ಶೂದ್ರರೊಂದಿಗೆ ಸಂಬಂಧ ಬೆಳೆಸಿ ನೋಡೋಣ: ತಿಮ್ಮಾಪುರ


Team Udayavani, Mar 17, 2020, 3:04 AM IST

shoodra

ವಿಧಾನ ಪರಿಷತ್ತು: “ಹಿಂದೂರಾಷ್ಟ್ರ ದ ಬಗ್ಗೆ ಮಾತನಾಡುವವರು ಹಿಂದುಳಿದ ವರ್ಗಗಳು ಮತ್ತು ಶೂದ್ರರೊಂದಿಗೆ ಸಂಬಂಧ ಬೆಳೆಸಿ ನೋಡೋಣ?’ ಎಂದು ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪುರ ಸವಾಲು ಹಾಕಿದರು. ಮೇಲ್ಮನೆಯಲ್ಲಿ ಸೋಮವಾರ ಸಂವಿಧಾನದ ಮೇಲಿನ ವಿಶೇಷ ಚರ್ಚೆಯಲ್ಲಿ ಮಾತನಾಡಿ, ಹಿಂದೂರಾಷ್ಟ್ರ ನಿರ್ಮಿಸಬೇಕಾದರೆ, ನಾವೆಲ್ಲರೂ ಹಿಂದೂ ಎಂಬ ಭಾವನೆ ಬರಬೇಕೆ ಹೊರತು, ಅಸ್ಪೃಶ್ಯ ಎಂದು ಕರೆಯಬಾರದು.

ಕುಂಬಾರರು, ಕುರುಬರು, ಕ್ಷೌರಿಕರು ಸೇರಿ ಎಷ್ಟೋ ಜಾತಿಗಳ ಜನ, ಅವರ (ಮೇಲ್ಜಾತಿಯವರ) ನೆರಳನ್ನೇ ಕಾಣಲಿಲ್ಲ. ಅವರೆಲ್ಲ ಹಿಂದುಗಳೂ ಅಲ್ಲವೇ? ಅಸ್ಪೃಶ್ಯರನ್ನು ಕಾಣುವ ಮನಸ್ಸುಗಳು ಮೊದಲು ಬದಲಾಗಬೇಕು. ಹಿಂದೂ ರಾಷ್ಟ್ರದ ಮಂತ್ರ ಪಠಿಸುವವರು ಶೂದ್ರರೊಂದಿಗೆ ಸಂಬಂಧ ಬೆಳೆಸಿ ನೋಡೋಣ ಎಂದು ಕೇಳಿದರು.

ಆಗ ಆಡಳಿತ ಪಕ್ಷದ ವೈ.ಎ. ನಾರಾಯಣಸ್ವಾಮಿ, “ಮೊದಲು ನೀವು ನಿಮ್ಮ ಉಪಜಾತಿಯೊಂದಿಗೆ ಸಂಬಂಧ ಬೆಳೆಸಲು ಸಿದ್ಧವಾಗಿದ್ದೀರಾ? ನಿಮ್ಮ ಸಮುದಾಯದವರೇ ಉಪಜಾತಿಯೊಂದಿಗೆ ಸಂಬಂಧ ಬೆಳೆಸಲ್ಲ ಬಿಡಿ’ ಎಂದು ಪ್ರತಿ ಸವಾಲು ಹಾಕಿದರು. ಇದಕ್ಕೆ “ನಾನು ರೆಡಿ’ ಎಂದು ತಿಮ್ಮಾಪುರ ಪ್ರತಿಕ್ರಿಯಿಸಿದರು.

ಇದಕ್ಕೂ ಮುನ್ನ ಆಡಳಿತ ಪಕ್ಷದ ಆಯನೂರು ಮಂಜುನಾಥ್‌, “ನಿಮ್ಮ ಕಳಕಳಿಗೆ ಸ್ವಾಗತ. ಆದರೆ, ನೀವು ಎರಡು ಬಾರಿ ಸಚಿವರಾಗಿದ್ದವರು. ರಾಜಕೀಯ ಜೀವನದಲ್ಲಿ ಇಷ್ಟು ವರ್ಷದ ಅನುಭವವಿದೆ. ಈ ಹಿನ್ನೆಲೆಯಲ್ಲಿ ಶೂದ್ರ ಸಮುದಾಯದ ಸುಧಾರಣೆ ಅಥವಾ ಅವರನ್ನು ಮೇಲೆತ್ತುವ ನಿಟ್ಟಿನಲ್ಲಿ ನೀವು ಮಾಡಿದ ಯಾವುದಾದರೂ ನಾಲ್ಕು ಘಟನೆಗಳನ್ನು ಸದನದ ಮುಂದೆ ಪ್ರಸ್ತಾಪಿಸಿ’ ಎಂದು ಸವಾಲು ಹಾಕಿದರು.

ಆಗ, “ನನ್ನ ಪ್ರಯತ್ನ ಇದ್ದೇ ಇರುತ್ತದೆ ಬಿಡಿ. ಈ ಪ್ರಯತ್ನದಿಂದಾಗಿಯೇ ಮೂರು ಸಲ ನಾನು ಚುನಾವಣೆಯಲ್ಲಿ ಸೋಲನುಭವಿಸಿದ್ದೇನೆ. ಆದ್ದರಿಂದ ಜಾತಿವಾದಿಗಳ ಮನಃಸ್ಥಿತಿಯ ಬದಲಾವಣೆಯೇ ಇದಕ್ಕೆ ಪರಿಹಾರ’ ಎಂದು ಪುನರುಚ್ಚರಿಸಿದರು.

ದೇಶದಲ್ಲಿ ಒಂದು ಕಡೆ ರಾಮಮಂದಿರ ಕಟ್ಟಲು ಒಂದು ವರ್ಗ ತುದಿಗಾಲಲ್ಲಿ ನಿಂತಿದೆ. ಮತ್ತೂಂದೆಡೆ ಮಂದಿರದೊಳಗೆ ಅಸ್ಪೃಶ್ಯರನ್ನು ಬಿಟ್ಟುಕೊಳ್ಳದಂತಹ ಸ್ಥಿತಿಯಿದೆ. ದೇಶದಲ್ಲಿ ಸಂವಿಧಾನ ಜಾರಿಯಾಗಿ 7 ದಶಕ ಕಳೆದರೂ, ಇಂದಿಗೂ ಅಸ್ಪೃಶ್ಯತೆ, ಅಸಮಾನತೆ ಜೀವಂತವಾಗಿದೆ.
-ಆರ್‌.ಬಿ. ತಿಮ್ಮಾಪುರ, ಕಾಂಗ್ರೆಸ್‌ ಸದಸ್ಯ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.