ಭಗವಂತನ ಮುಂದೆ ಈಶ್ವರ ಶರಣಾಗತಿ!


Team Udayavani, May 24, 2019, 5:50 AM IST

q-36

ಬೀದರ: ಜಿದ್ದಾಜಿದ್ದಿನ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಎರಡನೇ ಬಾರಿಗೆ 1.16 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಮೊದಲನೇ ಸುತ್ತಿನಿಂದ ಸತತವಾಗಿ 20 ಸುತ್ತುಗಳಲ್ಲೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಮುನ್ನಡೆ ಸಾಧಿ ಸುತ್ತಲೇ ಹೋಗಿ ಕಡೆಗೆ ವಿಜಯದ ಮಾಲೆ ಧರಿಸುವಲ್ಲಿ ಯಶಸ್ವಿಯಾದರು. 20ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ 5,85,471 ಮತಗಳು ಪಡೆದುಕೊಂಡರೆ, ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆ 4,68,637 ಮತ
ಪಡೆದುಕೊಂಡಿದ್ದಾರೆ. 1,16,834 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಖೂಬಾ ಗೆಲುವು
ದಾಖಲಿಸಿದ್ದಾರೆ. ಭಾಲ್ಕಿ ಕ್ಷೇತ್ರದಿಂದ ಸತತ ಮೂರುಬಾರಿ ಶಾಸಕರಾಗಿ ಆಯ್ಕೆಗೊಂಡಿರುವ ಈಶ್ವರ
ಖಂಡ್ರೆ ಅವರು, ಅಖೀಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ಕೂಡ ಆಗಿದ್ದು, ಲೋಕಸಭೆ
ಚುನಾವಣೆಯಲ್ಲಿ ಗೆಲ್ಲುವ ಕುದರೆ ಹಾಗೂ ಮೋದಿ ಗಾಳಿ ತಡೆಯುವ ಶಕ್ತಿ ಹೊಂದಿದ್ದಾರೆ ಎಂದು ಪಕ್ಷದ
ಮುಖಂಡರು ಗುರುತಿಸಿ ಚುನಾವಣಾ ಕಣಕ್ಕೆ ಇಳಿಸಿದ್ದರು. ಆದರೆ, ಚುನಾವಣೆ ಫಲಿತಾಂಶದಲ್ಲಿ ಒಂದು ಲಕ್ಷಕ್ಕೂ ಅ ಧಿಕ ಮತಗಳಿಂದ ಸೋಲುವ ಮೂಲಕ ಈಶ್ವರ ಖಂಡ್ರೆಗೆ ತೀವ್ರ ಮುಖಭಂಗವಾಗಿದೆ. ಜಿಲ್ಲೆಯಲ್ಲಿ ಮೂವರು ಕ್ಯಾಬಿನೆಟ್‌ ಸಚಿವರು, ಮೂವರು ವಿಧಾನ ಪರಿಷತ್‌ ಸದಸ್ಯರ ಬಲವಿದ್ದರೂ ಗೆಲುವು ದಕ್ಕಿಸಿಕೊಳ್ಳುವಲ್ಲಿ ಖಂಡ್ರೆ ವಿಫಲರಾಗಿದ್ದಾರೆ. ಈ ಮೂಲಕ ಗಡಿ ಜಿಲ್ಲೆಯಲ್ಲಿ ಕೇಸರಿ ಪಡೆ ಮತ್ತಷ್ಟು ಭದ್ರ ಬುನಾದಿ ಹಾಕಿಕೊಂಡಿದೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಕಾಂಗ್ರೆಸ್‌ ನಾಯಕರಿಗೆ ಮುಖಕ್ಕೆ ಹೊಡೆದ ಹಾಗೇ ಜವಾಬು ಕೊಟ್ಟಿರುವ ಬಿಜೆಪಿ ಪಡೆ ಗೆಲುವಿನ ಕೇಕೆ ಹಾಕುತ್ತಿದೆ. 2014ರ ಚುನಾವಣೆಯಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಸ್ಪರ್ಧೆ ನಡೆಸಿದ್ದ ಬಿಜೆಪಿ ಅಭ್ಯರ್ಥಿ ಖೂಬಾ, ಮಾಜಿ ಮುಖ್ಯಮಂತ್ರಿ ದಿ| ಎನ್‌.ಧರ್ಮಸಿಂಗ್‌ ಅವರನ್ನು 93 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು. ಆ ಚುನಾವಣೆಯಲ್ಲಿ ಮೋದಿ ಗಾಳಿಯಲ್ಲಿಯೇ ಗೆಲುವು ಕಂಡ ಭಗವಂತ ಖೂಬಾ ಇದೀಗ ಮತ್ತೆ ಎರಡನೇ ಬಾರಿ ಕೂಡ ಮೋದಿ ಗಾಳಿಯಲ್ಲಿ ಜಯಗಳಿಸಿದ್ದಾರೆ. ಕ್ಷೇತ್ರದ ಜನತೆ ಮೈತ್ರಿ ಪಕ್ಷದ ಶಾಸಕರು ಹಾಗೂ ಸಚಿವರಿಗೆ ಮಣೆ ಹಾಕಿಲ್ಲ. ಸ್ವತಃ ಈಶ್ವರ ಖಂಡ್ರೆ ಕ್ಷೇತ್ರದಲ್ಲಿಯೇ 12ಸಾವಿರಕ್ಕೂ
ಅಧಿಕ ಮತಗಳು ಬಿಜೆಪಿ ಲೀಡ್‌ ಪಡೆಯುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ನಿದ್ದೆಗೆಡಿಸಿದೆ.

ಮೋದಿ ಹಾಗೂ ದೇಶದ ಅಭಿವೃದ್ಧಿಗಾಗಿ ಜನತೆ ಕೈಹಿಡಿದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗೆ ನಾನು ಕೊಟ್ಟ 420 ಹೈವೋಲ್ಟೆಜ್‌ ಶಾಕ್‌ ತಡೆಯಲಾಗದೆ ಔಟ್‌ ಆಗಿದ್ದಾರೆ.
● ಭಗವಂತ ಖೂಬಾ, ಸಂಸದ

ಜನಾದೇಶ ಗೌರವಿಸುತ್ತೇನೆ. ಬೀದರ್‌ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಭಗವಂತ್‌ ಖೂಬಾ
ಹಾಗೂ ಪ್ರಧಾನಿ ನರೇಂದ್ರ ಅವರಿಗೆ ಅಭಿನಂದಿಸುತ್ತೇನೆ.
● ಈಶ್ವರ ಖಂಡ್ರೆ, ಕಾಂಗ್ರೆಸ್‌ ಅಭ್ಯರ್ಥಿೆ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.