಧಾರ ಬರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಹಿಜಾಬ್ ವಿವಾದ ಸಚಿವ ಸಂಪುಟದಲ್ಲಿ ಚರ್ಚೆಯಾದ ಬಳಿಕವೇ ಒಂದು ಸ್ಪಷ್ಟವಾದ ನಿರ್ಧಾರಕ್ಕೆ ಬರುತ್ತದೆ. ಪ್ರತಿಭಟನೆ ಮಾಡುವುದಕ್ಕೆ ಎಲ್ಲರಿಗೂ ಸ್ವಾತಂತ್ರ್ಯವಿದೆ ನಾವೆಲ್ಲರೂ ಪ್ರತಿಭಟನೆ ಮಾಡಿಯೇ ಈ ಹಂತಕ್ಕೆ ಬಂದಿರುವುದು ಬಂದಿರುವುದು ಎಂದವರು ಹೇಳಿದರು.
ಸಿಎಂ ದೆಹಲಿ ಪ್ರಯಾಣ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸರ್ಕಾರದ ಅನೇಕ ಕಾರ್ಯಕ್ರಮಗಳ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ನಾನು ಪೂರ್ವನಿಯೋಜಿತ ಕಾರ್ಯಕ್ರಮದ ಹಿನ್ನೆಲೆ ಒಂದು ದಿನ ತಡವಾಗಿ ದೆಹಲಿಗೆ ಹೋಗುತ್ತಿದ್ದೇನೆ. ನನ್ನ ದೆಹಲಿ ಭೇಟಿಗೆ, ನಾಯಕತ್ವ ಬದಲಾವಣೆ, ಸಚಿವ ಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ. ನಮ್ಮ ಅಧ್ಯಕ್ಷರು ಕೂಡ ದೆಹಲಿಯಲ್ಲಿ ಇಲ್ಲ ಜಾರ್ಖಂಡ್ ನಲ್ಲಿದ್ದಾರೆ. ದೆಹಲಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಇಲ್ಲ ಸಿಎಂ ದೆಹಲಿ ಭೇಟಿ ನಂತರ ನಿಗಮ ಮಂಡಳಿ ನೇಮಕವಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್