ಫೆ.5ರಿಂದ ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ


Team Udayavani, Nov 13, 2019, 3:06 AM IST

feb5rinda

ಕಲಬುರಗಿ: ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020, ಫೆ.5ರಿಂದ ಮೂರು ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಹಿತಿಗಳ, ವಿವಿಧ ಸಂಘಟಕರ, ಸಾಹಿತ್ಯಾ ಸಕ್ತರ ಸಮ್ಮೇಳನದ ಪ್ರಥಮ ಪೂರ್ವ ಸಿದ್ಧತಾ ಸಭೆ ನಂತರ ಕಸಾಪ ಅಧ್ಯಕ್ಷ ಡಾ| ಮನು ಬಳಿಗಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

33 ವರ್ಷಗಳ ಬಳಿಕ ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾ ಗುತ್ತಿದ್ದು, ಗುಲ್ಬರ್ಗ ವಿವಿ ಆವರಣ ಅಂತಿಮಗೊಳಿಸ ಲಾಗಿದೆ. ವಿವಿ ಕ್ರೀಡಾಂಗಣ ದಲ್ಲಿ ಮುಖ್ಯ ವೇದಿಕೆ ನಿರ್ಮಾಣ ವಾದರೆ, ಉಳಿದೆರಡು ವೇದಿಕೆ ಡಾ| ಅಂಬೇಡ್ಕರ್‌ ಭವನ ಹಾಗೂ ಮಹಾತ್ಮ ಗಾಂಧಿ ಸಭಾಂಗಣ ದಲ್ಲಿ ಸಮಾನಾಂತರ ಗೋಷ್ಠಿಗಳು ನಡೆಯ ಲಿವೆ. ತಿಂಗಳೊಳಗೆ ಕಸಾಪ ಕಾರ್ಯಕಾರಿಣಿ ಸಭೆ ಕರೆದು ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದರು.

ಕನ್ನಡದ ತೇರು ಎಳೆಯಲು ಬಿಸಿಲು ನಾಡಿನ ಜನತೆ ಉತ್ಸುಕರಾಗಿದ್ದಾರೆ. ಸಮ್ಮೇಳನ ದಲ್ಲಿ ಕಲ್ಯಾಣ ಕರ್ನಾಟಕದ ಸಮಸ್ಯೆಗಳು ಮತ್ತು ಪರಿಹಾರಗಳು, ದಲಿತ ಬಂಡಾಯ ಸಾಹಿತ್ಯ, ನೈಸರ್ಗಿಕ ವಿಕೋಪ ತಡೆಯುವಿಕೆ ಸೇರಿ ಇತರ ವಿಷಯಗಳ ಗೋಷ್ಠಿಗಳಿರಲಿವೆ. ಡಿಸಿಎಂ ಹಾಗೂ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯ ಸ್ವಾಗತ ಸಮಿತಿಯಡಿ ಕಾರ್ಯಕ್ರಮ ನಡೆಯಲಿದೆ.

ಮುಧೋಳದಲ್ಲಿ ಅಖಿಲ ಭಾರತ ಮಟ್ಟದ ಸಮ್ಮೇಳನ ಉಸ್ತುವಾರಿ ವಹಿಸಿದ್ದ ಕಾರಜೋಳ, ಹಿರಿಯ ರಾಜಕಾರಣಿಯಾಗಿ ಅಪಾರ ಅನುಭವ ಹೊಂದಿದ್ದಾರೆ. ಆದ್ದರಿಂದ ಎರಡು ತಿಂಗಳೊಳಗೆ ಸಕಲ ಸಿದ್ಧತೆ ಪೂರ್ಣಗೊಳ್ಳಲಿವೆ. ಶ್ರವಣಬೆಳಗೋಳದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿರ್ಧರಿಸಿದ ಎರಡು ತಿಂಗಳೊಳಗೆ ನಡೆಸಲಾಗಿದೆ. ಕಲಬುರಗಿಯಲ್ಲೂ ಮಾದರಿ ಎನ್ನುವಂತೆ ಸಮ್ಮೇಳನ ನಡೆಯಲಿದೆ ಎಂದರು.

ಪರಿಸರ ಹಾಗೂ ಪರೀಕ್ಷೆ ಸೇರಿ ಇತರ ಎಲ್ಲ ಅಂಶಗಳನ್ನು ಅವಲೋಕಿಸಿ ಫೆಬ್ರವರಿ ಮೊದಲ ವಾರದಲ್ಲಿಯೇ ಕನ್ನಡದ ತೇರು ಎಳೆಯಲು ನಿರ್ಧರಿಸಲಾಗಿದೆ. ಸಮ್ಮೇಳನಕ್ಕೆ ಅಂದಾಜು 12 ಕೋಟಿ ರೂ. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಸಮ್ಮೇಳನಕ್ಕೆ ಉಪ ಮುಖ್ಯಮಂತ್ರಿಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಂಸದರು, ಶಾಸಕರು ಹಾಗೂ ಇತರ ಜನಪ್ರತಿನಿಧಿಗಳೆಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳಲಿದ್ದಾರೆ.
-ಡಾ| ಮನು ಬಳಿಗಾರ, ಅಧ್ಯಕ್ಷರು, ಕಸಾಪ

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.