ಕಾಂಗ್ರೆಸ್ನ ಮಾತು ಕೇಳಿ ನಖರಾ ಮಾಡಿದ್ರೆ ಜೋಕೆ
Team Udayavani, Jan 4, 2020, 3:05 AM IST
ಬಳ್ಳಾರಿ: “ಇದು ನಮ್ಮ ದೇಶ..ಇಲ್ಲಿ ಶೇ.80ರಷ್ಟು ನಾವಿದ್ದೇವೆ. ಕಾಂಗ್ರೆಸ್ನ ಬೇಕೂಫ್ಗಳು ಹೇಳುವುದನ್ನು ಕೇಳಿ ನೀವು ಬೀದಿಗೆ ಬಂದರೆ ಎಚ್ಚರ..ಶೇ.80ರಷ್ಟು ಇರುವ ನಾವು ತಿರುಗಿ ಬಿದ್ದರೆ ನಿಮ್ಮ ಪರಿಸ್ಥಿತಿ ಏನು..?’ – ಇದು ಎನ್ಆರ್ಸಿ, ಸಿಎಎ ಕಾಯ್ದೆ ವಿರೋಧಿಗಳಿಗೆ ಶಾಸಕ ಸೋಮಶೇಖರ ರೆಡ್ಡಿ ನೀಡಿದ ಎಚ್ಚರಿಕೆ. ನಗರದಲ್ಲಿ ಶುಕ್ರವಾರ ದೇಶಭಕ್ತ ನಾಗರಿಕ ವೇದಿಕೆ ಎನ್ಆರ್ಸಿ, ಸಿಎಎ ಕಾಯ್ದೆ ಬೆಂಬಲಿಸಿ ಆಯೋಜಿಸಿದ್ದ ಬೃಹತ್ ಮೆರವಣಿಗೆ ಹಾಗೂ ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು.
ಹಿಂದೂಗಳು ಎಂದರೆ ಬಂಧುಗಳು ಎನ್ನುತ್ತಲೇ ಮಾತು ಆರಂಭಿಸಿದ ಅವರು, ಸಿಎಎ ವಿರೋಧಿಸುತ್ತಿರುವವರಿಗೆ ಇದು ಎಚ್ಚರಿಕೆ. ಇಲ್ಲಿ ಕೇವಲ ಶೇ.5ರಷ್ಟು ಜನರು ಮಾತ್ರ ಬಂದಿದ್ದಾರೆ. ಇನ್ನು ಶೇ.100ರಷ್ಟು ಜನರು ಬಂದರೆ ಹೇಗಿರುತ್ತದೆ. ಅದಕ್ಕೆ ಜಾಸ್ತಿ ನಖರಾ ಮಾಡಿದರೆ ನಿಮ್ಮ ಪರಿಸ್ಥಿತಿ ಏನಾಗಲಿದೆ ಎಂದು ಯೋಚಿಸಿ ಎಂದು ಕಾಯ್ದೆ ವಿರೋಧಿಸುತ್ತಿರುವವರಿಗೆ ಎಚ್ಚರಿಕೆ ನೀಡಿದರು.
ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ಎನ್ಆರ್ಸಿಯಿಂದ ಯಾರಿಗೂ ಸಮಸ್ಯೆಯಾಗಲ್ಲ. ಒಂದು ವೇಳೆ ನಿಮಗೆ ಹೋಗಬೇಕೆಂದು ಅನಿಸಿದರೆ ನೀವೆಲ್ಲ ಪಾಕಿಸ್ತಾನ, ಬಾಂಗ್ಲಾದೇಶಕ್ಕೆ ಹೋಗಬಹುದು. ಇಲ್ಲಿ ನಾವು-ನೀವೆಲ್ಲರೂ ಅಣ್ಣ-ತಮ್ಮಂದಿರ ಥರ ಇದ್ದೇವೆ. ಅದು ಹಾಗೆ ಇರಬೇಕು. ಅದನ್ನು ಬಿಟ್ಟು ಕಾಯ್ದೆಯನ್ನು ವಿರೋ ಧಿಸಿದರೆ ಒಬ್ಬೊಬ್ಬರು ಒಬ್ಬೊಬ್ಬ ಶಿವಾಜಿಯಾಗಿ ಕನಕದುರ್ಗಮ್ಮನ ದರ್ಶನ ಪಡೆದು ಖಡ್ಗ ಹಿಡಿದು ನಿಂತರೆ ಹೇಗೆ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.