NDA ಯಿಂದ ಆಚೆ ಬಂದು ಕುಮಾರಸ್ವಾಮಿ ನನಗೆ ಬೆಂಬಲ ನೀಡಲಿ: ಡಿ.ಕೆ.ಶಿವಕುಮಾರ್
ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ...
Team Udayavani, Nov 4, 2023, 5:45 PM IST
ಬೆಂಗಳೂರು: “ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದವವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಎಚ್,ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
‘ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ’ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಕುಮಾರಕೃಪಾ ಅತಿಥಿ ಗೃಹದ ಬಳಿ ಶನಿವಾರ ಕೇಳಿದಾಗ ಈ ರೀತಿ ಉತ್ತರಿಸಿದರು.
“ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು