State Govt; ರಾಜ್ಯದ ಎಲ್ಲ ಕೋರ್ಟ್ಗಳಲ್ಲಿ ಕಲಾಪಗಳ ನೇರ ಪ್ರಸಾರ
Team Udayavani, Feb 16, 2024, 11:35 PM IST
ಬೆಂಗಳೂರು: ಹೈಕೋರ್ಟ್ಗಷ್ಟೇ ಸಿಮೀತವಾಗಿದ್ದ ನ್ಯಾಯಾಲಯ ಕಲಾಪಗಳ ನೇರ ಪ್ರಸಾರ ಮಾಡುವ ಯೋಜನೆ ಇದೀಗ ರಾಜ್ಯದ ಎಲ್ಲಾ ನ್ಯಾಯಾಲಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಾರಿಯ ಬಜೆಟ್ನಲ್ಲಿ ಈ ಕುರಿತು ಪ್ರಸ್ತಾಪಿಸಲಾಗಿದೆ.
ರಾಜ್ಯದ ಎಲ್ಲ ನ್ಯಾಯಾಲಯಗಳ ಕಲಾಪಗಳ ನೇರ ಪ್ರಸಾರ ಮಾಡಲು ಮತ್ತು ನ್ಯಾಯಾಲಯಗಳ ಆಡಳಿತ ವ್ಯವಸ್ಥೆ ಆಧುನೀಕರಿಸಲು 94 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ 180 ಕೋಟಿ ರೂ. ಒದಗಿಸಲಿದೆ. ಇನ್ನು ರಾಜ್ಯದ ವಿವಿಧ ಕೋರ್ಟ್ಗಳ ಕಟ್ಟಡಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಗಳನ್ನು ಅಭಿವೃದ್ಧಿಪಡಿಸ ಲಾಗುತ್ತಿದ್ದು, 2024-25ನೇ ಸಾಲಿನಲ್ಲಿ ಈ ಉದ್ದೇಶಕ್ಕಾಗಿ 175 ಕೋಟಿ ರೂ. ಅನುದಾನ ಒದಗಿಸಲಾಗುವುದು.
ವಿರಾಜಪೇಟೆಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
ಹಿಂದುಳಿದ ತಾಲೂಕುಗಳಿಗೆ
ಹೊಸ ಅಭಿವೃದ್ಧಿ ಸೂಚ್ಯಂಕ
ಬೆಂಗಳೂರು: ಡಾ.ಎಂ.ನಂಜುಂಡಪ್ಪ ವರದಿಯ ಆಧಾರದಲ್ಲಿ ರೂಪಿಸಿರುವ ಯೋಜನೆಗಳಿಂದ ಆಗಿರುವ ಬದಲಾವಣೆ ಮತ್ತು ಪರಿಣಾಮಗಳ ಅಧ್ಯ ಯನಕ್ಕೆ ಉನ್ನತಾಧಿಕಾರಿ ಸಮಿತಿ ರಚಿಸುವ ಹಾಗೆಯೇ ಆ ಸಮಿತಿ ನೀಡುವ ವರದಿಯ ಆಧಾರದಲ್ಲಿ ಹೊಸ ಅಭಿವೃದ್ಧಿ ಸೂಚ್ಯಂಕ ವನ್ನು ತಯಾರಿಸುವ ತೀರ್ಮಾ ನವನ್ನು ಸರ್ಕಾರ ಪ್ರಕಟಿಸಿದೆ. ನಂಜುಂಡಪ್ಪ ವರದಿಯನ್ನು 2002ರಲ್ಲಿ ಸಲ್ಲಿಸಲಾಗಿದ್ದು, ಕಳೆದ 22 ವರ್ಷಗಳಲ್ಲಿ ಈ ವರದಿಯ ಆಧಾರದ ಮೇಲೆ ಹಿಂದುಳಿದ ಪ್ರದೇಶಗಳಲ್ಲಿ ಅಸಮ ತೋಲನೆ ನಿವಾರಿಸಲು ಬಹಳಷ್ಟು ಯೋಜನೆ ಗಳನ್ನು ಮತ್ತು ಬಂಡವಾಳ ಹೂಡಿಕೆ ಮಾಡಲಾಗಿದೆ. ಇದರಿಂದ ಆಗಿರುವ ಬದ ಲಾ ವಣೆಗಳು ಮತ್ತು ಪರಿಣಾಮಗಳನ್ನು ಈ ಸಮಿತಿ ಅಧ್ಯಯನ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ