ಮಠಾಧೀಶರು ಬೀದಿ ಜಗಳ ಬಿಟ್ಟು ಒಂದಾಗಲಿ: ರಾಯರಡ್ಡಿ
Team Udayavani, Aug 25, 2017, 8:20 AM IST
ಬೆಂಗಳೂರು: ವೀರಶೈವ ಲಿಂಗಾಯತ ಮಠಾಧೀಶರು ಬೀದಿ ಜಗಳ ಮಾಡುವುದನ್ನು ಬಿಟ್ಟು ಒಂದಾಗಿ ಹೋಗಬೇಕೆಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಪ್ರತ್ಯೇಕ ಧರ್ಮದ ವಿಷಯದಲ್ಲಿ ವಿರಕ್ತ ಮಠಾಧೀಶರು ಮತ್ತು ಪಂಚ ಪೀಠಾಧೀಶರು ಪ್ರತ್ಯೇಕ ಸಭೆಗಳನ್ನು ಮಾಡಿ ನಿರ್ಣಯಗಳನ್ನು ಕೈಗೊಳ್ಳುವುದರಿಂದ ಸಮಸ್ಯೆ
ಪರಿಹಾರವಾಗುವುದಿಲ್ಲ. ಲಿಂಗಾಯತ ಧರ್ಮ ಹಿಂದೂ ಧರ್ಮಕ್ಕಿಂತ ಭಿನ್ನವಾಗಿರುವುದರಿಂದ ಮಠಾಧೀಶರು, ಚಿಂತಕರೆಲ್ಲರೂ ಒಟ್ಟಾಗಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಸಮಾಜದ ನಾಗರಿಕರಾಗಿ ಭಾಗವಹಿಸುತ್ತಿದ್ದೇವೆ. ಸರ್ಕಾರಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಎಲ್ಲರೂ ಒಟ್ಟಾಗಿ ಬಂದರೆ, ಪ್ರತ್ಯೇಕ ಧರ್ಮ ಘೋಷಣೆ ಮಾಡುವ ಕುರಿತು
ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದರು. ಬಿಜೆಪಿ ನಾಯಕರು ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ ಕುರಿತಂತೆ ಒಂದೆಡೆ ಸಹಿ ಮಾಡುತ್ತಾರೆ. ಮತ್ತೂಂದೆಡೆ
ವೀರಶೈವ ಲಿಂಗಾಯತ ಹಿಂದೂ ಧರ್ಮದ ಭಾಗ ಎಂದು ಹೇಳುತ್ತಾರೆ. ಅವರು ಆರ್ಎಸ್ಎಸ್ ಕಪಿ ಮುಷ್ಠಿಯಲ್ಲಿದ್ದಾರೆ. ಹೀಗಾಗಿ ಅವರನ್ನು ಲಿಂಗಾಯತರಲ್ಲ ಎಂದು ಹೇಳಿದಾಗಿ ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು