ಸಿಎಂ ರಾಜೀನಾಮೆ ನೀಡಲಿ
Team Udayavani, Jul 14, 2019, 3:06 AM IST
ಉಡುಪಿ: ರಾಜ್ಯದ ಜನತೆಯ ಹಿತದೃಷ್ಟಿಯಿಂದ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ತಕ್ಷಣವೇ ರಾಜೀನಾಮೇ ನೀಡಬೇಕೆಂದು ಬಿಜೆಪಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಪ್ರಿಂಕೋರ್ಟ್ ಆದೇಶವನ್ನು ಸ್ಪೀಕರ್ ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ರಮೇಶ್ ಕುಮಾರ್ ಅವರ ಹಿರಿತನದ ಬಗ್ಗೆ ಗೌರವವಿದೆ. ಆದರೆ, ಯಡಿಯೂರಪ್ಪ ವಿಶ್ವಾಸಮತ ಕೇಳುವ ಸಂದರ್ಭದಲ್ಲಿ ತಡರಾತ್ರಿ ಸುಪ್ರೀಂಕೋರ್ಟ್ ಬಾಗಿಲು ಬಡಿದು 48 ಗಂಟೆಗಳಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರಿಗೆ ಸೂಚಿಸಲಾಗಿತ್ತು.
ಆ ಆದೇಶವನ್ನು ಅಂದು ಪಾಲನೆ ಮಾಡಲಾಗಿತ್ತು. ಆದರೆ, ಈಗ ಸುಪ್ರೀಂ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ, ಸ್ವೀಕರ್ ಪರಮಾಧಿಕಾರ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಈ ಮಾತುಗಳು ಆಶ್ಚರ್ಯ ಮೂಡಿಸುತ್ತಿವೆ ಎಂದರು.
ಈಗಿನ ಸರಕಾರದ ಮೇಲೆ ವಿಶ್ವಾಸ ಇಲ್ಲದ ಕಾರಣ ಅದೇ ಪಕ್ಷದ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಶಾಸಕರೇ ತಮ್ಮ ಸರಕಾರ ಹೋದರೆ ಸಾಕು ಎನ್ನುತ್ತಿದ್ದಾರೆ. ಜೆಡಿಎಸ್ ಪಕ್ಷ ಕಾಂಗ್ರೆಸ್ ಪಕ್ಷವನ್ನು ನಡು ನೀರಿನಲ್ಲಿ ಕೈಬಿಡುತ್ತದೆ ಎಂದು ಅಂದು ಯಡಿಯೂರಪ್ಪ ಹೇಳಿದ ಮಾತು ನಿಜವಾಗಿದೆ. ಅವರದೇ ಶಾಸಕರು ಮುಂಬೈಗೆ ಹೋದಾಗ ಡಿಕೆಶಿ ಅಸಹಾಯಕರಾಗಿದ್ದರು ಎಂದು ಹೇಳಿದರು.
ಶಾಸಕರ ಮೇಲೆ ಎಸಿಬಿ ದಾಳಿ ಮಾಡಿ ಅವರ ಮೇಲೆ ಒತ್ತಡ ಹೇರುವ ಕೆಲಸ ಮಾಡಲಾಗುತ್ತಿದೆ. ಇದೇ ಕಾರಣಕ್ಕೆ ಎಸಿಬಿ ಮುಖ್ಯಸ್ಥರನ್ನಾಗಿ ನಿಂಬಾರ್ ಅವರನ್ನು ನೇಮಕ ಮಾಡಲಾಗಿದೆ. ಆ ಮೂಲಕ ರಾಜೀನಾಮೆ ನೀಡಿದ ಶಾಸಕರ ಮೇಲೆ ಒತ್ತಡ ಹೇರಲು ಇದನ್ನು ಬಳಸಲಾಗುತ್ತಿದೆ. ಇದು ರಾಜ್ಯದ ದುರಂತ ರಾಜಕಾರಣ. ಇಂತಹ ರಾಜಕಾರಣ ಖಂಡನೀಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ