ಸೋಂಕಿನಿಂದ ಪಾರಾಗಲು ಊರನ್ನೇ ತೊರೆದರು!

30ಕ್ಕೂ ಹೆಚ್ಚು ಕುಟುಂಬಗಳು ಜಮೀನುಗಳಲ್ಲಿ ಟೆಂಟ್‌ ಹಾಕಿ ಜೀವನ

Team Udayavani, Jul 18, 2020, 7:29 AM IST

30ಕ್ಕೂ ಹೆಚ್ಚು ಕುಟುಂಬಗಳು ಜಮೀನುಗಳಲ್ಲಿ ಟೆಂಟ್‌ ಹಾಕಿ ಜೀವನ

ಸಾಂದರ್ಭಿಕ ಚಿತ್ರ

ಗದಗ: ಕೋವಿಡ್ ಸೋಂಕಿನಿಂದ ಭೀತರಾಗಿ ತಾಲೂಕಿನ ಶೀತಾಲಹರಿ ಗ್ರಾಮಸ್ಥರು ಊರನ್ನೇ ತೊರೆದು ಜಮೀನುಗಳಲ್ಲಿ ಟೆಂಟ್‌ ಕಟ್ಟಿ ವಾಸ್ತವ್ಯ ಹೂಡಿದ್ದಾರೆ.
ತಾಲೂಕಿನ ಶೀತಾಲಹರಿ ಗ್ರಾಮದಲ್ಲಿ ಜು. 8ರಂದು 52 ವರ್ಷ ಪ್ರಾಯದ ವ್ಯಕ್ತಿಯೊಬ್ಬರಿಗೆ ಕೆಮ್ಮು, ನೆಗಡಿ ಕಂಡು ಬಂದಿದ್ದರಿಂದ ಸ್ವಯಂಪ್ರೇರಿತರಾಗಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರು. ಜು. 9ರಂದು ತೀವ್ರ ಅನಾರೋಗ್ಯ ಆದಾಗ ಗ್ರಾಮಸ್ಥರು ಪ್ರಾಥಮಿಕ ಆರೈಕೆ ನೀಡಿದ್ದರು. ಬಳಿಕ ರೋಗಿ ಕೊನೆಯುಸಿರೆಳೆದಿದ್ದರಿಂದ ಅಂತ್ಯಸಂಸ್ಕಾರಕ್ಕೂ ಸಿದ್ಧತೆ ನಡೆಸಿದ್ದರು. ಈ ವೇಳೆಗೆ ಮೃತರಿಗೆ ಕೋವಿಡ್‌- 19 ಸೋಂಕು ದೃಢಪಟ್ಟಿತ್ತು.

ಅನಂತರ ಜು. 15ರಂದು 11 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 48 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗಿದೆ. ಅವರಲ್ಲಿ ಮತ್ತಿಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕು ತಡೆಯುವ ಉದ್ದೇಶದೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಳೆದ ಮೂರು ದಿನಗಳಿಂದ ಸುಮಾರು 30ಕ್ಕೂ ಹೆಚ್ಚು ಕುಟುಂಬಗಳು ಹೊಲದಲ್ಲಿ ಟೆಂಟ್‌, ತಾತ್ಕಾಲಿಕ ಟಿನ್‌ ಶೆಡ್‌ ಹಾಕಿಕೊಂಡಿವೆ. ದಿನ ಕಳೆದಂತೆ ಜಮೀನುಗಳಲ್ಲಿ ವಾಸಕ್ಕೆ ಒಲವು ತೋರುವವರ ಸಂಖ್ಯೆ ಹೆಚ್ಚುತ್ತಿದೆ. ಕೆಲವರು ಬೇರೆ ಊರುಗಳಲ್ಲಿರುವ ಸಂಬಂ ಧಿಕರ ಮನೆ ಸೇರುತ್ತಿದ್ದಾರೆ. ಗ್ರಾಮದ ವಿವಿಧೆಡೆಗಳ 50ಕ್ಕೂ ಹೆಚ್ಚು ಮನೆಗಳಿಗೆ ಬೀಗ ಹಾಕಲಾಗಿದೆ.

ಪ್ಲೇಗ್‌ ನೆನಪಿಸಿದ ಕೋವಿಡ್ ಸೋಂಕು
ಪ್ಲೇಗ್‌ನಿಂದ ಪಾರಾಗಲು ಜನ ಊರು ತೊರೆದು ಕಾಡು-ಮೇಡುಗಳಲ್ಲಿ ಬಿಡಾರ ಹೂಡುತ್ತಿದ್ದರು. ಶೀತಾಲಹರಿ ಗ್ರಾಮಸ್ಥರ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಈಗಾಗಲೇ ಹತ್ತಾರು ಕುಟುಂಬಸ್ಥರು ಮಕ್ಕಳು, ಜಾನುವಾರುಗಳೊಂದಿಗೆ ಜಮೀನುಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ವಿದ್ಯುತ್‌, ಕುಡಿಯುವ ನೀರಿನ ಸೌಲಭ್ಯವಿಲ್ಲದಿದ್ದರೂ, ಜೀವ ಉಳಿದರೆ ಸಾಕಪ್ಪಾ ಎನ್ನುವಂತಾಗಿದೆ.

ಶೀತಾಲಹರಿ ಗ್ರಾಮದ ಸಮಸ್ಯೆಗಳ ನಿವಾರಣೆಗೆ ಸಂಬಂಧಿಸಿದ ತಹಶೀಲ್ದಾರ್‌ ಮತ್ತು ನೋಡಲ್‌ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಒಂದೆರಡು ದಿನಗಳಲ್ಲಿ ಸಮಸ್ಯೆ ಪರಿಹರಿಸಲಾಗುವುದು. 
 ಎಂ.ಸುಂದರೇಶ್‌ ಬಾಬು, ಜಿಲ್ಲಾಧಿಕಾರಿ

ಗ್ರಾಮದಲ್ಲಿ ಕೊರೊನಾ ವ್ಯಾಪಿಸಿದೆ ಎಂಬ ವದಂತಿಯಿಂದಾಗಿ ಖಾಸಗಿ ವೈದ್ಯರು ಚಿಕಿತ್ಸೆ ನಿರಾಕರಿಸುತ್ತಿದ್ದಾರೆ. ಆರೋಗ್ಯ ಇಲಾಖೆಯಿಂದಲೂ ಚಿಕಿತ್ಸೆ ಒದಗಿಸದ
ಕಾರಣ ಜನರಲ್ಲಿ ಸೋಂಕಿನ ಭೀತಿ ಹೆಚ್ಚುತ್ತಿದೆ. ಜತೆಗೆ ಗ್ರಾಮದ ಕಂಟೈನ್ಮೆಂಟ್‌ ಪ್ರದೇಶಕ್ಕೆ ಒಳಪಟ್ಟ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಅಗತ್ಯ ವಸ್ತು ಒದಗಿಸುತ್ತಿಲ್ಲ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಜನರು ತಾತ್ಕಾಲಿಕವಾಗಿ ಗ್ರಾಮ ತೊರೆಯುತ್ತಿದ್ದಾರೆ.
 ಸಿದ್ದು ವಡ್ಡರ್‌, ಗ್ರಾಮಸ್ಥ

●ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.