ಪರಿಷತ್‌ ಫ‌ಲಿತಾಂಶ: ಜೆಡಿಎಸ್‌2 ಬಿಜೆಪಿ 1


Team Udayavani, Jun 13, 2018, 6:00 AM IST

z-33.jpg

ಕಲಬುರಗಿ/ಮೈಸೂರು/ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಮೇಲುಗೈ ಸಾಧಿಸಿವೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೇಲ್ಮನೆ ಉಪ ಸಭಾಪತಿ, ಜೆಡಿಎಸ್‌ನ ಮರಿತಿಬ್ಬೇಗೌಡ ಸತತ ನಾಲ್ಕನೇ ಬಾರಿಗೆ ಗೆಲುವಿನ ನಗೆ ಬೀರಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಎಸ್‌.ಎಲ್‌.ಭೋಜೇಗೌಡ ಮೊದಲ ಜಯ ಸಾಧಿಸಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಗೆಲ್ಲುವ ಮೂಲಕ ವಿಧಾನ ಸಭೆಯ ಸೋಲಿನ ನೋವನ್ನು ಮರೆತಿದ್ದಾರೆ. 

ಉಳಿದ ಮೂರು ಕ್ಷೇತ್ರಗಳ ಮತ ಎಣಿಕೆ ಮಧ್ಯರಾತ್ರಿ ತನಕವೂ ಮುಂದುವರಿದಿದ್ದು, ಈಶಾನ್ಯ ಪದವೀಧರ ಮತಕ್ಷೇತ್ರದಲ್ಲಿ ಬಿಜೆಪಿಯ ಕೆ.ಬಿ.ಶ್ರೀನಿವಾಸ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ ಮುನ್ನಡೆ ಕಾಯ್ದು ಕೊಂಡಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್‌ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಎಸ್‌.ಪಿ.ದಿನೇಶ್‌ ನಂತರದ ಸ್ಥಾನದಲ್ಲಿದ್ದಾರೆ.

ನಾರಾಯಣಸ್ವಾಮಿ ಗೆಲುವು: ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ಥ್ಯದ ಮತ ಎಣಿಕೆಯಲ್ಲಿ ಗೆಲುವಿಗೆ ಅಗತ್ಯವಾದಷ್ಟು ಮತ ಪಡೆಯದ ಕಾರಣ ಎರಡನೇ ಪ್ರಾಶಸ್ತ್ಯದ ಮತ ಎಣಿಕೆ ಮಾಡಲಾಯಿತು. ಆ ಸುತ್ತಿನಲ್ಲಿ 2 ಸಾವಿರ ಮತಗಳ ಅಂತರದಿಂದ ನಾರಾಯಣಸ್ವಾಮಿ ಗೆಲುವು ಸಾಧಿಸಿದರೆ, ಇವರಿಗೆ ಪೈಪೋಟಿ ನೀಡಿದ್ದ ಜೆಡಿಎಸ್‌ನ ರಮೇಶ್‌ಬಾಬು ಪರಾಭವಗೊಂಡಿದ್ದಾರೆ. ಆ ಮೂಲಕ ಬಿಜೆಪಿ ಕ್ಷೇತ್ರವನ್ನು ಮತ್ತೆ ವಶಕ್ಕೆ ಪಡೆದಿದೆ. ಈ ಮಧ್ಯೆ, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಅವರು 1,700 ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಮತ ಎಣಿಕೆ ಕಾರ್ಯ ಮುಂದುವರಿದಿದೆ. ತಡರಾತ್ರಿಗೆ ಫ‌ಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಈ ಕ್ಷೇತ್ರವನ್ನು ಹಿಂದೆ ಬಿಜೆಪಿಯ ರಾಮಚಂದ್ರಗೌಡ ಪ್ರತಿನಿಧಿಸುತ್ತಿದ್ದರು. 

ಮರಿತಿಬ್ಬೇಗೌಡ ಪುನರಾಯ್ಕೆ: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಪ್ರಾಬಲ್ಯ ಮೆರೆದಿದ್ದು, ಮೇಲ್ಮನೆ ಉಪ ಸಭಾಪತಿ ಮರಿತಿಬ್ಬೇಗೌಡ ಸತತ ನಾಲ್ಕನೇ ಬಾರಿಗೆ ಗೆಲುವಿನ ನಗೆ ಬೀರಿದ್ದಾರೆ. ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿ 7933 ಮತಗಳ ನಿಗದಿತ ಕೋಟಾ ತಲುಪದಿದ್ದರೂ, ಅಲ್ಪ ಮುನ್ನಡೆ
ಕಾಯ್ದುಕೊಂಡಿದ್ದ ಮರಿತಿಬ್ಬೇಗೌಡ ಅವರು, ದ್ವಿತೀಯ ಪ್ರಾಶಸ್ತ್ಯದ ಮತಗಳನ್ನು ಪಡೆದು, 489 ಮತಗಳ ಮುನ್ನಡೆ ಪಡೆದು ಗೆಲುವು ಸಾಧಿಸಿದರು. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಎಸ್‌.ಎಲ್‌.ಭೋಜೇಗೌಡ 8647 ಮತಗಳ ಅಂತರದಿಂದ ಅಂತಿಮವಾಗಿ ಗೆಲುವು
ಸಾಧಿಸಿದ್ದಾರೆ. ಹಾಲಿ ಸದಸ್ಯ ಬಿಜೆಪಿಯ ಕ್ಯಾ.ಗಣೇಶ್‌ ಕಾರ್ಣಿಕ್‌ ಸೋಲುಂಡಿದ್ದಾರೆ. 11ನೇ ಸುತ್ತಿನ ಮತ ಎಣಿಕೆ ಮುಗಿದಾಗ ಎಸ್‌.ಎಲ್‌.ಭೋಜೇಗೌಡ 7,310 ಮತಗಳಿ ಸಿದ್ದರೆ, ಕ್ಯಾ.ಗಣೇಶ್‌ ಕಾರ್ಣಿಕ್‌ 5,812 ಮತ ಗಳಿಸಿದ್ದಾರೆ. ಬಿಜೆಪಿ ಮುನ್ನಡೆ: ಈಶಾನ್ಯ ಪದವೀಧರ ಮತಕ್ಷೇತ್ರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ನಂತರ 583 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಕೆ.ಬಿ. ಶ್ರೀನಿವಾಸ ಮುನ್ನಡೆ ಸಾಧಿಸಿದ್ದಾರೆ. ಅವರು 11,661 ಮತ ಪಡೆದರೆ, ಜೆಡಿಎಸ್‌ನ ಎನ್‌. ಪ್ರತಾಪರೆಡ್ಡಿ 11,078 ಹಾಗೂ ಕಾಂಗ್ರೆಸ್‌ ಅಭ್ಯರ್ಥಿ 9,478 ಮತ ಪಡೆದು ನಂತರದ ಸ್ಥಾನಗಳಲ್ಲಿದ್ದಾರೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.