ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ


Team Udayavani, Jun 10, 2023, 1:21 PM IST

tejasvi surya

ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್ ಲೈನ್ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ, ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ರಾಜಕೀಯ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆಗಳು ಸಿಕ್ಕಿವೆ ಎಂದು ತಿಳಿಸಿದರು.

ಕಾನೂನು ಪ್ರಕೋಷ್ಠದವರು ಈ ಹಿನ್ನೆಲೆಯಲ್ಲಿ ಯೋಗೇಂದ್ರ ಮತ್ತು ಅವರ 100 ವಕೀಲರ ತಂಡವು ಸಹಾಯವಾಣಿ ಉದ್ಘಾಟಿಸುತ್ತಿದೆ ಎಂದು ಅವರು ತಿಳಿಸಿದರು. ಸದನದ ಒಳಗೆ ಮತ್ತು ಹೊರಗೆ ಇಂಥ ದೌರ್ನಜ್ಯದ ವಿರುದ್ಧ ಹೋರಾಟ ಸಂಘಟಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಹೋರಾಟದ ಮೂಲಕವೇ ಬಿಜೆಪಿ ಬೆಳೆದುಬಂದಿದೆ. ಈ ಪಕ್ಷದ ದಮನ ಇವತ್ತಿನದಲ್ಲ. ಇಂಥ ದ್ವೇಷವನ್ನು ಎದುರಿಸಿಯೇ ನಮ್ಮ ಪಕ್ಷ ಮುಂದುವರಿದಿದೆ. ನಮ್ಮ ಕಾರ್ಯಕರ್ತರು ವಿಶ್ವಾಸ- ಧೈರ್ಯ ಕಳೆದುಕೊಳ್ಳಬಾರದು. ಪಕ್ಷವು ಅನ್ಯಾಯ, ಅವ್ಯವಸ್ಥೆ ವಿರುದ್ಧ ಹೋರಾಟ ಮಾಡೋಣ ಎಂದು ಕಿವಿಮಾತು ಮತ್ತು ಧೈರ್ಯ ಹೇಳಿದರು. ದೌರ್ಜನ್ಯ ನಡೆದರೆ, ಸುಳ್ಳು ಕೇಸು ಹಾಕಿದರೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತರ ಒಳಿತು ಮತ್ತು ಅವರ ಹಕ್ಕುಗಳ ರಕ್ಷಣೆಯ ದೃಷ್ಟಿಯಿಂದ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಹೈಕೋರ್ಟ್ ಪೀಠವಿರುವ ಎಲ್ಲ ಜಾಗಗಳಲ್ಲಿ ಕಾನೂನು ಪ್ರಕೋಷ್ಠದ ಕಾರ್ಯಕರ್ತರು ಮತ್ತು ವಕೀಲರ ತಂಡದ ರಚನೆ ಆಗಿದೆ. ರಾಜ್ಯದ ನೂರಕ್ಕೂ ಹೆಚ್ಚು ವಕೀಲರು ಈ ಸಹಾಯವಾಣಿಯ ನಿರ್ವಹಣೆ ಮಾಡಲು ಸಹಕರಿಸುತ್ತಾರೆ ಎಂದು ತಿಳಿಸಿದರು.

ನಮ್ಮ ಕಾರ್ಯಕರ್ತರು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರೆ ಅವರು ಕೆಲಸ ಕಳಕೊಳ್ಳುವಂತೆ ಮಾಡುವ ಪ್ರಯತ್ನ ಹಿಂದೆ ಆಗಿತ್ತು ಎಂದು ಆರೋಪಿಸಿದರು. ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಆದಾಗ ಎಫ್‍ಐಆರ್ ನೋಂದಣಿ ವೇಳೆ ವಿಳಂಬ ಮಾಡಲಾಗುತ್ತಿತ್ತು. ದೋಷಾರೋಪ ಪಟ್ಟಿ ಸಲ್ಲಿಸುವಾಗ ಅದನ್ನು ಸಮರ್ಪಕವಾಗಿ ಸಲ್ಲಿಸುತ್ತಿರಲಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ಸಿನ ಈ ಸರಕಾರದಲ್ಲೂ ಪ್ರಮುಖ ಸಚಿವರು ಬ್ಯಾಕ್‍ಗ್ರೌಂಡ್ ಸೆಟ್ಟಿಂಗ್ ಮಾಡುವ ಹೇಳಿಕೆ ಕೊಡುತ್ತಿದ್ದಾರೆ. ನಾಳೆ ರಾಜಕೀಯ ದ್ವೇಷದಿಂದ ಮಾಡುವ ಬಂಧನಗಳಿಗೆ ಈಗಿನಿಂದ ವೇದಿಕೆ ಸಿದ್ಧಪಡಿಸುವ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯದ ಗೃಹಸಚಿವರು ಕರಾವಳಿ ಭಾಗದಲ್ಲಿ ಅತ್ಯಂತ ಪೂರ್ವಾಗ್ರಹದಿಂದ ಹೇಳಿಕೆ ಕೊಟ್ಟಿದ್ದಾರೆ. ಆ ಭಾಗದಲ್ಲಿ ಕೆಲಸ ಮಾಡುವ ಸಾಂಸ್ಕೃತಿಕ ಸಂಘಟನೆಗಳನ್ನು ಹತ್ತಿಕ್ಕಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸುವುದಾಗಿ ಹೇಳಿದ್ದಾರೆ ಎಂದು ಆಕ್ಷೇಪಿಸಿದರು.

ಹಬ್ಬಗಳ ಮೆರವಣಿಗೆಗೂ ಅವಕಾಶ ಇಲ್ಲ: ಸಂವಿಧಾನದಲ್ಲಿ ರಾಜಕೀಯ ಪಕ್ಷಕ್ಕೆ ಕೊಟ್ಟ ಅವಕಾಶದಂತೆ ನಡೆದುಕೊಂಡರೂ ಸುಳ್ಳು ಕೇಸು ಹಾಕಿದ್ದರು. ಗಣಪತಿ ಹಬ್ಬ, ಯುಗಾದಿ, ರಾಮನವಮಿ, ಹನುಮ ಜಯಂತಿಯ ಸಂದರ್ಭದಲ್ಲೂ ಮೆರವಣಿಗೆಗೆ ಅವಕಾಶ ಕೊಟ್ಟಿರಲಿಲ್ಲ. ಆಗಲೂ ಕೋರ್ಟಿಗೆ ಹೋಗಿ ಅನುಮತಿ ಪಡೆದು ರ್ಯಾಲಿ, ಮೆರವಣಿಗೆ, ಶೋಭಾಯಾತ್ರೆ ಮಾಡಬೇಕಾದ ಪರಿಸ್ಥಿತಿ ಬಂದಿತ್ತು ಎಂದು ತೇಜಸ್ವಿ ಸೂರ್ಯ ಅವರು ಆರೋಪಿಸಿದರು.

ಕಾಂಗ್ರೆಸ್ ಸರಕಾರವು ಈ ಹಿಂದಿನ ಅವಧಿಯಲ್ಲಿ ಅಧಿಕಾರದಲ್ಲಿ ಇದ್ದಾಗ ಫೇಸ್ ಬುಕ್‍ನಲ್ಲಿ ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಟೀಕಿಸಿ ಪೋಸ್ಟ್ ಹಾಕಿದ ಕಾರಣಕ್ಕೆ ಕೇಸು ಹಾಕಿಸಿ ಅವರನ್ನು ಬಂಧಿಸಲಾಗುತ್ತಿತ್ತು. ವಾಟ್ಸ್ ಆ್ಯಪ್‍ಗೆ ಕಾರ್ಟೂನ್, ಮೀಮ್ ಅನ್ನು ಹಂಚಿಕೊಂಡಾಗ ಸರಕಾರದ ಕಡೆಯಿಂದ ಪೊಲೀಸರನ್ನು ಕಳಿಸಿ ಬಂಧಿಸುವ ಕೆಲಸ ನಡೆದಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.