ಸಾಮಾಜಿಕ ಜಾಲತಾಣಗಳ ಮೂಲಕವೂ ಸಾಹಿತ್ಯ ಸೃಷ್ಟಿ

ಕವಿ ಬಿ.ಆರ್‌. ಲಕ್ಷ್ಮಣರಾವ್‌ ಸಂದರ್ಶನ

Team Udayavani, Feb 7, 2020, 3:06 AM IST

samajika

* ಸಾಮಾಜಿಕ ಜಾಲತಾಣಗಳ ಅಬ್ಬರದಲ್ಲಿ ಸಾಹಿತ್ಯ ಸೊರಗುತ್ತಿದೆ ಎಂಬ ಮಾತುಗಳಿವೆ. ಆ ಕುರಿತು ನಿಮ್ಮ ಅನಿಸಿಕೆ ಏನು?
ಸಾಮಾಜಿಕ ಜಾಲತಾಣಗಳ ಅಬ್ಬರದಲ್ಲಿ ಸಾಹಿತ್ಯ ಸೊರಗುತ್ತಿದೆ ಎಂಬುದು ಒಂದು ರೀತಿಯಲ್ಲಿ ನಿಜ ಮತ್ತು ಒಂದು ರೀತಿಯಲ್ಲಿ ಸುಳ್ಳು. ಯಾಕೆಂದರೆ, ಜಾಲತಾಣಗಳ ಮೂಲಕವೂ ಇವತ್ತು ಸಾಹಿತ್ಯ ಸೃಷ್ಟಿ ಆಗ್ತಾ ಇದೆ. ಆ ರೀತಿಯಲ್ಲಿ ಇದು ಸಾಹಿತ್ಯ ಸೃಷ್ಟಿಗೆ ಪೂರಕವಾಗಿದೆ. ಆದರೆ, ಅಲ್ಲಿ ನಿಷ್ಠುರ ವಿಮರ್ಶೆ ಇಲ್ಲ. ಹಾಗಾಗಿ ಒಂದೊಳ್ಳೆಯ ಮೌಲಿಕ ಮಾಪನ ಸಾಧ್ಯವಾಗ್ತಾ ಇಲ್ಲ.

* ವರ್ತಮಾನದ ತಲ್ಲಣಗಳಿಗೆ, ಸಾಹಿತ್ಯ ಮದ್ದಾಗಬಲ್ಲದೆ? ಹೇಗೆ?
ವರ್ತಮಾನದ ತಲ್ಲಣಗಳನ್ನು ಅಭಿವ್ಯಕ್ತಿಗೊಳಿಸುವುದೇ ಸಾಹಿತ್ಯದ ಕೆಲಸ. ಅದು ಮದ್ದಾಗುವುದು ಕಾಲಕ್ರಮೇಣ ಆಗಬೇಕಾದಂಥ ಕೆಲಸ.

* ವಿವಿಧ ಪ್ರಕಾರದ ಪುಸ್ತಕಗಳ ಪ್ರಕಟಣೆ ಜಾಸ್ತಿ ಆಗ್ತಾ ಇದೆ. ಅದೇ ಸಮಯದಲ್ಲಿ, ಪುಸ್ತಕ ಓದುವವರ ಸಂಖ್ಯೆ ಕಡಿಮೆ ಆಗ್ತಾ ಇದೆ. ಈ ವೈರುಧ್ಯವನ್ನು ಹೇಗೆ ಸರಿಮಾಡುವುದು?
ಪುಸ್ತಕ ಪ್ರಕಟಣೆಯ ಸಂಖ್ಯೆ ಹೆಚ್ಚಾಗ್ತಾ ಇದೆ ಅನ್ನುವುದೇ ಪುಸ್ತಕ ಓದುವುದಕ್ಕೆ ಜನ ಇದ್ದಾರೆ ಅನ್ನುವುದಕ್ಕೆ ಸಾಕ್ಷಿ. ಯಾವ ಪ್ರಕಾಶಕರೂ ನಷ್ಟ ಮಾಡಿಕೊಂಡು ಪುಸ್ತಕ ಪ್ರಕಟಿಸುವುದಿಲ್ಲ. ವಿವಿಧ ಪ್ರಕಾರಗಳಲ್ಲಿ ಪುಸ್ತಕ ಬರ್ತಾ ಇರೋದು ಬಹಳ ಆರೋಗ್ಯಕರ ಸಂಗತಿ.

* ಈಚಿನ ದಿನಗಳಲ್ಲಿ ನಿಮ್ಮನ್ನು ತುಂಬಾ ಕಾಡಿದ ಕೃತಿ ಯಾವುದು?
ಡಾ. ವಿಜಯಾ ಅವರ “ಕುದಿ ಎಸರು’. ಅಲ್ಲಿ ಯಾವುದೇ ತೋರು ಗಾರಿಕೆ ಇಲ್ಲ. ಅವರು ಪ್ರಾಮಾಣಿಕವಾಗಿ, ಸರಳವಾಗಿ ಮತ್ತು ಭಾವ ಪೂರ್ಣವಾಗಿ ತಮ್ಮ ಮನಸಿನ ಮಾತುಗಳನ್ನು ಹೇಳಿಕೊಂಡಿದ್ದಾರೆ. ಈ ಕೃತಿ, ಇಂದಿನ ಮಹಿಳೆಯರಿಗೆ ಪ್ರೇರಣೆ ನೀಡುವಂಥ ಕೃತಿ.

* ಕವಿಯಾಗಿ ಅಲ್ಲದಿದ್ದರೆ, ಜನ ನಿಮ್ಮನ್ನು ಯಾವ ರೀತಿಯಲ್ಲಿ ನೆನಪು ಮಾಡಿಕೊಳ್ಳಲಿ ಅಂತ ಬಯಸುವಿರಿ?
ಒಬ್ಬ ಗೆಳೆಯನನ್ನಾಗಿ ಜನ ನನ್ನನ್ನು ನೆನಪು ಮಾಡಿಕೊಳ್ಳಲಿ ಎಂಬುದು ನನ್ನ ಆಸೆ.

* ಕಲಬುರಗಿ ಸಮ್ಮೇಳನ ಹೇಗಿದೆ?
ಅಚ್ಚುಕಟ್ಟಾಗಿ ನಡೆಯುತ್ತಿದೆ.ರಾಜ್ಯದ ಮೂಲೆಮೂಲೆಯಿಂದ ಜನರು ಬಂದಿದ್ದಾರೆ. ಕನ್ನಡದ ಹಬ್ಬ ಯಾವತ್ತೂ ಅದ್ಧೂರಿಯಿಂದಲೇ ನಡೆಯುತ್ತದೆ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. ಅವರ ಸಂಭ್ರಮದ ಕಲರವ ಸದಾ ನೆನಪಲ್ಲಿ ಇರುತ್ತದೆ.

* ಎ.ಆರ್‌.ಮಣಿಕಾಂತ್‌

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.