ಲೆವೆಲ್ ಕ್ರಾಸಿಂಗ್ ತೆರವು; ನೈಋತ್ಯ ರೈಲ್ವೆಗೆ ಪ್ರಶಸ್ತಿ
Team Udayavani, Jul 23, 2019, 3:00 AM IST
ಹುಬ್ಬಳ್ಳಿ: ರೈಲ್ವೆ ಇಲಾಖೆಯ 64ನೇ ರೈಲ್ವೆ ಸಪ್ತಾಹ ಕಾರ್ಯಕ್ರಮದಲ್ಲಿ ಮಾನವ ರಹಿತ ಲೆವೆಲ್ ಕ್ರಾಸಿಂಗ್ ತೆರವಿನಲ್ಲಿ ಕೈಗೊಂಡ ಕಾರ್ಯ ಸಾಧನೆಗೆ ನೈಋತ್ಯ ರೈಲ್ವೆಗೆ ಪ್ರಶಸ್ತಿ ನೀಡಲಾಗಿದೆ. ಹರ್ಯಾಣದ ಅಂಬಾಲಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
2018-19ರಲ್ಲಿ ನೈಋತ್ಯ ರೈಲ್ವೆ ಕ್ರಿಯಾ ಯೋಜನೆ ರೂಪಿಸಿ, 187 ಮಾನವ ರಹಿತ ಲೆವೆಲ್ ಕ್ರಾಸಿಂಗ್ ತೆರವಿಗೆ ಯೋಜನೆ ಸಿದ್ಧಪಡಿಸಲಾಯಿತು. ಅದರನ್ವಯ ಅಂಡರ್ ಬ್ರಿಡ್ಜ್, ಸಬ್ ವೇ, ರೋಡ್ ಓವರ್ಬ್ರಿಡ್ಜ್ ನಿರ್ಮಾಣ ಮಾಡಲಾಯಿತು. 2018 ಅಕ್ಟೋಬರ್ನಲ್ಲಿ ಎಲ್ಲ ಮಾನವ ರಹಿತ ಲೆವೆಲ್ ಕ್ರಾಸಿಂಗ್ ತೆರವುಗೊಳಿಸಲಾಯಿತು. ಇದರಿಂದ ರೈಲುಗಳು ನಿಗದಿತ ಸಮಯಕ್ಕನುಗುಣವಾಗಿ ಸಂಚರಿಸಲು ಅನುಕೂಲವಾಯಿತು. ಒಟ್ಟು 38 ರೋಡ್ ಅಂಡರ್ ಬ್ರಿಡ್ಜ್, 8 ರೋಡ್ ಓವರ್ ಬ್ರಿಡ್ಜ್, 25 ವಿಭಜನಾ ರಸ್ತೆ ನಿರ್ಮಿಸಲಾಯಿತು.
37 ಕಡೆ ಗೇಟ್ ಮಿತ್ರಾ ವ್ಯವಸ್ಥೆ ಮಾಡಿದ್ದರೆ, 152 ಲೆವೆಲ್ ಕ್ರಾಸಿಂಗ್ನಲ್ಲಿ ಸಿಬ್ಬಂದಿ ನೇಮಕ ಮಾಡಲಾಯಿತು. ದೇಶದೆಲ್ಲೆಡೆ 2022ರೊಳಗೆ ಮಾನವ ರಹಿತ ಲೆವೆಲ್ ಕ್ರಾಸಿಂಗ್ ಮುಕ್ತಗೊಳಿಸುವ ಉದ್ದೇಶವನ್ನು ಭಾರತೀಯ ರೈಲ್ವೆ ಹೊಂದಿದ್ದು, ಈ ದಿಸೆಯಲ್ಲಿ ರೈಲ್ವೆ ವಲಯಗಳು ಕ್ರಿಯಾಯೋಜನೆ ರೂಪಿಸಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ