ಕಾಂಗ್ರೆಸ್‌ ಜಾತ್ಯಾತೀತ ಪಕ್ಷವಾಗಿಯೇ ಉಳಿಯಲಿ


Team Udayavani, Aug 13, 2018, 11:46 AM IST

m6-congress.jpg

ಮೈಸೂರು: ಜಾತ್ಯಾತೀತ ಪಕ್ಷವಾಗಿರುವ ಕಾಂಗ್ರೆಸ್‌ ಜಾತ್ಯಾತೀತ ಪಕ್ಷವಾಗಿಯೇ ಉಳಿಯಬೇಕಿದ್ದು, ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಳ್ಳಬೇಡಿ ಎಂದು ಶಾಸಕ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದರು. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಯಾರಿಗೂ ಗೊತ್ತಿಲ್ಲದಂತೆ ವಿಜಯಪುರದಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು. ವಿಜಯಪುರದ ಬಿಜೆಪಿ ಜಿಲ್ಲಾಧ್ಯಕ್ಷನನ್ನು ರಾತ್ರೋರಾತ್ರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಂಡು ನಾಗಠಾಣಾ ಕ್ಷೇತ್ರದ ಟಿಕೆಟ್‌ ನೀಡಲಾಯಿತು.

ಕಾಂಗ್ರೆಸ್‌ನ ಒಬ್ಬ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಬಿಜೆಪಿ-ಕಾಂಗ್ರೆಸ್‌ ನಡುವೆ ಈ ರೀತಿ ಹೊಂದಾಣಿಕೆ ನಡೆದಿದ್ದು, ಇದು ಜನರಿಗೆ ಗೊತ್ತಾಗಬೇಕಿದೆ. ಚುನಾವಣೆಗೂ ಮುನ್ನ ನಮ್ಮನ್ನು ಬಿಜೆಪಿಯ ಬಿ ಟೀಮ್‌ ಎಂದು ಕರೆಯಲಾಗುತ್ತಿತ್ತು. ಆದರೆ ನಾವು ಬಿಜೆಪಿ ಜತೆ ಹೋಗಿ ಸರ್ಕಾರ ರಚಿಸಲಿಲ್ಲ.

ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್‌ಗೆ ಸಹಕರಿಸಿದ್ದು ನಿಜ, ಮತದಾರರು ಯಾರ ಮೇಲಿನ ಬೇಸರದಿಂದ ಜೆಡಿಎಸ್‌ಗೆ ಮತ ಹಾಕಿದ್ದಾರೆ. ಆದರೆ ವಿಜಯಪುರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ರಾಜಕೀಯ ತಂತ್ರಗಾರಿಕೆ ಕಾರಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಹೀಗಾಗಿ ಕಾಂಗ್ರೆಸ್ಸಿಗರು ಜಾತ್ಯತೀತರಾಗಿರಿ, ಅದನ್ನು ಮಿಕ್ಸ್‌ ಮಾಡಬೇಡಿ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಾಂತೀಯ ಪಕ್ಷಕ್ಕೆ ಒಲವು: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಪ್ರಾಂತೀಯ ಪಕ್ಷಗಳು ಅಧಿಕಾರದಲ್ಲಿವೆ. ಪ್ರಾಂತೀಯ ಪಕ್ಷಗಳು ಸ್ಥಳೀಯ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಿದ್ದು, ಪ್ರಾಂತೀಯ ಆಶೋತ್ತರಗಳ ಈಡೇರಿಕೆ ಸಾಧ್ಯ ಎಂಬ ಅನಿಸಿಕೆ ಇದೆ.

ಇದೇ ಕಾರಣಕ್ಕಾಗಿ ಕಾವೇರಿ ಸಮಸ್ಯೆ ಸಂದರ್ಭದಲ್ಲಿ ಸಿದ್ದರಾಮಯ್ಯ ಎಚ್‌.ಡಿ.ದೇವೇಗೌಡರ ಸಲಹೆ ಪಡೆಯುವಂತಾಯಿತು. ಹೀಗಾಗಿ ಜೆಡಿಎಸ್‌ ರೈತರ ಪರವಾಗಿ ಉಳಿದುಕೊಂಡಿರುವುದರಿಂದ ಪ್ರಾಂತೀಯ ಪಕ್ಷವಾಗಿ ಜನರ ಮನಸ್ಸಿನಲ್ಲಿ ಉಳಿದಿದೆ ಎಂದು ಹೇಳಿದರು. 

ಸರ್ವಾಧಿಕಾರಿ ಆಡಳಿತ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನ್‌ ಕೀ ಬಾತ್‌ ಮತ್ತಿತರ ಕಾರ್ಯಕ್ರಮಗಳ ಮೂಲಕ ಕೇವಲ ಮಾತಿನ ಸರ್ಕಾರವಾಗಿದೆ. ಅಲ್ಲದೆ ಸ್ವಾತಂತ್ರಾ ನಂತರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರ ಸರ್ವಾಧಿಕಾರಿ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.

ನನಗೊಂದು ಕನಸಿದೆ: ಎಚ್‌.ಡಿ.ದೇವೇಗೌಡರು ತಮ್ಮ ಮೇಲೆ ನಂಬಿಕೆ, ಅಭಿಮಾನವನ್ನಿಟ್ಟು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಅಧಿಕಾರವನ್ನು ಎಲ್ಲರ ಬೆಂಬಲದೊಂದಿಗೆ ಸಮರ್ಥವಾಗಿ ನಿಭಾಯಿಸುತ್ತೇನೆ. ಆದರೆ ತಮ್ಮದೊಂದು ಕನಸಿದ್ದು, ಅದನ್ನು ನನಸಾಗಿಸಿಕೊಳ್ಳಲು ಯುವಪಡೆಯನ್ನು ಕಟ್ಟಲಾಗುತ್ತಿದ್ದು, ಇವರೆಲ್ಲರನ್ನು ಒಗ್ಗೂಡಿಸಿ ಪಕ್ಷಕಟ್ಟುವ ಆಶಯ ಹೊಂದಿದ್ದೇನೆ ಎಂದರು.

ರಾಜಕೀಯ ತಿರುವು: ಮುಂದಿನ ಲೋಕಸಭಾ ಚುನಾವಣೆ ದೇಶದ ರಾಜಕೀಯ ಇತಿಹಾಸದಲ್ಲಿ ಮಹತ್ತರ ತಿರುವು ಪಡೆಯಲಿದೆ. ವಿವಿಧ ರಾಜ್ಯಗಳ ಪ್ರಾಂತೀಯ ಪಕ್ಷಗಳನ್ನೊಳಗೊಂಡ ಒಕ್ಕೂಟ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ. ಈ ಚುನಾವಣೆಗೆ ಜೆಡಿಎಸ್‌ ಸಹ ಸಜ್ಜಾಗುತ್ತಿದ್ದು, ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಲಿದೆ.

ಮುಂದಿನ ಸಂಸತ್‌ ಚುನಾವಣೆ ನರೇಂದ್ರ ಮೋದಿ ಮತ್ತು ಎಚ್‌.ಡಿ.ದೇವೇಗೌಡರ ನಡುವೆ ನಡೆದರೂ ಯಾವುದೇ ಅಚ್ಚರಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜೆಡಿಎಸ್‌ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ, ಸೇರಿದಂತೆ ಇನ್ನಿತರರು ಹಾಜರಿದ್ದರು. 

ಪ್ರಾಮಿಸಿಂಗ್‌ ಲಿಡರ್‌: ಪ್ರಜ್ವಲ್‌ ರೇವಣ್ಣ ಒಬ್ಬ ಪ್ರಾಮಿಸಿಂಗ್‌ ಲಿಡರ್‌ ಆಗಿದ್ದು, ಎಚ್‌.ಡಿ.ದೇವೆಗೌಡರ ಮೊಮ್ಮಗ ಎಂಬುದನ್ನು ಬದಿಗಿಟ್ಟು ನೋಡಿದರೆ, ಇಂತಹ ಯುವಕರು ರಾಜಕೀಯಕ್ಕೆ ಅಗತ್ಯವಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆಗಾಗಿ ಶೀಘ್ರವೇ ಗುಲ್ಬರ್ಗದಿಂದ ರಾಜ್ಯ ಪ್ರವಾಸ ಆರಂಭಿಸುತ್ತೇನೆ. ಈ ವೇಳೆ ಜೆಡಿಎಸ್‌ ವಿರುದ್ಧ ಮಾಡಿರುವ ಅಪಪ್ರಚಾರದ ಕುರಿತು ಜನರಿಗೆ ಮನವರಿಕೆ ಮಾಡುತ್ತೇನೆ ಎಂದು ತಿಳಿಸಿದರು.

ಬಜೆಟ್‌ ಪುಸ್ತಕ ನೋಡಿ: ಬಿಜೆಪಿ ನಾಯಕರು ಯಾವುದೇ ಆರೋಪ ಮಾಡುವ ಮುನ್ನ, ಬಜೆಟ್‌ ಪುಸ್ತಕ ನೋಡಿ ಆರೋಪಿಸಲಿ. ಶಾದಿಭಾಗ್ಯಕ್ಕೆ ಹಿಂದಿನ ಸರ್ಕಾರ ತನ್ನ ಕೊನೆ ಬಜೆಟ್‌ನಲ್ಲಿ ಅನುದಾನ ಕಡಿಮೆ ಮಾಡಿತ್ತು. ಆದರೆ ಈಗ ಅದನ್ನು ನಮ್ಮ ತಲೆಗೆ ಕಟ್ಟಲಾಗುತ್ತಿದ್ದು, ನಾವು ಯಾವುದೇ ಅನುದಾನ ಕಡಿತ ಮಾಡಿಲ್ಲ.

ಇನ್ನು ಎಚ್‌ಡಿಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದುಂದು ವೆಚ್ಚ ಆರೋಪಕ್ಕೆ ತಿರುಗೇಟು ನೀಡಿದ ಅವರು, ನರೇಂದ್ರ ಮೋದಿ ಅಧಿಕಾರ ಸ್ವೀಕಾರದ ವೇಳೆ ಆಗಮಿಸಿದ್ದ ಅತಿಥಿಗಳಿಗೆ ಖರ್ಚು ಮಾಡಿದ ಹಣ ಯಾವುದು? ಎಂದು ಪ್ರಶ್ನಿಸಿದರು. 

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.