ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾಪವೇ ಇಲ್ಲ: ಸಚಿವ ಸುನಿಲ್ ಕುಮಾರ್
Team Udayavani, Mar 25, 2022, 4:38 PM IST
ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಪರಿಸ್ಥಿತಿ ಇಲ್ಲ. ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾಪವು ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಕೆಲವೆಡೆ ಲೋಡ್ ಶೆಡ್ಡಿಂಗ್ ಆಗಿರುವುದು ಗಮನಕ್ಕೆ ಬಂದಿದೆ. ಅಭಿವೃದ್ಧಿ ಚಟುವಟಿಕೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು. ಬೆಂಗಳೂರು ಸೇರಿದಂತೆ ಇತರೆಡೆ ಎಲ್ಲಿಯೂ ಲೋಡ್ ಶೆಡ್ಡಿಂಗ್ ಆಗದಂತೆ ಕ್ರಮ ವಹಿಸಲಾಗುವುದು ಎಂದರು.
ಇದನ್ನೂ ಓದಿ:ಮುಸ್ಲಿಂ ಸಮುದಾಯದಲ್ಲಿ ಮತಾಂಧ ಶಕ್ತಿಗಳು ತಲೆಯೆತ್ತಲು ಕಾಂಗ್ರೆಸ್ ಕಾರಣ: ಆರಗ ಜ್ಞಾನೇಂದ್ರ
ಎರಡು ದಿನಗಳ ಹಿಂದೆ ವಿಧಾನ ಪರಿಷತ್ ಕಲಾಪದಲ್ಲೂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ನ ಹರೀಶ್ ಕುಮಾರ್, ‘’ಬೇಸಿಗೆ ಕಾಲ ಶುರುವಾಗಿದೆ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಸರ್ಕಾರ ಕೂಡಲೇ ಕಲ್ಲಿದ್ದಲಿನ ಕೊರತೆ ನೀಗಿಸಿಕೊಳ್ಳಬೇಕು’ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ