ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ 5 ಮಹತ್ವದ ಸರ್ವ ಸಮ್ಮತ ನಿರ್ಣಯ
Team Udayavani, Aug 10, 2017, 6:25 PM IST
ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಲಿಂಗಾಯತ ಧರ್ಮ ಸಮಾಲೋಚನಾ ಸಭೆಯಲ್ಲಿ 5 ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.
ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಧರ್ಮ ಸಮಾಲೋಚನಾ ಸಮಾರಂಭದಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಚಿಂತಕರು ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು. ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರು 5 ನಿರ್ಣಯಗಳನ್ನು ಮಂಡಿಸಿದ್ದು, ವೀರಣ್ಣ ಮತ್ತಿಕಟ್ಟಿ ಅವರು ನಿರ್ಣಯವನ್ನು ಅನುಮೋದಿಸಿದರು.
ವೀರಶೈವಕ್ಕೂ ಲಿಂಗಾಯತಕ್ಕೂ ಯಾವುದೇ ಸಂಬಂಧ ಇಲ್ಲ. ಎರಡೂ ಯಾವತ್ತಿಗೂ ಪ್ರತ್ಯೇಕವೇ. ಇನ್ಮುಂದೆ ನಮ್ಮ ನಾಲಗೆಯಿಂದ ವೀರಶೈವ ಶಬ್ದ ಬರಬಾರದು ಎಂದು ಲಿಂಗಾಯತ ಧರ್ಮ ಸಮಾಲೋಚನಾ ಸಭೆಯಲ್ಲಿ ಭಾಲ್ಕಿಯ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಹೇಳಿದರು.
ಐದು ನಿರ್ಣಯಗಳು:
ಅಖಿಲ ಭಾರತ ವೀರಶೈವ ಮಹಾಸಭಾದ ಹೆಸರು ಬದಲಿಸಬೇಕು
1941ರಲ್ಲಿ ದಾವಣಗೆರೆಯಲ್ಲಿ ಈ ಬಗ್ಗೆ ನಿರ್ಣಯವಾಗಿತ್ತು.
ಬಸವಣ್ಣನವರ ವಚನಗಳನ್ನು ವೀರಶೈವರು ಬಳಸುವಂತಿಲ್ಲ
ಬಸವ ತತ್ವ ಪ್ರಚಾರ ಬಿಟ್ಟು ಬೇರಾವ ಕೆಲಸ ಮಾಡುವಂತಿಲ್ಲ
ವಿರಕ್ತ ಮಠದ ಸ್ವಾಮಿಗಳು ಬೇರಾವ ಕೆಲಸ ಮಾಡುವಂತಿಲ್ಲ.
ಬೇರೆ ಕೆಲಸ ಮಾಡುವುದಾದರೆ ಪೀಠ ತ್ಯಾಗ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ