ಮಾಡದ ತಪ್ಪಿಗೆ ಕೂಲಿ ಕಾರ್ಮಿಕರು ಬಂಧಿ


Team Udayavani, Apr 9, 2020, 1:30 PM IST

state-news-tdy-1

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ 19 ನಿಯಂತ್ರಿಸಲು ದೇಶಾದ್ಯಂತ ಲಾಕ್‌ ಡೌನ್‌ ಘೋಷಣೆ ಮಾಡಿರುವುದರಿಂದ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವವರು ಕೂಲಿ ಹಾಗೂ ವಲಸೆ ಕಾರ್ಮಿಕರು.

ಮಾ.23 ರಂದು ಕೇಂದ್ರ ಸರ್ಕಾರ ಲಾಕ್‌ ಡೌನ್‌ ಘೋಷಣೆ ಮಾಡಿರುವುದರಿಂದ. ಬೆಂಗಳೂರು, ಮುಂಬೈ, ಪುಣೆ, ಚೆನ್ನೈ, ಹೈದರಾಬಾದ್‌ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯಗಳ ಮಹಾನಗರಗಳಿಗೆ ಕೂಲಿ ಕೆಲಸಕ್ಕೆ ಹೋಗಿದ್ದ ಕಟ್ಟಡ ಹಾಗೂ ಇತರೆ ಕಾರ್ಮಿಕರು ಮಕ್ಕಳು, ವಯಸ್ಸಾದವರು, ಮಹಿಳೆಯರು ಸೇರಿದಂತೆ ಎಲ್ಲರೂ ತಮ್ಮ ಊರಿಗೆ ತೆರಳಲು ರಾತ್ರೋ ರಾತ್ರಿ ಗಂಟು ಮೂಟೆ ಕಟ್ಟಿಕೊಂಡು ಹೊರಟವರನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಆಯಾ ಜಿಲ್ಲಾ ಗಡಿ ಭಾಗದಲ್ಲಿಯೇ ಅವರನ್ನು ತಡೆದು ಕಲ್ಯಾಣ ಮಂಟಪ, ಸಮುದಾಯ ಭವನ ಸೇರಿದಂತೆ ಸಾರ್ವಜನಿಕ ವಸತಿ ಗೃಹಗಳಲ್ಲಿ ಇರಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ 19  ವೈರಸ್‌ ಹರಡುತ್ತಿರುವ ಪ್ರಮಾಣ ಗಮನಿಸಿದರೆ, ಏ.14 ರ ನಂತರವೂ ಲಾಕ್‌ಡೌನ್‌ ಸಡಿಲಗೊಳಿಸುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ.

ಆತಂಕದಲ್ಲಿ ಕಾರ್ಮಿಕರು: ತಮ್ಮದಲ್ಲದ ತಪ್ಪಿಗೆ ತೊಂದರೆಗೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು ಹೊರ ರಾಜ್ಯಗಳ ಗಡಿ ಭಾಗದ ಜಿಲ್ಲೆಗಳಲ್ಲೂ ಸಾಕಷ್ಟು ಜನರಿದ್ದಾರೆ. ಕೇರಳದ ಕಾಸರಗೋಡು, ಗೋವಾ ಗಡಿ ಭಾಗ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯ ಗಳ ಗಡಿ ಭಾಗದಲ್ಲಿ ರಾಜ್ಯದ ಲಕ್ಷಾಂತರ ಕಾರ್ಮಿ ಕರು ಅಸಹಾಯಕರಾಗಿ ಅನ್ಯ ರಾಜ್ಯಗಳ ಆಡಳಿತ ವ್ಯಾಪ್ತಿಯಲ್ಲಿ ಸಿಲುಕಿಕೊಂಡಿದ್ದು ರಾಜ್ಯ ಗಡಿ ಪ್ರವೇಶಕ್ಕೆ ಅವರಿಗೆ ನಿರ್ಬಂಧ ಹೇರಲಾಗಿದೆ. ಅಲ್ಲದೆ ಬೇರೆ ಬೇರೆ ಜಿಲ್ಲೆಗಳ ಗಡಿ ಭಾಗದಲ್ಲಿಯೂ ತಡೆ ಹಿಡಿಯಲಾಗಿದೆ.

ಈಗಾಗಲೇ ಲಕ್ಷಾಂತರ ಕಾರ್ಮಿಕರು ಸರಿಯಾಗಿ ಊಟ, ವಸತಿ, ನಿದ್ರೆಯಿಲ್ಲದೆ 15 ದಿನಗಳನ್ನು ಸರ್ಕಾರದ ಅನಧಿಕೃತ ಬಂಧನದಲ್ಲಿ ದಿನ ಕಳೆದಿದ್ದಾರೆ. ಈಗ ಏ.14ರ ನಂತರವಾದರೂ ಸರ್ಕಾರ ತಮ್ಮನ್ನು ತಮ್ಮ ಊರುಗಳಿಗೆ ಕಳುಹಿಸುತ್ತದೆಯೋ ಇಲ್ಲವೋ ಎನ್ನುವ ಆತಂಕದಲ್ಲಿದ್ದಾರೆ. ಊರಿಗೆ ಕಳುಹಿಸಲು ಸಲಹೆ: ಕೂಲಿ ಕಾರ್ಮಿಕರು ಯಾವುದೇ ಸೋಂಕು ಇಲ್ಲದಿದ್ದರೂ ಗಡಿ ಭಾಗಗಳಲ್ಲಿ ಅಸಹಾಯಕತೆಯಿಂದ ಸರ್ಕಾರ ನೀಡುವ ಆಹಾರಕ್ಕಾಗಿ ಕೈಚಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕಲ್ಯಾಣ ಮಂಟಪ ಹಾಗೂ ಸಮುದಾಯ ಭವನ ಗಳಲ್ಲಿ ಕೂಡಿ ಹಾಕಿರುವ ಕಾರ್ಮಿಕರನ್ನು ತಪಾಸಣೆ ಮಾಡಿ ಅವರ ಊರುಗಳಿಗೆ ಸರ್ಕಾರವೇ ಸಾರಿಗೆ ವ್ಯವಸ್ಥೆ ಮಾಡಿ ತಲುಪಿಸುವ ಕೆಲಸ ಮಾಡಬೇಕೆಂಬ ಸಲಹೆ ವ್ಯಕ್ತವಾಗಿದೆ.

ಪ್ರತಿಪಕ್ಷಗಳು ಮುಖ್ಯಮಂತ್ರಿಗಳು ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಈ ಸಲಹೆ ನೀಡಿದ್ದವು ಎಂದು ತಿಳಿದು ಬಂದಿದೆ. ಇದರಿಂದ ಅತಂತ್ರದ ಭಯದಿಂದ ಜೀವನ ನಡೆಸುತ್ತಿರುವ ಕಾರ್ಮಿಕರಿಗೆ ತಮ್ಮ ಊರು ಹಾಗೂ ಮನೆಗಳಲ್ಲೇ ಇದ್ದೇವೆ ಎಂಬ ಧೈರ್ಯ ಬರುತ್ತದೆ. ಅಲ್ಲದೇ ಸರ್ಕಾರಕ್ಕೂ ಇದರಿಂದ ಆರ್ಥಿಕ ನಷ್ಟ ತಪ್ಪಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪಡಿತರವೂ ಇಲ್ಲ: ಉತ್ತರ ಕರ್ನಾಟಕ ಭಾಗದ ಲಕ್ಷಾಂತರ ಕಾರ್ಮಿಕರು ಬೆಂಗಳೂರು ಹಾಗೂ ಹೊರ ರಾಜ್ಯಗಳಿಗೆ ಕೂಲಿಗೆ ತೆರಳಿದ್ದವರು ಈಗ ಸರ್ಕಾರದ ನಿಯಂತ್ರಣಾ ಕೇಂದ್ರಗಳಲ್ಲಿ ಬಂಧಿಯಾಗಿದ್ದಾರೆ.

ಹೀಗಾಗಿ ಅವರಿಗೆ ಸರ್ಕಾರದಿಂದ ಸಿಗುವ ಪಡಿತರವೂ ಸಿಗದಂತಾಗಿದೆ. ಸರ್ಕಾರ ಅವರನ್ನು ಸ್ವಂತ ಊರುಗಳಿಗೆ ಸ್ಥಳಾಂತರಿಸಿ, ಅವರ ಮನೆಗಳಿಗೆ ಪಡಿತರ ವಿತರಿಸಿ, ಸರ್ಕಾರ ಅನುಮತಿ ನೀಡುವವರೆಗೂ ಹೊರಗಡೆ ತಿರುಗಾಡದಂತೆ ಹೋಮ್‌ ಕ್ವಾರಂಟೈನ್‌ ಮಾಡಬಹುದು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಇನ್ನೂ ನಿರ್ಧರಿಸದ ಸರ್ಕಾರ :  ಸರ್ಕಾರದ ನಿಯಂತ್ರಣದಲ್ಲಿಟ್ಟುಕೊಂಡಿರುವ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸುವ ಬಗ್ಗೆ ಸರ್ಕಾರ ಯಾವುದೇ ರೀತಿಯ ಆಲೋಚನೆ ಮಾಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರ ಲಾಕ್‌ ಡೌನ್‌ ಸಡಿಲಗೊಳಿಸುವ ಬಗ್ಗೆ ನಿರ್ದೇಶನ ನೀಡುವವರೆಗೂ ರಾಜ್ಯ ಸರ್ಕಾರ ಯಥಾಸ್ಥಿತಿ ಕಾಯ್ದುಕೊಂಡು ಹೋಗುವ ಆಲೋಚನೆ ಯಲ್ಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಏ.14 ರ ನಂತರವೂ ಕೂಲಿ ಕಾರ್ಮಿಕರು ತವರು ಸೇರುವುದು ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬೇರೆ ರಾಜ್ಯ ಹಾಗೂ ಜಿಲ್ಲೆಗಳ ಗಡಿಗಳಲ್ಲಿ ಸಿಲುಕಿಕೊಂಡಿರುವ ಕೂಲಿ ಕಾರ್ಮಿಕರನ್ನು ತಪಾಸಣೆ ಮಾಡಿ, ಅವರಿಗೆ ಯಾವುದೇ ಸೋಂಕು ಇಲ್ಲದಿರುವುದನ್ನು ಖಚಿತಪಡಿಸಿ ಕೊಂಡು, ಅವರ ಊರುಗಳಿಗೆ ಕಳುಹಿಸಿಕೊಡಲು ಸರ್ಕಾರ ವ್ಯವಸ್ಥೆ ಮಾಡಬೇಕು. ಈ ಕುರಿತು ಮುಖ್ಯಕಾರ್ಯದರ್ಶಿಯೊಂದಿಗೂ ಮಾತನಾಡಿದ್ದೇನೆ. ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ

ಸರ್ಕಾರ ಗುರುತಿಸಿರುವ ನಿಯಂತ್ರಣ ಕೇಂದ್ರಗಳಲ್ಲಿ ವಾಸವಿರುವ ಕೂಲಿ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ನಿರ್ಧಾರವಾಗಿಲ್ಲ. ಮೌನೀಶ್‌ ಮುದ್ಗಿಲ್‌, ಕೋವಿಡ್ 19  ನಿಯಂತ್ರಣ ನೋಡಲ್‌ ಅಧಿಕಾರಿ

 

ಶಂಕರ ಪಾಗೋಜಿ

ಟಾಪ್ ನ್ಯೂಸ್

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.