ಲಾಕ್ಡೌನ್: ಸ್ಥಳೀಯ ತೀರ್ಮಾನ?
ಜಿಲ್ಲಾಡಳಿತಗಳಿಗೆ ವಿಸ್ತರಣೆ ಅಥವಾ ತೆರವು ಅಧಿಕಾರ ನೀಡಲು ಚಿಂತನೆ
Team Udayavani, Jul 21, 2020, 7:02 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವು ನಿರ್ಧಾರದ ಬೆನ್ನಲ್ಲೇ ದಕ್ಷಿಣ ಕನ್ನಡ ಸಹಿತ ರಾಜ್ಯದ ಇತರ ಜಿಲ್ಲೆಗಳಲ್ಲಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.
ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ತೀರ್ಮಾನಕ್ಕೆ ಬಿಡುವ ಬಗ್ಗೆ ಚಿಂತನೆ ಇದೆ.
ಬಿಬಿಎಂಪಿ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಜತೆಗೆ ದ.ಕ., ಧಾರವಾಡ, ಬೀದರ್, ಯಾದಗಿರಿ, ಕಲಬುರಗಿ, ಬೆಳಗಾವಿ, ರಾಯಚೂರುಗಳಲ್ಲಿಯೂ ಲಾಕ್ಡೌನ್ ಜಾರಿಯಲ್ಲಿದೆ.
ಸೋಮವಾರ ನಡೆದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.
ಲೋಪವಾಗದಂತೆ ಕ್ರಮ
ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಕೋವಿಡ್ 19 ನಿಯಂತ್ರಣ ನಿಟ್ಟಿನಲ್ಲಿ ತಪಾಸಣೆ, ತ್ವರಿತ ಪರೀಕ್ಷಾ ವರದಿ, ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ತಪಾಸಣೆ ಮತ್ತು ಪರೀಕ್ಷೆ ಪ್ರಮಾಣ ಹೆಚ್ಚಳ, ಸಿಎಂ ಸೂಚನೆ ನೀಡಿರುವಂತೆ ಆಯಾ ವಿಧಾನ ಸಭೆ ಕ್ಷೇತ್ರ ಮತ್ತು ವಾರ್ಡ್ ಮಟ್ಟದಲ್ಲೇ ಸೋಂಕುಪೀಡಿತರಿಗೆ ಚಿಕಿತ್ಸೆ ದೊರೆಯುವಂತೆ ಮಾಡುವುದು.
ಪರೀಕ್ಷೆ ಹೆಚ್ಚಳ, ಸೋಂಕು ಕಡಿಮೆ
ರಾಜ್ಯದಲ್ಲಿ ಸೋಮವಾರ ಹಿಂದೆಂದಿಗಿಂತಲೂ ಅತೀ ಹೆಚ್ಚು 36,473 ಜನರನ್ನು ಕೋವಿಡ್ 19 ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನೊಂದೆಡೆ ಕಳೆದ ಎರಡು ದಿನಗಳಲ್ಲಿ ನಾಲ್ಕು ಸಾವಿರದ ಗಡಿಯಲ್ಲಿದ್ದ ಸೋಂಕು ಪ್ರಕರಣಗಳು ಇಳಿಕೆಯಾಗಿದೆ.
3,648 ಮಂದಿಗೆ ಹೊಸದಾಗಿ ಸೋಂಕು ತಗಲಿದ್ದು, 72 ಸೋಂಕುಪೀಡಿತರು ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 67,420ಕ್ಕೆ, ಸಾವಿಗೀಡಾದವರ ಸಂಖ್ಯೆ 1,403ಕ್ಕೆ, ಗುಣಮುಖರಾದವರ ಸಂಖ್ಯೆ 23,795ಕ್ಕೆ ಏರಿದೆ. ಬೆಂಗಳೂರಿನಲ್ಲಿ ಅತೀ ಹೆಚ್ಚು 1,452 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 31 ಮಂದಿ ಮೃತಪಟ್ಟಿದ್ದಾರೆ.
ಭರವಸೆ ಮೂಡಿಸಿದ ಆಕ್ಸ್ಫರ್ಡ್ ಲಸಿಕೆ
ಲಂಡನ್: ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯ ಸಂಶೋಧಿಸಿರುವ ಕೋವಿಡ್ 19 ಲಸಿಕೆಯ ಆರಂಭಿಕ ಎರಡು ಹಂತಗಳ ಪ್ರಯೋಗ ಫಲಿತಾಂಶಗಳು ಭರವಸೆ ಮೂಡಿಸಿವೆ. ಆಕ್ಸ್ ಫರ್ಡ್ ತಜ್ಞರು ಶೋಧಿಸಿದ ‘ಎಝೆಡ್ಡಿ1222’ ಲಸಿಕೆಯನ್ನು ಪಡೆದ ಹಲವರಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಯಾವುದೇ ಅಡ್ಡ ಪರಿಣಾಮ ಉಂಟು ಮಾಡದೆ ಲಸಿಕೆ ಸೋಂಕು ಪೀಡಿತನ ದೇಹದಲ್ಲಿ ಕೆಲಸ ಮಾಡಿದೆ. ಕೋವಿಡ್ 19 ವಿರುದ್ಧ ಪ್ರಬಲವಾಗಿ ಹೋರಾಡುವ ಟಿ- ಸೆಲ್ ರೋಗ ನಿರೋಧಕಗಳನ್ನು ಹೆಚ್ಚಿಸುವಲ್ಲಿ ಸಫಲವಾಗಿದೆ.
ಜಾಗತಿಕ ಸೋಂಕು ಪೀಡಿತರ ಸಂಖ್ಯೆ : 1,47,41,412
ಒಟ್ಟು ಸಾವು (ಜಗತ್ತು): 6,10,747
ಭಾರತ (ಸೋಂಕು): 11,52,355
ಚೇತರಿಕೆ : 7,24,494
ಸಾವು (ಭಾರತ) : 28,078
ಕರ್ನಾಟಕ (ಸೋಂಕು): 67,420
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ