ಎಂಟಿಬಿ ಕ್ಷಮೆ ಕೇಳಲಿ
Team Udayavani, Nov 24, 2019, 3:02 AM IST
ಮೈಸೂರು: ಹೊಸಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಬಗ್ಗೆ ಅವಹೇಳನಾ ಕಾರಿ ಹೇಳಿಕೆ ನೀಡಿರುವ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಹೆಣ್ಣು ಮಕ್ಕಳು ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂಟಿಬಿ ನಾಗರಾಜ್ಗೆ ಹೆಣ್ಣು ಮಗಳು ಎದುರಾಳಿಯಾಗಿರುವುದು ಭಯ ಮೂಡಿಸಿರಬಹುದು. ಅದಕ್ಕಾಗಿ ಪದ್ಮಾವತಿ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ನ ಮಹಿಳಾ ಅಭ್ಯರ್ಥಿ ನನಗ್ಯಾವ ಲೆಕ್ಕ ಎಂಬ ಎಂಟಿಬಿ ಹೇಳಿಕೆ ಖಂಡನೀಯ ಎಂದರು.