“ಮಧ್ಯಂತರ ಚುನಾವಣೆಗೆ ಸಜ್ಜಾಗೋಣ’
Team Udayavani, Aug 8, 2019, 3:05 AM IST
ಬೆಂಗಳೂರು: “ಯಡಿಯೂರಪ್ಪ ಮೂರು ವರ್ಷ ಎಂಟು ತಿಂಗಳು ಅಧಿಕಾರ ನಡೆಸಲಿ, ನನ್ನದೇನೂ ಅಭ್ಯಂತರವಿಲ್ಲ. ಆದರೆ, ನರೇಂದ್ರ ಮೋದಿ ಹಾಗೂ ಅಮಿತ್ ಶಾ ಏನು ತೀರ್ಮಾನ ಕೈಗೊಳ್ಳುತ್ತಾರೋ, ಯಾರಿಗೆ ಗೊತ್ತು’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, “ನರೇಂದ್ರ ಮೋದಿ-ಅಮಿತ್ ಶಾ ಅವರು ಕೊಠಡಿಯಲ್ಲಿ ಪ್ರತ್ಯೇಕವಾಗಿ ಕುಳಿತು ಕೈಗೊಳ್ಳುವ ತೀರ್ಮಾನವೇ ಅಂತಿಮ.
ಹೀಗಾಗಿ, ನಾನು ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರೂ ಎದುರಿಸಲು ಸಜ್ಜಾಗುತ್ತಿದ್ದೇನೆ’ ಎಂದರು. “ತುಮಕೂರು ಲೋಕಸಭೆ ಚುನಾವಣೆಯಲ್ಲಿ ನಾನು ಸೋತಿದ್ದು ದೇವರ ತೀರ್ಮಾನ ಎಂದುಕೊಳ್ಳುತ್ತೇನೆ. ನನ್ನನ್ನು ಸೋಲಿಸಲು ಯತ್ನಿಸಿದ ಪುಣ್ಯಾತ್ಮರಿಗೆ, ಮಹಾನುಭಾವರಿಗೆ ಒಳ್ಳೆಯದಾಗಲಿ. ನಾನು ಯಾರಿಗೂ ಕೆಡಕು ಬಯಸುವುದಿಲ್ಲ. ಪಕ್ಷ ಕಟ್ಟುವ ಸಲುವಾಗಿಯೇ ನನಗೆ ಸೋಲು ಉಂಟಾಯಿತು ಎಂದುಕೊಳ್ಳುತ್ತೇನೆ’ ಎಂದು ತಿಳಿಸಿದರು.
ನಮಗೂ ಮಾತನಾಡಲು ಅವಕಾಶ ಬೇಕು: ಜೆಡಿಎಸ್ ಸಮಾವೇಶದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ತಮಗೆ ಮಾತನಾಡಲು ಅವಕಾಶ ಕೊಡಬೇಕು. ವೇದಿಕೆಯಲ್ಲಿದ್ದವರೇ ಯಾವಾಗಲೂ ಮಾತನಾಡುತ್ತೀರಿ, ನಮ್ಮ ನೋವನ್ನು ಹಂಚಿಕೊಳ್ಳಬೇಕು. ಅಧಿಕಾರದಲ್ಲಿದ್ದಾಗ ಸಹಕಾರ ಪಡೆದವರೇ ಮೋಸ ಮಾಡಿದ್ದಾರೆ ಎಂದು ಹೇಳಿದರು. ವೇದಿಕೆ ಮೇಲಿದ್ದ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಅವರನ್ನು ಸಮಾಧಾನಪಡಿಸಿದರು. ಎರಡು ತಿಂಗಳಿಂದ ಪಕ್ಷದ ಕಚೇರಿಯಲ್ಲಿ ದೇವೇಗೌಡರು ಕಾರ್ಯಕರ್ತರು, ಮುಖಂಡರನ್ನು ಕರೆದು ಮಾತನಾಡುತ್ತಿದ್ದಾರೆ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ