Lok Sabha Elections: ಇಂದೂ ನಡೆಯದು ಸಭೆ,ಕಾಂಗ್ರೆಸ್‌ ಪಟ್ಟಿ ವಿಳಂಬ


Team Udayavani, Mar 15, 2024, 6:50 AM IST

Lok Sabha Elections: ಇಂದೂ ನಡೆಯದು ಸಭೆ,ಕಾಂಗ್ರೆಸ್‌ ಪಟ್ಟಿ ವಿಳಂಬ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ 7 ಕ್ಷೇತ್ರಗಳಿಗೆ ಮೊದಲ ಪಟ್ಟಿ ಬಿಡುಗಡೆ ಮಾಡಿ 8 ದಿನಗಳು ಕಳೆದರೂ ಬಾಕಿ ಉಳಿದಿರುವ 21 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಗ್ರಹಣ ಹಿಡಿದಿದೆ. ಈ ಮಧ್ಯೆ ಶುಕ್ರವಾರ ನಡೆಯಬೇಕಿದ್ದ ಕೇಂದ್ರ ಚುನಾವಣ ಸಮಿತಿ ಸಭೆ ಸೋಮವಾರಕ್ಕೆ ಮುಂದೂಡಿಕೆ ಆಗಿದ್ದು, ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬವಾಗಲಿದೆ.

ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನ್ಯಾಯ ಯಾತ್ರೆಯ ಸಮಾರೋಪ ಸಮಾರಂಭವು  ರವಿವಾರ ಮುಂಬಯಿಯಲ್ಲಿ ನಡೆಯಲಿರುವುದರಿಂದ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ನಾಯಕರು ಅಲ್ಲಿಗೆ ತೆರಳುತ್ತಿದ್ದಾರೆ. ಜತೆಗೆ ದೇಶದ ವಿವಿಧ ಭಾಗಗಳಿಂದ ಕಾಂಗ್ರೆಸ್‌ ನಾಯಕರ ದಂಡು ಸೇರಲಿದೆ. ಹೀಗಾಗಿ  ಶುಕ್ರವಾರ ನಡೆಯಬೇಕಿದ್ದ ಸಿಇಸಿ ಸಭೆ ರದ್ದಾಗಿದೆ.

ಬಾಕಿ ಉಳಿದಿರುವ 21 ಕ್ಷೇತ್ರಗಳ ಪೈಕಿ ಕ್ಷೇತ್ರಗಳಲ್ಲಿ ಇಬ್ಬಿಬ್ಬರ ಹೆಸರು ಹಾಗೂ ಉಳಿದ ಕ್ಷೇತ್ರಗಳಿಗೆ ಈಗಾಗಲೇ ಒಂದೊಂದೇ ಹೆಸರು (ಸಿಂಗಲ್‌ ನೇಮ್‌) ಗಳನ್ನು ಕೇಂದ್ರ ಚುನಾವಣ ಸಮಿತಿಗೆ ಶಿಫಾರಸು ಮಾಡಲಾಗಿದೆ. ಸೋಮವಾರ ಸಮಿತಿಯು ಸಭೆ ಸೇರಿ ಈ ಸಂಭವನೀಯ ಪಟ್ಟಿಗೆ ಅಧಿಕೃತ ಮುದ್ರೆ ಹಾಕಲಿದೆ.

ಸಂಭವನೀಯ ಅಭ್ಯರ್ಥಿಗಳು:

ಬೆಂಗಳೂರು ದಕ್ಷಿಣ- ಸೌಮ್ಯಾ ರೆಡ್ಡಿ

ಬೆಂಗಳೂರು ಉತ್ತರ- ಪ್ರೊ| ರಾಜೀವ್‌ ಗೌಡ

ಬೆಂಗಳೂರು ಕೇಂದ್ರ- ಮನ್ಸೂರ್‌ ಅಲಿಖಾನ್‌

ಕಲಬುರಗಿ- ರಾಧಾಕೃಷ್ಣ ದೊಡ್ಡಮನಿ

ಬಳ್ಳಾರಿ- ವೆಂಕಟೇಶ್‌ ಪ್ರಸಾದ್‌

ಕೋಲಾರ- ಕೆ.ಎಚ್‌.ಮುನಿಯಪ್ಪ/ ಡಾ| ಎಲ್‌.ಹನುಮಂತಯ್ಯ

ಚಾಮರಾಜನಗರ-ದರ್ಶನ್‌ ಧ್ರುವನಾರಾಯಣ/ಸುನಿಲ್‌ ಬೋಸ್‌

ಮೈಸೂರು- ಎಂ.ಲಕ್ಷ್ಮಣ್‌

ಚಿಕ್ಕಮಗಳೂರು-ಉಡುಪಿ- ಜಯಪ್ರಕಾಶ್‌ ಹೆಗ್ಡೆ

ದಕ್ಷಿಣ ಕನ್ನಡ- ಪದ್ಮರಾಜ್‌

ಚಿತ್ರದುರ್ಗ- ಬಿ.ಎನ್‌.ಚಂದ್ರಪ್ಪ

ಬೆಳಗಾವಿ- ಮೃಣಾಲ್‌ ಹೆಬ್ಟಾಳ್ಕರ್‌

ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ

ಹುಬ್ಬಳ್ಳಿ ಧಾರವಾಡ- ವಿನೋದ್‌ ಅಸೂಟಿ

ಬಾಗಲಕೋಟೆ- ಸಂಯುಕ್ತ ಪಾಟೀಲ್‌

ಉತ್ತರ ಕನ್ನಡ- ಅಂಜಲಿ ನಿಂಬಾಳ್ಕರ್‌

ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ

ಕೊಪ್ಪಳ- ರಾಜಶೇಖರ ಹಿಟ್ನಾಳ್‌/ ಅಮರೇಗೌಡ ಬಯ್ನಾಪುರ

ರಾಯಚೂರು -ಕುಮಾರ ನಾಯಕ್‌

ಬೀದರ್‌- ರಾಜಶೇಖರ ಪಾಟೀಲ್‌  ಹುಮ್ನಾಬಾದ್‌/ ಸಾಗರ್‌ ಬಿ. ಖಂಡ್ರೆ

 ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ

ಪಟ್ಟಿ ಬಿಡುಗಡೆಗೆ ಒತ್ತಡ ಹಾಕಿದ್ದೇವೆ:  ಸತೀಶ:

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಎಲ್ಲ ಕ್ಷೇತ್ರಗಳಿಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೇಗ ಅಂತಿಮಗೊಳಿಸಿ, ಪಟ್ಟಿ ಬಿಡುಗಡೆ ಮಾಡಲು ಒತ್ತಡ ಹಾಕಿದ್ದೇವೆ. ಅಭ್ಯರ್ಥಿ ಬೇಗ ಆಯ್ಕೆಯಾದರೆ ಚುನಾವಣೆ ಕಾರ್ಯಕ್ಕೆ ಸಹಕಾರವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಕ್ಷೇತ್ರಗಳಿಗೆ ಇನ್ನೂ ಚರ್ಚೆ ಹಂತದಲ್ಲಿದ್ದು,  ಕೆಲವು ಅಂತಿಮವಾಗಿವೆ. ಇನ್ನೊಂದು ವಾರದಲ್ಲಿ ಅಂತಿಮ ಪಟ್ಟಿ ಘೋಷಣೆ ಆಗಲಿದೆ ಎಂದರು.  ಬೆಳಗಾವಿಗೆ ನನ್ನ ಪುತ್ರಿಗೆ ಟಿಕೆಟ್‌ ಕೊಡುತ್ತಾರೋ ಇಲ್ಲವೋ  ಗೊತ್ತಿಲ್ಲ. ಯಾರಿಗೆ ಕೊಟ್ಟರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಇಡೀ ರಾಜ್ಯದಲ್ಲೂ ಕೆಲಸ ಮಾಡಬೇಕಷ್ಟೇ ಎಂದು ಹೇಳಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.