ಜನಸ್ಪಂದನ ಬದಲು ಜಲಸ್ಪಂದನ ಮಾಡಲಿ: ಡಿಕೆಶಿ ವ್ಯಂಗ್ಯ
Team Udayavani, Sep 8, 2022, 10:32 PM IST
ಬೆಂಗಳೂರು: ರಾಜ್ಯ ಸರಕಾರ ಬೆಂಗಳೂರಿನ ಐಟಿ ಕಾರಿಡಾರ್ನಲ್ಲಿ ಜಲಸಂಚಾರಕ್ಕಾಗಿ ಬೋಟ್ ಫ್ಯಾಕ್ಟರಿ ಆರಂಭಿಸುವುದು ಉತ್ತಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ಜನಸ್ಪಂದನಕ್ಕಿಂತ ಮೊದಲು ಜಲಸ್ಪಂದನ ಮಾಡಲಿ ಎಂದು ವ್ಯಂಗ್ಯವಾಡಿದರು.
ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ನಮ್ಮ ಸರಕಾರಕ್ಕೆ ಬೆಂಗಳೂರಿನ ಬೆಲೆ ತಿಳಿದಿಲ್ಲ. ದೇಶಕ್ಕೆ ಶೇ.30ರಷ್ಟು ಆದಾಯ ಇಲ್ಲಿಂದಲೇ ಹೋಗುತ್ತದೆ. ಬಿಜೆಪಿ ಸರಕಾರ ಹೆಮ್ಮೆಯ ಈ ನಗರದ ಮರ್ಯಾದೆ ಹಾಳು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯದು ಜನೋತ್ಸವ ಅಲ್ಲ ಜಲೋತ್ಸವ. ಇಡೀ ಬೆಂಗಳೂರು ನೀರಿನಲ್ಲಿ ಮುಳುಗಿದೆ. ಇಂತಹ ಸಂದರ್ಭದಲ್ಲಿ ಉತ್ಸವ ಬೇಕಾ? ಮೂರು ವರ್ಷಗಳಿಂದ ಅಧಿಕಾರದಲ್ಲಿದ್ದರೂ ಏನೂ ಮಾಡದೆ ಈಗ ಹಿಂದಿನ ಸರಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಇವರು ಮಾಡಿದ್ದಾದರೂ ಏನು?– ಎಂ.ಬಿ.ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!