ರಾಮಮಂದಿರಕ್ಕೆ ಸಂಸತ್, ರಾಹುಲ್ ಬೆಂಬಲ ನೀಡಲಿ
Team Udayavani, Jun 1, 2019, 3:00 AM IST
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಂಸತ್ ಅನುಮೋದನೆ ನೀಡಬೇಕು. ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೆಂಬಲ ಕೊಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದೆಯಾದರೂ ಸಂಸತ್ತೇ ಎಲ್ಲಕ್ಕಿಂತ ಮಿಗಿಲು. ಅಲ್ಲಿ ಪ್ರಧಾನಿ ಮೋದಿಯವರು ಇದಕ್ಕೆ ಅವಕಾಶ ಕೊಡಬೇಕು, ರಾಹುಲ್ ಗಾಂಧಿಯವರು ಬೆಂಬಲಿಸಬೇಕು ಎಂದರು.
ಬಿಜೆಪಿ ಗೆಲುವು ಏಕಾಯಿತು?: ಚುನಾವಣೆ ಕುರಿತು ಕೇಳಿದಾಗ, ಬೇರೆ ಪಕ್ಷಗಳು ಬಿಜೆಪಿಯನ್ನು ಕೋಮುವಾದಿ ಎಂದು ಬಿಂಬಿಸಲು ಯತ್ನಿಸಿದವು. ವಾಸ್ತವದಲ್ಲಿ ಎಲ್ಲ ಪಕ್ಷಗಳು ತಮ್ಮ ಯೋಜನೆ, ಅಭಿವೃದ್ಧಿ ಕುರಿತು ಚುನಾವಣೆ ಪ್ರಚಾರ ನಡೆಸಬೇಕಿತ್ತು.
ಇದರ ಬದಲು ನಿಂದೆ ಅತಿಯಾಯಿತು. ಧರ್ಮದ ವಿಚಾರವನ್ನು ಪ್ರಸ್ತಾವಿಸುವುದು ಬೇಡವಿತ್ತು. ಇದರಿಂದ ಹಿಂದುಗಳಲ್ಲಿ ಹಿಂದುತ್ವದ ಜಾಗೃತವಾಗಿ ಒಂದೇ ಪಕ್ಷ ಹೆಚ್ಚು ಸ್ಥಾನ ಗಳಿಸುವಂತಾಯಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು