ವರ್ಗಾವಣೆ ಮಾರ್ಗಸೂಚಿ ಮಾರ್ಪಾಡಿಗೆ ಉಪನ್ಯಾಸಕರ ಆಗ್ರಹ
Team Udayavani, Feb 3, 2018, 10:56 AM IST
ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ವರ್ಗಾವಣೆ ಮಾರ್ಗಸೂಚಿಯಲ್ಲಿ ತುರ್ತಾಗಿ ಕೆಲವು ಮಾರ್ಪಾಡು ಮಾಡುವಂತೆ ಆಗ್ರಹಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಪಿಯು ಇಲಾಖೆ ನಿರ್ದೇಶಕರಿಗೆ ಮನವಿ
ಸಲ್ಲಿಸಲಾಗಿದೆ.
ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2007ರ ತಿದ್ದುಪಡಿ ಕಾಯ್ದೆ 2017ರ ಪರಿಚ್ಛೇದ 10(1)ರ ಅಡಿಯಲ್ಲಿ ಪತಿ-ಪತ್ನಿ ಪ್ರಕರಣದಡಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಕನಿಷ್ಠ ಸೇವಾ ಅನ್ವಯವಾಗುವುದಿಲ್ಲ ಎಂಬುದು
ಕಾಯ್ದೆಯಲ್ಲಿದ್ದರೂ, ವರ್ಗಾವಣೆ ಮಾರ್ಗಸೂಚಿಯಲ್ಲಿ ಕನಿಷ್ಠ ಸೇವಾವಧಿ 5 ವರ್ಷ ಎಂದು ನಮೂದಿಸಲಾಗಿದೆ. ಇದರಿಂದ ಪತಿ-ಪತ್ನಿ ಪ್ರಕರಣದಡಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ತೊಂದರೆಯಾಗುತ್ತದೆ ಇದನ್ನು ಮೂರು ವರ್ಷಕ್ಕೆ ಇಳಿಸಬೇಕು ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಆಗ್ರಹಿಸಿದ್ದಾರೆ. ವರ್ಗಾವಣೆ ಅರ್ಜಿ ಸಲ್ಲಿಸುವ ಕನಿಷ್ಠ ಸೇವಾರ್ಹತೆಯನ್ನು ಐದು ವರ್ಷ ಎಂದು ತಿಳಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಿಗದಿ ಪಡಿಸಿರುವ ಮಾರ್ಗಸೂಚಿಯಲ್ಲಿ 3 ವರ್ಷ ಎಂದಿದೆ. ಹೀಗಾಗಿ ಕನಿಷ್ಠ ಸೇವಾರ್ಹತೆಯನ್ನು 3 ವರ್ಷಕ್ಕೆ ಇಳಿಸಬೇಕು. ಹೆಚ್ಚುವರಿ ಉಪನ್ಯಾಸಕರ ವರ್ಗಾವಣೆ ಸಂಬಂಧಿಸಿದಂತೆ ಮಾರ್ಗಸೂಚಿಯಲ್ಲಿ ಯಾವುದೇ ಮಾಹಿತಿ ಇಲ್ಲ. ಹೆಚ್ಚುವರಿ ಉಪನ್ಯಾಸಕರಿಗೆ ಶೇ.5ರಂತೆ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ವರ್ಗಾವಣೆಗೆ
ಅರ್ಜಿ ಸಲ್ಲಿಸಲು ಇಲಾಖೆ ರಚಿಸಿರುವ ಅಂತರ್ಜಾಲ ತಂತ್ರಾಂಶ ಉಪನ್ಯಾಸಕರ ಸ್ನೇಹಿಯಾಗಿಲ್ಲ. ಅರ್ಜಿ ಸಲ್ಲಿಕೆಗೆ ಅಡ್ಡಿಯಾಗಿರುವ ತಾಂತ್ರಿಕ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪಿಯು ಉಪನ್ಯಾಸಕರ ವರ್ಗಾವಣೆ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಿದ್ದೇವೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಮುಗಿದ ನಂತರ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುತ್ತದೆ. ಉಪನ್ಯಾಸಕರ ಸಂಘದಿಂದ ನೀಡಿರುವ ಮನವಿ ಪರಿಶೀಲಿಸಲಾಗುವುದು.
ಸಿ.ಶಿಖಾ, ನಿರ್ದೇಶಕಿ, ಪಿಯು ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ