Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

ರಾಮನಗರ,ಕಾರವಾರ ಬೀದರ್ ನಲ್ಲಿ ಕಾರ್ಯಾಚರಣೆ... 20 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ಪಿಡಿಒ!!

Team Udayavani, Mar 27, 2024, 9:03 AM IST

1-aaaa

ಎಇಇ ಪ್ರಕಾಶ್ ರೇವಣಕರ್ ಮನೆ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆಡೆ ಭ್ರಷ್ಟರ ಬೇಟೆಗಿಳಿದಿದ್ದಾರೆ.

ರಾಮನಗರ: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಂಚನಾಯ್ಕನಹಳ್ಳಿ ಗ್ರಾಪಂ ಪಿಡಿಒ ಯತೀಶ್ ರನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಆಸ್ತಿಗಳಿಸಿದ ದೂರಿನ ಹಿನ್ನೆಲೆ ಪಿಡಿಒಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಮೈಸೂರು, ಚನ್ನಪಟ್ಟಣದಲ್ಲಿ ಮನೆಗಳನ್ನ ಹೊಂದಿದ್ದು, ಒಟ್ಟು ಏಳು ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.ಬಿಡದಿಯ ಬಾಡಿಗೆ ಮನೆ ಈಗಲ್ಟನ್ ರೆಸಾರ್ಟ್ ನಲ್ಲಿ ಯತೀಶ್ ನನ್ನ ವಶಕ್ಕೆ ಪಡೆಯಲಾಗಿದೆ.

ಮೈನಾಯಕನಹಳ್ಳಿ ಪಿಡಿಒ ಮೇಲೂ ದಾಳಿ
ಚನ್ನಪಟ್ಟಣ ತಾಲೂಕಿನ ಮೈನಾಯಕನಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಶಿಭಾ ನಿಖಾತ್ ಮನೆ ಮೇಲೂ‌ ದಾಳಿ ನಡೆಸಲಾಗಿದೆ.

ಚನ್ನಪಟ್ಟಣದಲ್ಲಿ ಮನೆ ಹೊಂದಿರೋ ಶೀಭಾ ಮನೆ ಮೇಲೆ ದಾಳಿ‌ ಮಾಡಿರುವ ಅಧಿಕಾರಿಗಳು ಯತೀಶ್ ಹಾಗೂ ಶಿಭಾ ನಿಖಾತ್ ಒಂದೇ ಬ್ಯಾಚ್ ಪಿಡಿಒಗಳಾಗಿದ್ದಾರೆ. ಇಬ್ಬರ ಮೇಲೂ ಅಕ್ರಮ ಆಸ್ತಿ ಗಳಿಕೆ ದೂರು ಕೇಳಿ ಬಂದಿತ್ತು.

ಯತೀಶ್ 20 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ ಎಂದು ಹೇಳಲಾಗಿದೆ..

ಕಾರವಾರದಲ್ಲೂ ಕಾರ್ಯಾಚರಣೆ

ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಎಇಇ) ಪ್ರಕಾಶ್ ರೇವಣಕರ್ ಮನೆ, ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಐಶ್ವರ್ಯ ರೆಸಿಡೆನ್ಸಿ, ಪ್ರಕಾಶ್ ರೇವಣಕರ್ ಮನೆ, ನಗರಾಭಿವೃದ್ಧಿ ಪ್ರಾಧಿಕಾದ ಕಚೇರಿಯಲ್ಲಿ ದಾಖಲೆಗಳ ಹಾಗೂ ಅಕ್ರಮ ಸಂಪತ್ತಿನ ತಪಾಸಣೆ ನಡೆಯುತ್ತಿದೆ. ಅಪಾರ ಪ್ರಮಾಣದ ಬಂಗಾರ, ಹಣ, ವಿವಿದೆಡೆ ಆಸ್ತಿ ಮಾಡಿರುವ ದಾಖಲೆಗಳು ಸಿಗುವ ಸಂಭವವಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ. ಕಾರವಾರ ಲೋಕಾಯುಕ್ತ ಎಸ್ಪಿ ಹಾಗೂ ಪಕ್ಕದ ಜಿಲ್ಲೆಯ ಎಸ್ಪಿ ದಾಳಿಯ ನೇತೃತ್ವ ವಹಿಸಿದ್ದಾರೆ.

ಬೀದರ್ ನಲ್ಲಿ ಕಾರ್ಯಾಚರಣೆ
ಬೀದರ್ ಕಾರಂಜಾ ವಿಭಾಗದ ಇಇ ಶಿವಕುಮಾರ ಸ್ವಾಮಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ನೀಡಿದ್ದಾರೆ. ಅಕ್ರಮ ಅಸ್ತಿ ಗಳಿಕೆ ಆರೋಪ ಹಿನ್ನಲೆ ಲೋಕಾಯುಕ್ತ ಡಿವೈಎಸ್.ಪಿ ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಬೀದರ್ ಅಗ್ರಿಕಲ್ಚರ್ ಕಾಲೋನಿಯ ಮನೆ, ನಾಗೂರ (ಬಿ) ಗ್ರಾಮದ ಮನೆ,ಭಾಲ್ಕಿಯಲ್ಲಿರುವ ಕಾರಂಜಾ ಕಚೇರಿ, ಕಲ್ಬುರ್ಗಿ ಪಟ್ಣಣದ ಮನೆಯಲ್ಲಿ ಅಧಿಕಾರಿಗಳಿಂದ ಶೋಧ ನಡೆಸಲಾಗುತ್ತಿದೆ.

ಮಹತ್ವದ ದಾಖಲೆ ವಶಪಡಿಸಿ ಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ KRIDL EE ಸದಾಶಿವಯ್ಯ ಅವರ ಚಿಕ್ಕಬಳ್ಳಾಪುರ ಕಚೇರಿ, ಆಸ್ತಿ ಪಾಸ್ತಿ ಮೇಲೆ ದಾಳಿ ನಡೆಸಲಾಗಿದೆ.

ಯಲಹಂಕ ಬಾಡಿಗೆ ಮನೆ, ಮೈಸೂರಿನ ರಾಮಕೃಷ್ಣ ನಗರದ ಮನೆ, ಬಗಾದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮನೆ, ಟಿ.ನರಸೀಪುರದ ಒಕ್ಕಲಿಗೆರೆ ಮನೆ ಸೇರಿದಂತೆ ಆಸ್ತಿಗಳ ಮೇಲೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಅರಸಿದ್ದಿ ಮತ್ತು ಡಿವೈಎಸ್ಪಿ ವಿರೇಂದ್ರ ಕುಮಾರ್,ಮೋಹನ್ ಶಿವಪ್ರಸಾದ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಬಾಗಲಕೋಟ ಎಆರ್ ಟಿಒ ಮನೆ ಮೇಲೆ ದಾಳಿ

ವಿಜಯಪುರ : ವಿಜಯಪುರ ನಗರದಲ್ಲಿರುವ ಬಾಗಲಕೋಟ ಜಿಲ್ಲೆಯ ಎಆರ್ ಟಿಒ ಮತ್ತು ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಗರದ ಚಾಲುಕ್ಯ ನಗರದಲ್ಲಿ ಇರುವ ಬಾಗಲಕೋಟ ಜಿಲ್ಲೆಯ ಜಮಖಂಡಿ ಪ್ರಾದೇಶಿಕ ಸಾರಿಗೆ ಕಛೇರಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ಅವರ ಮನೆ ಹಾಗೂ ಅವರ ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ನೇತೃತ್ವದಲ್ಲಿ ಡಿಎಸ್ಪಿ ಸುರೆಶರೆಡ್ಡಿ, ಸಿಪಿಐ ಆನಂದ ಠಕ್ಕನವರ ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆಯ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.