ಚಿತ್ರದುರ್ಗದ ಮುರುಘಾ ಶರಣರಿಗೆ ಜೀವ ಬೆದರಿಕೆ?
Team Udayavani, Mar 21, 2017, 11:43 AM IST
ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಆದರೆ, ಮಠದ ಮೂಲಗಳು ಇತನ್ನು ನಿರಾಕರಿಸಿದ್ದು, ಅಂತಹ ಯಾವುದೇ ಘಟನೆ ಸಂಭವಿಸಿಲ್ಲವೆಂದು ತಿಳಿಸಿವೆ. ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿತ್ತು. ಇದನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಮುರುಘಾಮಠಕ್ಕೆ ತೆರಳಿ ಮುರುಘಾ ಶರಣರೊಂದಿಗೆ ಚರ್ಚಿಸಿದರು. ಬೆದರಿಕೆ ಹಾಕಿದವನ ಮೊಬೈಲ್ ಸಂಖ್ಯೆ ಮತ್ತಿತರ ಮಾಹಿತಿ ಪಡೆದರು ಎಂದು ಹೇಳಲಾಗುತ್ತಿದೆ. ಈ ಕುರಿತು ಎಸ್ಪಿ ಅವರನ್ನು ಸಂಪರ್ಕಿಸಿದಾಗ, ನಮಗೆ ಅಂತಹ ಯಾವುದೇ ದೂರು ಬಂದಿಲ್ಲ. ನಾನು ಮುರುಘಾ ಶರಣರನ್ನು ಬಹಳ ದಿನಗಳಿಂದ ಭೇಟಿಯಾಗಿರಲಿಲ್ಲ. ಸೋಮವಾರ ಮಧ್ಯಾಹ್ನ ಅವರನ್ನು ಭೇಟಿ ಮಾಡಿದ್ದು ನಿಜ. ವೈಯಕ್ತಿಕವಾಗಿ ಭೇಟಿ ಮಾಡಿ ಮಾತನಾಡಿಸಿರುವೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಠದ ಸ್ಪಷ್ಟನೆ: ಮುರುಘಾ ಶರಣರಿಗೆ ಕೊಲೆ ಬೆದರಿಕೆಗೆ ಸಂಬಂಧಿಸಿದಂತೆ ಮುರುಘಾ ಮಠದಿಂದ ಸ್ಪಷ್ಟನೆ ನೀಡಲಾಗಿದೆ. ಸೋಮವಾರ ಬೆಳಗ್ಗೆ 9 ಗಂಟೆ ವೇಳೆಗೆ ವ್ಯಕ್ತಿಯೊಬ್ಬ ಮುರುಘಾ ಶರಣರ ದೂರವಾಣಿಗೆ ಕರೆ ಮಾಡಿ, ನೀವು ಪರಿವರ್ತನಾ ಪರವಾದಿಗಳು ಎಂದು ಹೇಳಿಕೊಂಡು ಕೆಳ ಮತ್ತು ಮೇಲ್ವರ್ಗಗಳ ನಡುವೆ ಸಾಮಾಜಿಕ ಸಂಘರ್ಷ ತರುತ್ತಿದ್ದೀರಿ ಎಂದು ದೂಷಣೆ ಮಾಡುತ್ತ ಬೆದರಿಕೆ ಹಾಕಿದ ಕಾರಣ ಸದರಿ ವಿಷಯವನ್ನು ತನಿಖೆಗಾಗಿ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಶ್ರೀಮಠವು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ