ಸಾಹಿತ್ಯ ಲೆಕ್ಕದ ಬುಕ್ಕಲ್ಲ, ಸಂಸ್ಕೃತಿ ಶ್ರೇಷ್ಠತೆಯ ಸೊಕ್ಕಲ್ಲ


Team Udayavani, Jan 19, 2019, 12:40 AM IST

14.jpg

ಧಾರವಾಡ: “ಜನರ ಬದುಕುವ ಸ್ವಾತಂತ್ರ್ಯಕ್ಕೆ ಬದ್ಧವಾಗಿರುವ ಸಾಮಾಜಿಕ, ರಾಜಕೀಯ ಪ್ರಜ್ಞೆ ನಮ್ಮದಾಗಬೇಕು. ಅದೇ ಸಾಮಾಜಿಕ ಸಂಭ್ರಮ, ರಾಜಕೀಯ ಸಂಭ್ರಮ, ಸಾಹಿತ್ಯ ಸಂಭ್ರಮ’ ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ,ಕರ್ನಾಟಕ ವಿಶ್ವವಿದ್ಯಾಲಯ, ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ ಸಹಯೋಗದಲ್ಲಿ ಶುಕ್ರವಾರದಿಂದ 3 ದಿನ ಧಾರವಾಡ ಸಾಹಿತ್ಯ ಸಂಭ್ರಮ-2019ಕ್ಕೆ ಚಾಲನೆ ನೀಡಿ ಆಶಯ ಭಾಷಣ ಮಾಡಿ, “ನಾವು ಅಪವ್ಯಾಖ್ಯಾನಗಳನ್ನು ಅಳಿಸಬೇಕು. ಜನಗಳು ಬದುಕುವ ಸ್ವಾತಂತ್ರÂ ನಮ್ಮ ಆಯ್ಕೆಯಾಗಬೇಕು’ ಎಂದರು.

ಮಾನವೀಯತೆಯು ಸಾರ್ವಕಾಲಿಕ ಮೌಲ್ಯವಾಗಿದ್ದರಿಂದ ದೂರವನ್ನು ಸಮೀಪ ಮಾಡುವ ಆಶಯವಿಲ್ಲದ ಸಾಹಿತ್ಯ ಸಾಹಿತ್ಯವೇ ಅಲ್ಲ. ನಮ್ಮ ಸಾಹಿತ್ಯ ಮತ್ತು ಸಂಸ್ಕೃತಿ ಮನುಷ್ಯರೇ ಆದಲ್ಲಿ, ಜನರಿಗೆ ಸಮೀಪವಾಗಬೇಕು. ಜನರಿಗೆ ಜವಾಬ್ದಾರರಾಗಬೇಕು. ಸಂಭ್ರಮ ದೊಂದಿಗೆ ಸಂಕಟವೂ ಗೊತ್ತಾಗಬೇಕು. ಬದುಕು ವೈರುಧ್ಯಗಳ ಮೊತ್ತವಾಗಿದ್ದು, ಅದೇ ವಾಸ್ತವ. ನಮ್ಮ ನಾಡು ತುಂಬಿ ಹರಿವ ನದಿಗಳಿರುವ ಕರಾವಳಿಯೂ ಹೌದು, ಬತ್ತಿದ ಕೆರೆಗಳ ನಾಡೂ ಹೌದು. ಇದು ಕೋಗಿಲೆಗಳ ನಾಡು ಹೌದು, ಕಾಗೆಗಳ ನಾಡೂ ಹೌದು ಎಂದರು. ಸಾಹಿತ್ಯದ ಶ್ರೇಷ್ಠತೆಯು ಒಂದು ಶೋಧವೇ ಹೊರತು, ಮೋಕ್ಷ ಸ್ಥಿತಿಯಲ್ಲ. ಆದ್ದರಿಂದ ಹುಸಿ ಶ್ರೇಷ್ಠತೆ ಮತ್ತು ಹುಸಿ ಶುದ್ಧತೆಗಳಿಂದ ವಿಮೋಚನೆಗೊಂಡ ಮನಸು ಮಾತ್ರ ಮನುಷ್ಯತ್ವದ ಮೂಲ ಬೇರುಗಳನ್ನು ಬಲಗೊಳಿಸುತ್ತದೆ. ಮನುಷ್ಯತ್ವದ ಪ್ರಜ್ಞೆಯೇ ಸಾಮಾಜಿಕ ಹಾಗೂ ರಾಜಕೀಯ ಪ್ರಜ್ಞೆಯಾಗಬೇಕು.ಸಾಹಿತ್ಯ ಲೆಕ್ಕದ ಬುಕ್ಕಲ್ಲ, ಸಂಸ್ಕೃತಿ ಶ್ರೇಷ್ಠತೆಯ ಸೊಕ್ಕಲ್ಲ. ಇಲ್ಲಿ ಮೇಲು ಕೀಳುಗಳ ಮಾರಣ ಹೋಮಕ್ಕೆ ಅವಕಾಶವಿಲ್ಲ. ಆದ್ದರಿಂದ ಸಾಹಿತ್ಯ ಮತ್ತು ಸಂಸ್ಕೃತಿಗಳು ಸಮಾನತೆ, ಸೌಹಾರ್ದತೆಗಳ ಜೀವಶಕ್ತಿ ಒಳಗೊಳ್ಳಬೇಕು ಎಂದರು. ರಾಘವೇಂದ್ರ ಪಾಟೀಲ, ಸರೋಜಾ ಗಿರಡ್ಡಿ, ಉಮಾದೇವಿ ಕಲಬುರ್ಗಿ, ರಮಾಕಾಂತ ಜೋಶಿ ಇದ್ದರು.

ಕಲಬುರ್ಗಿ ಮರೆತ ಸರ್ಕಾರ ಕುರ್ಚಿ ಗಲಾಟೆ ಕಡಿಮೆಯಾದ ಮೇಲಾದರೂ ರಾಜಕಾರಣಿಗಳು ಡಾ|ಎಂ.ಎಂ.ಕಲಬುರ್ಗಿ ಅವರ ಹತ್ಯೆ ಮಾಡಿದವರನ್ನು ಪತ್ತೆ ಮಾಡಬೇಕು. ಸದ್ಯಕ್ಕೆ ರಾಜಕಾರಣಿಗಳು ಅಧಿ ಕಾರ ಉಳಿಸಿಕೊಳ್ಳುವಲ್ಲಿ ನಿರತ ರಾಗಿದ್ದಾರೆ. ಡಾ|ಎಂ.ಎಂ. ಕಲಬುರ್ಗಿ ಅವರ ಹತ್ಯೆಯಾಗಿ 4 ವರ್ಷಗಳು ಗತಿಸಿದರೂ ಆರೋಪಿ ಗಳನ್ನು ಪತ್ತೆ ಮಾಡುವಲ್ಲಿ ನಿರ್ಲಕ್ಷé ವಹಿಸಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಬೇಕಿದೆ ಎಂದು ಬರಗೂರು ಹೇಳಿದರು.

ಶಬರಿಮಲೆಯಲ್ಲಿ ಮಹಿಳೆ ಯರಿಗೆ ಪ್ರವೇಶ ನೀಡದಂತೆ ತಡೆಯವುದು ಸಾಮಾಜಿಕ ಹಿಂಸೆಯ ಫಲವಾಗಿದೆ. ಅಯ್ಯಪ್ಪನ ಸನ್ನಿಧಾನದಲ್ಲಿ ಈಗ ಭಕ್ತಿ ಇಲ್ಲ, ಕೇವಲ ರಾಜಕೀಯ ಶಕ್ತಿ ಇದೆ.
● ಬರಗೂರು ರಾಮಚಂದ್ರಪ್ಪ,ಸಾಹಿತಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.