ಸಿದ್ದು ಮಾತು ಕೇಳುವ ಅಧಿಕಾರಿ ಮನೆಗೆ ಹೋಗಲಿ
Team Udayavani, Nov 7, 2019, 3:04 AM IST
ಬಾಗಲಕೋಟೆ: “ಸರ್ಕಾರದ ಆದೇಶ ಏನಿದೆಯೋ ಅದನ್ನು ಪಾಲಿಸಿ. ಸಿದ್ದರಾಮಯ್ಯನವರ ಮಾತನ್ನು ಕೇಳಿ, ಟಿಪ್ಪು ಜಯಂತಿ ಆಚರಿಸಬೇಡಿ. ಅವರ ಮಾತು ಕೇಳುವುದಾದರೆ ನೀವು ರಜೆ ಹಾಕಿ ಮನೆಗೆ ಹೋಗಿ’ ಎಂದು ಮೈಸೂರು ಜಿಲ್ಲಾಡಳಿತದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ಖಡಕ್ ಆಗಿ ಆದೇಶ ನೀಡಿದ್ದಾರೆ.
ಇಲ್ಲಿನ ತೋಟಗಾರಿಕೆ ವಿವಿಯಲ್ಲಿ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸುತ್ತಿದ್ದರು. ಈ ವೇಳೆ, ಮೈಸೂರು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಸಚಿವರಿಗೆ ದೂರವಾಣಿ ಕರೆ ಮಾಡಿ, ಟಿಪ್ಪು ಜಯಂತಿ ಆಚರಣೆ ಕುರಿತು ಕೇಳಿದರು. ಈ ವೇಳೆ, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಚಿವರು, “ಸರ್ಕಾರದ ಆದೇಶ ಏನಿದೆಯೋ ಅದನ್ನು ಪಾಲಿಸಿ. ಯಾರ ಮಾತೂ ಕೇಳಬೇಡಿ.
ಸಿದ್ದರಾಮಯ್ಯ ವಿಪಕ್ಷ ನಾಯಕರೆಂದು ಅವರ ಮಾತನ್ನು ಕೇಳಿ, ಟಿಪ್ಪು ಜಯಂತಿ ಆಚರಿಸಬೇಡಿ. ಅವರ ಮಾತು ಕೇಳುವುದಾದರೆ ನೀವು ರಜೆ ಹಾಕಿ ಮನೆಗೆ ಹೋಗಿ’ ಎಂದು ಗರಂ ಆದರು. “ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಮೊದಲಿದ್ದ ಯಾವ ಅಧಿಕಾರಿಯನ್ನೂ ಬದಲಾಯಿಸಿಲ್ಲ. ಅವರಿಂದಲೇ ಮೈಸೂರು ದಸರಾ ಸಹಿತ ಎಲ್ಲ ಕೆಲಸ-ಕಾರ್ಯ ಮಾಡಿಸಲಾಗಿದೆ. ಆದರೆ, ಸರ್ಕಾರದ ಆದೇಶವನ್ನೂ ಉಲ್ಲಂಘಿಸಿದರೆ ಸುಮ್ಮನಿರಬೇಕೇ’ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ