ತುರ್ತು ಆರೋಗ್ಯ ಸೇವೆಗೆ ಅಪ್ರಂಟಿಸ್‌ಶಿಪ್‌ ಜಾರಿಯಾಗಲಿ


Team Udayavani, May 6, 2021, 7:20 AM IST

ತುರ್ತು ಆರೋಗ್ಯ ಸೇವೆಗೆ ಅಪ್ರಂಟಿಸ್‌ಶಿಪ್‌ ಜಾರಿಯಾಗಲಿ

ಬೆಂಗಳೂರು: ಕೋವಿಡ್ ಸಮಸ್ಯೆಯಿಂದ ಸೃಷ್ಟಿಯಾಗುತ್ತಿರುವ ಆರೋಗ್ಯ ತುರ್ತು ಪರಿಸ್ಥಿತಿ ನಿಭಾವಣೆಗೆ ಆಸಕ್ತರಿಗೆ ನರ್ಸಿಂಗ್‌ನ ಮೂಲ ತರಬೇತಿ ನೀಡಿ ಅಪ್ರಂಟಿಸ್‌ಶಿಪ್‌ ವ್ಯವಸ್ಥೆ  ಜಾರಿಗೆ ತರಬೇಕು ಎಂಬ ಆಗ್ರಹ ವೈದ್ಯ ವಲಯದಿಂದ ಕೇಳಿಬರುತ್ತಿದೆ.

ರಾಜ್ಯದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈ ಒತ್ತಡ ವನ್ನು ನಿಭಾ ಯಿಸಲು ಈಗಿನ ವೈದ್ಯಕೀಯ ವ್ಯವಸ್ಥೆ ಹರ ಸಾಹಸ ಪಡುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ನರ್ಸ್‌, ಪ್ಯಾರಾ ಮೆಡಿಕಲ್‌ ಹಾಗೂ ಮತ್ತಿತರ ಸಹಾ ಯಕ ಸಿಬಂದಿ ಕೊರತೆ ಕಾಡುತ್ತಿದೆ. ಹೀಗಾಗಿ ವೈದ್ಯ ಕೀಯ ಪರಿಭಾಷೆ ಅರ್ಥೈಸಿಕೊಳ್ಳಬಲ್ಲವರಿಗೆ ಹಾಗೂ ರೋಗಿಗಳಿಗೆ ಉಪಚಾರ ಮಾಡಬಲ್ಲವ ರಿಗೆ ಅಲ್ಪಾವಧಿ ತರಬೇತಿಗಳನ್ನು ನೀಡಿ,  ಪ್ರಮಾಣ  ಪತ್ರ  ನೀಡುವುದಲ್ಲದೇ, ಅವ ರನ್ನು ಸಕ್ರಿಯವಾಗಿ ಕೋವಿಡ್‌ ಸೋಂಕಿತರ ಆರೈಕೆಗೆ ಬಳಸಿಕೊಳ್ಳಬೇಕು. ಈ ವ್ಯವಸ್ಥೆಯನ್ನು ಖಾಸಗಿ ಆಸ್ಪತ್ರೆಗಳ ಮೂಲಕ ಸರಕಾರವೇ ನಿರ್ವ ಹಿಸ ಬೇಕು. ಖಾಸಗಿ ಆಸ್ಪತ್ರೆಗಳು ಹಾಗೂ ಸರಕಾರ ಜತೆಗೂಡಿ ಇವರಿಗೆ ಸಂಭಾವನೆ ನೀಡುವಂತಾಗ ಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಅಪ್ರಂಟಿಸ್‌ಶಿಪ್‌ ವ್ಯವಸ್ಥೆ :

ರಾಜ್ಯ ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯದಲ್ಲಿ ಅಪ್ರಂಟಿಸ್‌ಶಿಪ್‌ ಕಾಯ್ದೆ 1961ರನ್ವಯ ಕೈಗಾರಿಕೆಗಳ ತುರ್ತು ಆವ್ಯಶ  ಕತೆಗೆ ಅನುಗುಣವಾಗಿ ಅಪ್ರಂಟಿಸ್‌ಶಿಪ್‌  ಗಳನ್ನು ಅಲ್ಪಾವಧಿ ತರಬೇತಿ ನೀಡಿ ನೇಮಕ ಮಾಡಿಕೊಳ್ಳಬಹುದು. ಐಟಿಐ ಆದವರಿಗೆ ಕೈಗಾರಿಕೆಗಳಲ್ಲಿ ಅಪ್ರಂಟಿಶಿಪ್‌ ಅಡಿ ತರಬೇತಿ ನೀಡಲಾಗುತ್ತದೆ. ಆರೋಗ್ಯ ತುರ್ತು ಪರಿಸ್ಥಿತಿಗೆ ಅನ್ವಯವಾಗಿ ಅಲ್ಪಾವಧಿಯ ವೈದ್ಯಕೀಯ ತರಬೇತಿ ನೀಡಿ, ಕೊರೊನಾ ಆರೈಕೆಯ ಸೇವೆಗೆ ಹೆಚ್ಚೆಚ್ಚು ಯುವ ಪೀಳಿಗೆಯನ್ನು ಬಳಸುವುದು ಸೂಕ್ತ ಎಂದು ವೈದ್ಯಕೀಯ ಕ್ಷೇತ್ರದ ಅನುಭವಿಯೊಬ್ಬರು ಮಾಹಿತಿ ನೀಡಿದರು.

ಗುಣಮುಖರಾದವರ ಸೇವೆ :

ಕೋವಿಡ್‌ ಪಾಸಿಟಿವ್‌ ಬಂದು ಗುಣಮುಖ ಹೊಂದಿದವರಲ್ಲಿ ಆ್ಯಂಟಿ ಬಾಡೀಸ್‌(ಪ್ರತಿಕಾಯ ಗುಣ), ದೇಹದಲ್ಲಿ ನೈಸರ್ಗಿಕ ಸೃಷ್ಟಿಯಾಗಿರುವ ರೋಗನಿರೋಧಕ ಶಕ್ತಿಯೂ ಹೆಚ್ಚಿರುತ್ತದೆ. ಇಂಥವರನ್ನು ಸರಕಾರ ಕೋವಿಡ್‌ ಸೇವೆಗೆ ಹೆಚ್ಚೆಚ್ಚು ಬಳಸಿಕೊಳ್ಳಬೇಕು. ಸಹಾಯಕರಾಗಿ ಅಥವಾ ಪೂರಕ ಸಿಬಂದಿಯಾಗಿಯೂ ಬಳಸಬಹುದು. ಮೂರು ತಿಂಗಳು ಅವರಿಗೆ ಕೊರೊನಾ ಬರುತ್ತದೆ ಎನ್ನುವ ಭಯವಿಲ್ಲ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರಿಂದ ಸಾಕಷ್ಟು  ಪ್ರಯೋಜನವಿದೆ ಎಂಬ ಬಗ್ಗೆ ಸರ್ಕಾರಕ್ಕೆ ಸಲಹೆ ರೂಪದಲ್ಲಿ ನೀಡಿರುವುದಾಗಿ ರಾಜೀವ್‌ ಗಾಂಧಿ ಅರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್‌.ಸಚ್ಚಿದಾನಂದ ಮಾಹಿತಿ ನೀಡಿದರು.

ವೈದ್ಯರು, ನರ್ಸ್‌ ಗಳ ಕೊರತೆ ನೀಗಿಸಲು ಎಂಬಿಬಿಎಸ್‌ ಪದವಿ ಪಡೆದು ವೃತ್ತಿ ಮಾಡದೇ ಇರುವವರು ಅಥವಾ ವೈದ್ಯರಾಗಿ ವಿದೇಶ ಗಳಲ್ಲಿ  ಸೇವೆ ಸಲ್ಲಿಸಿ ವಾಪಸ್‌ ಬಂದಿರು ವವ ರಿಗೆ, ನರ್ಸಿಂಗ್‌ ಕೋರ್ಸ್‌ ಮುಗಿಸಿ ಶುಶ್ರೂಷಕ ರಾಗಿ ಸೇವೆ ಸಲ್ಲಿಸದೇ ಇರುವವರನ್ನು ನೇಮಕ ಮಾಡಿಕೊಂಡು, ಅಲ್ಪಾವಧಿಯ ನಿರ್ದಿಷ್ಟ ತರಬೇತಿ ನೀಡಿ, ತುರ್ತು ಸೇವೆಗೆ ಬಳಸಿಕೊಳ್ಳಬಹುದು. ಡಾ.ಎಚ್‌.ಸುದರ್ಶನ್‌ ಬಲ್ಲಾಳ್‌ಅಧ್ಯಕ್ಷರು, ಮಣಿಪಾಲ್‌ ಆಸ್ಪತ್ರೆಗಳ ಸಮೂಹ

ನಾವು ಶೇ.50ರಷ್ಟು ಮಾನವ ಸಂಪನ್ಮೂಲ ಕೊರತೆ ಅನುಭವಿಸುತ್ತಿದ್ದೇವೆ. ಹೀಗಾಗಿ ವೈದ್ಯಕೀಯ ಪರಿಭಾಷೆ ಬಲ್ಲವರಿಗೆ ತರಬೇತಿ ನೀಡಿ, ಅರೆವೈದ್ಯಕೀಯ ಸಿಬಂದಿ ವರ್ಗಕ್ಕೆ ಸಹಾಯಕರಾಗಿ ನೇಮಿಸಬಹುದು. ಈ ಬಗ್ಗೆ ರಾಜೀವ್‌ಗಾಂಧಿ ಆರೋಗ್ಯ ವಿವಿಗೆ ಮಾಹಿತಿ ನೀಡಿದ್ದೇವೆ. ಡಾ.ಎಚ್‌.ಎಂ.ಪ್ರಸನ್ನ , ಅಧ್ಯಕ್ಷ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್‌ ಹೋಂಗಳ ಸಂಘ(ಫ‌ನಾ)

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.