ನಷ್ಟದಲ್ಲಿರುವ ಸಕ್ಕರೆ ಕಾರ್ಖಾನೆ ಖಾಸಗೀಕರಣ
Team Udayavani, Dec 15, 2019, 3:00 AM IST
ಬೆಂಗಳೂರು: ನಷ್ಟದಲ್ಲಿರುವ ಸರ್ಕಾರಿ ಸಕ್ಕರೆ ಕಾರ್ಖಾನೆ ಗಳನ್ನು ಖಾಸಗಿಯವರಿಗೆ ನೀಡಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಸಕ್ಕರೆ ಸಚಿವ ಸಿ.ಟಿ.ರವಿ ಹೇಳಿದರು.
“ಉದಯವಾಣಿ’ ಸಂವಾದದಲ್ಲಿ ಮಾತನಾಡಿದ ಅವರು, ಮೈಶುಗರ್ ಹಾಗೂ ಎಂಪಿಎಂಎಲ್ ಕಾರ್ಖಾನೆಗಳ ಪುನಶ್ಚೇತನಕ್ಕೆ 500 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಲಾಗಿದೆ. ಆದರೆ, ಎರಡೂ ಕಾರ್ಖಾನೆಗಳು ನಷ್ಟದಲ್ಲಿರುವುದರಿಂದ ಅವುಗಳನ್ನು ಸರ್ಕಾರವೇ ಮುಂದುವರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ, ಖಾಸಗೀಕರಣಕ್ಕೆ ನಿರ್ಧರಿಸಲಾಗಿದೆ ಎಂದರು.