
ಮಠಗಳ ನಿಯಂತ್ರಣಕ್ಕೆ ಕಾನೂನು: ಮನವಿ ನಿರಾಕರಿಸಿದ ಹೈಕೋರ್ಟ್
Team Udayavani, Sep 30, 2022, 8:00 AM IST

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠವೂ ಸೇರಿ ರಾಜ್ಯದಲ್ಲಿರುವ ಎಲ್ಲ ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂಬ ಮನವಿ ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಭಾರತೀ ಶ್ರೀಗಳನ್ನು ಕೆಳಗಿಳಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಬೇಕು ಹಾಗೂ ಮಠದ ಆಡಳಿತದಲ್ಲಿ ನಡೆದಿದೆ ಎನ್ನಲಾದ ಅವ್ಯಹವಾರಗಳ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಕೋರಿ ಎದುರ್ಕಳ ಈಶ್ವರ ಭಟ್, ಎ.ಕೆ. ಜೈಕೃಷ್ಣ ಸೇರಿ 6 ಮಂದಿ 2016ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೈಕೋರ್ಟ್ ಈ ನಿಲುವು ವ್ಯಕ್ತಪಡಿಸಿದೆ.
ಪ್ರಕರಣ ಸಂಬಂಧ ಸುದೀರ್ಘ ವಾದ-ಪ್ರತಿವಾದ ಆಲಿಸಿ ಸೆ.22ರಂದು ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.
ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂಬ ಅರ್ಜಿದಾರರ ಮನವಿ ಪುರಸ್ಕರಿಸಲು ನಿರಾಕರಿಸಿದ ನ್ಯಾಯಪೀಠ, ಒಂದೊಮ್ಮೆ ಯಾರಾದರೂ ಬಾಧಿತರಾದರೆ ಅಥವಾ ತೊಂದರೆಗೊಳಗಾಗಿದ್ದರೆ ಅಂಥವರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿ ಕಾನೂನು ಪರಿಹಾರ ಪಡೆದುಕೊಳ್ಳಲು ಅವಕಾಶವಿದೆ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಹೈಕೋರ್ಟ್ ಹೇಳಿದ್ದು?
ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ಶಾಸನಸಭೆಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಆದರೆ, ಸಂವಿಧಾನದ ಪರಿಚ್ಛೇದ 226ರ ಅಡಿಯಲ್ಲಿ ನ್ಯಾಯಾಲಯ ತನ್ನ ಪರಮಾಧಿಕಾರವನ್ನು ಬಳಸಿ, ಮಠಗಳ ಆಡಳಿತ ನಿಯಂತ್ರಣಕ್ಕಾಗಿ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ. ಮಠಗಳು ಹಾಗೂ ಅವುಗಳಿಗೆ ಹೊಂದಿಕೊಂಡ ದೇವಾಲಯಗಳು ಮಠಾಧಿಪತಿಗಳಿಂದ ನಿರ್ವಹಿಸಲ್ಪಡುವುದರಿಂದ ಶಾಸನಸಭೆ ಅವುಗಳನ್ನು ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಕಾಯ್ದೆ-1997ರ ವ್ಯಾಪ್ತಿಯಿಂದ ಹೊರಗಿಟ್ಟಿದೆ. ಆದಾಗ್ಯೂ ಅರ್ಜಿದಾರರಿಗೆ ಪರ್ಯಾಯ ಪರಿಹಾರ ಪಡೆಯಲು ಸಿಪಿಸಿ ಸೆಕ್ಷನ್ 92ರ ಅಡಿಯಲ್ಲಿ ಅವಕಾಶವಿದೆ. ಆದ್ದರಿಂದ, ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ