ವಕೀಲ ನೌಶದ್‌ ಕೊಲೆ ಕೇಸ್:‌ ಸಿಸಿಬಿ ವಶಕ್ಕೆ ಪೂಜಾರಿ


Team Udayavani, Jun 18, 2020, 8:00 AM IST

ravi nowsahd

ಬೆಂಗಳೂರು: ಭೂಗತ ಲೋಕದ ಕರಿನೆರಳಿನಲ್ಲಿ ದಶಕದ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಯುವ ವಕೀಲ ನೌಶಾದ್‌ ಕಾಸೀಂಜೀ ಹತ್ಯೆ ಪ್ರಕರಣ ತನಿಖೆಯ 2ನೇ ಅಧ್ಯಾಯವನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)  ಚುರುಕುಗೊಳಿಸಿದೆ. ಕೆಲ ತಿಂಗಳ ಹಿಂದಷ್ಟೇ ಭೂಗತಪಾತಕಿ ರವಿ ಪೂಜಾರಿ ಬಂಧನದೊಂದಿಗೆ ನೌಶಾದ್‌ ಹತ್ಯೆ ಕೇಸ್‌ ಕೂಡ ರೀ ಓಪನ್‌ ಆಗಲಿದೆ ಎಂಬುದು ಧೃಢಪಟ್ಟಿತ್ತು.

ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು, ವಿಚಾರಣೆ ಸಲುವಾಗಿ ರವಿ ಪೂಜಾರಿಯನ್ನು ಹತ್ತು ದಿನ ಕಸ್ಟಡಿಗೆ ಪಡೆದುಕೊಂಡು ತನಿಖೆಗೆ ವೇಗ ನೀಡಿದೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌, ನೌಶಾದ್‌ ಕೊಲೆ ಕೇಸ್‌ ಸಿಸಿಬಿಗೆ ವರ್ಗಾವಣೆಗೊಳಿಸಿದ ಬೆನ್ನಲ್ಲೇ  ತನಿಖಾ ತಂಡ ಮಂಗಳೂರಿಗೆ ತೆರಳಿ ತನಿಖಾ ಪ್ರಕ್ರಿಯೆ ಆರಂಭಿಸಿದೆ. ಜತೆಗೆ, ಪ್ರಕರಣಕ್ಕೆ ಸಂಬಂಧ ಸ್ಥಳೀಯ ಪೊಲೀಸರು ನಡೆಸಿದ್ದ ತನಿಖಾ ದಾಖಲೆ  ಗಳನ್ನು ಪಡೆದು ತನಿಖೆ ಮುಂದುವರಿಸಿದೆ. ಪ್ರಕರಣದಲ್ಲಿ ಆರೋಪಿಯೂ ಆಗಿರುವ  ರವಿ ಪೂಜಾರಿಯನ್ನು ಹತ್ತು ದಿನ ಕಸ್ಟಡಿಗೆ ಪಡೆದಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಪೂಜಾರಿ ವಿರುದ್ಧದ ಆರೋಪ ಏನು?: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹಚರ ರಶೀದ್‌ ಮಲಬಾರಿ ಪರ ವಕೀಲ ನೌಶಾದ್‌ ನ್ಯಾಯಾಲಯ ಗಳಲ್ಲಿ ವಾದಿಸುತ್ತಿದ್ದರು. ಭೂಗತ ಲೋಕದಲ್ಲಿ ಮಲಬಾರಿಯ ವೈರತ್ವ ಪೂಜಾರಿಗಿತ್ತು. ಹೀಗಾಗಿ, ರವಿಪೂಜಾರಿ ನೌಶಾದ್‌ಗೆ ಹಲವು ಬಾರಿ ಕರೆ ಮಾಡಿ ಜೀವಬೆದರಿಕೆ ಒಡ್ಡಿದ್ದ. ಜತೆಗೆ, ತನ್ನ ಸಹಚರ ಯುವಕರಿಗೆ ಸುಪಾರಿ ನೀಡಿ ನೌಶಾದ್‌ ಹತ್ಯೆ ಮಾಡಿಸಿದ್ದ ಎಂಬ ಆರೋಪವಿದೆ. ಈ ಅಂಶ ಸ್ಥಳೀಯ ಪೊಲೀಸರ  ಆರೋಪ ಪಟ್ಟಿ ಯಲ್ಲೂ ಇದೆ. ಈ ಬಗ್ಗೆ ತನಿಖೆ ನಡೆಸ ಲಾಗುತ್ತಿದೆ ಎಂದು ಹಿರಿಯ ಅಧಿಕಾರಿ ಯೊಬ್ಬರು ತಿಳಿಸಿದರು.

ಪ್ರಕರಣದ ಸದ್ಯದ ಸ್ಥಿತಿ!: ಪ್ರಕರಣದ ತನಿಖೆ ನಡೆಸಿದ್ದ ಸ್ಥಳೀಯ ಪೊಲೀಸರು ಕೂಡ ನೌಶಾದ್‌ ಹತ್ಯೆ ಪ್ರಕರಣ ದಲ್ಲಿ ರವಿ ಪೂಜಾರಿ, ಕಲಿ ಯೋಗೇಶ್‌ ಪಾತ್ರ ಇರುವುದಾಗಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖೀಸಿ ಇಬ್ಬರೂ ಆರೋಪಿಗಳನ್ನಾಗಿ ಪರಿಗಣಿಸಿದ್ದರು.ಜತೆಗೆ, ನೌಶಾದ್‌ಗೆ ಪೂಜಾರಿ ಕರೆ ಮಾಡಿ ಜೀವಬೆದರಿಕೆ ಹಾಕಿದ್ದ ಎಂಬುದನ್ನೂ ಪತ್ತೆಹಚ್ಚಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮಂಗಳೂರಿನ ಸೆಷನ್ಸ್‌ ಕೋರ್ಟ್‌ ಆಗ ತಲೆಮರೆಸಿಕೊಂಡಿದ್ದ  ಆರೋಪಿಗಳಾದ ಪೂಜಾರಿ ಹಾಗೂ ಕಲಿ ಯೋಗೇಶ್‌ ವಿರುದ್ಧದ ಆರೋಪಪಟ್ಟಿ ಯನ್ನು ಪ್ರತ್ಯೇಕಗೊಳಿಸಿತ್ತು.

ಜತೆಗೆ ಇಬ್ಬರು ಆರೋಪಿಗಳಾದ ಶಿವಪ್ರಕಾಶ್‌ ಹಾಗೂ ರವಿ ಶುಕ್ವಾಯ್‌ ಅವರನ್ನು ಖುಲಾಸೆಗೊಳಿಸಿತ್ತು. ಉಳಿದ  ಆರೋಪಿಗಳಾದ ದಿನೇಶ್‌ ಶೆಟ್ಟಿ, ಪ್ರತಾಪ್‌ ಶೆಟ್ಟಿ, ರಿತೇಶ್‌ಗೆ ಜೀವಾವಧಿ ಶಿಕ್ಷೆ ಹಾಗೂ ಸುಬ್ರಹ್ಮಣ್ಯ ಹಾಗೂ ಗಣೇಶ್‌ ಎಂಬುವವರಿಗೆ ಜೀವಾವಧಿ ಶಿಕ್ಷೆ ವಿಧಿಸಿ 2015ರಲ್ಲಿ ಆದೇಶ ಹೊರಡಿಸಿತ್ತು. ಈ ಪ್ರಕರಣದಲ್ಲಿ ಹೈಕೋರ್ಟ್‌ ಸಾಕ್ಷ್ಯಾಧಾರಗಳ  ಕೊರತೆಯಿಂದ ದಿನೇಶ್‌ ಶೆಟ್ಟಿ ಸೇರಿದಂತೆ ಐವರು ಆರೋಪಿಗಳು ಖುಲಾಸೆಗೊಳಿಸಿ 2018ರಲ್ಲಿ ತೀರ್ಪು ನೀಡಿತ್ತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.