ತೈಲ ಬೆಲೆ ಏರಿಕೆ ವಿರೋಧಿಸಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನೇತೃತ್ವದಲ್ಲಿ ಪ್ರತಿಭಟನೆ


Team Udayavani, Jun 11, 2021, 2:55 PM IST

dfghjkjhgfd

ಬೆಳಗಾವಿ: ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಜನಸಾಮಾನ್ಯರು ಈಗ ಉಗಿಯುವ ಸ್ಥಿತಿ ಬಂದಿದೆ. ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲಕಲ್ಲೋಲವಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕಿಡಿಕಾರಿದರು.

ಬೆಳಗಾವಿಯ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ, ಪೆಟ್ರೋಲ್, ಡಿಸೆಲ್ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಹಿಂಡಲಗಾ ಪೆಟ್ರೊಲ್ ಬಂಕ್ ಮುಂಭಾಗದಲ್ಲಿ #Petrol100NotOut ಎಂಬ ಆಂದೋಲನದ ಹೆಸರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದು ಕಾಂಗ್ರೆಸ್ ಪ್ರತಿಭಟನೆ ಅಲ್ಲ, ಜನಸಾಮಾನ್ಯರ ಪ್ರತಿಭಟನೆ. ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ, ಗ್ಯಾಸ್ ಸಿಲೆಂಡರ್, ವಿದ್ಯುತ್ ಎಲ್ಲದರ ಬೆಲೆ ಏರಿದೆ. ಕೊರೋನಾ ಸಂಕಷ್ಟದ ಮಧ್ಯೆ ಎಲ್ಲರ ಜೀವನ ಹಾಳಾಗುತ್ತಿದೆ. ಅಚ್ಛೇದಿನ್ ಬರೇ ಕನಸು, ಬರೇ ಸುಳ್ಳು. ಕಾಂಗ್ರೆಸ್ ಪಕ್ಷ ಜನಸಾಮಾನ್ಯರ ಸಂಕಷ್ಟದಲ್ಲಿ ಮೊದಲಿನಿಂದಲೂ ಜನರೊಂದಿಗೆ ನಿಲ್ಲುತ್ತ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ. 50ರಷ್ಟು ತೆರಿಗೆ ಕಡಿಮೆ ಮಾಡಿ ಕೊಡಲಿ ಎಂದು ಆಗ್ರಹಿಸಿದರು.

ಕೆಟ್ಟ ದಿನಗಳನ್ನು ಬಿಜೆಪಿ ಸರ್ಕಾರ ಜನಸಾಮಾನ್ಯರ ಎದುರು ತಂದಿದೆ. ಸರಕಾರಕ್ಕೆ ಚಾಟಿ ಬೀಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕಾಂಗ್ರೆಸ್ ಮೇಲೆ ಗೂಬೆ ಕೂಡ್ರಿಸುವುದನ್ನು ಬಿಡಿ. ಜನರನ್ನು ಮೂರ್ಖರನ್ನಾಗಿಸಬೇಡಿ. ಸರ್ಕಾರಕ್ಕೆ ಕಿವಿಯೂ ಕೇಳ್ತಾ ಇಲ್ಲ, ಕಣ್ಣೂ ಕಾಣ್ತಾ ಇಲ್ಲ. ಮನಮೋಹನ್ ಸಿಂಗ್ ಸರಕಾರ ಇದ್ದಾಗ ಪ್ಟ್ರೋಲ್ ಬೆಲೆ 58 ರೂ., ಡಿಸೆಲ್ ಬೆಲೆ 45 ರೂ. ಇತ್ತು. ಆದರೆ ಇಂದು ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ಬೆಲೆ ಹೆಚ್ಚಾಗಿದೆ. ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೈಕ್ ಸವಾರನ ಬೈಕ್ ಗೆ ಸ್ವತಃ ಪೆಟ್ರೋಲ್ ಹಾಕಿದ ಲಕ್ಷ್ಮಿ ಹೆಬ್ಬಾಳಕರ್ 200 ರೂ. ಪಡೆದರು. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬೈಕ್ ಗಳನ್ನು ಪೆಟ್ರೋಲ್ ಬಂಕ್ ಎದುರು ಮಲಗಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.