ಚಾಮರಾಜನಗರದ ಉಮ್ಮತ್ತೂರಿನಲ್ಲಿ ಭಾರಿ ಶಬ್ದ: ಆತಂಕಕ್ಕೊಳಗಾದ ಜನರು

ಭೂಕಂಪನ ದಾಖಲಾಗಿಲ್ಲ. ಇದು ಭೂಕಂಪನವಲ್ಲ

Team Udayavani, Sep 16, 2022, 9:17 PM IST

eart

ಚಾಮರಾಜನಗರ: ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3.40 ರ ಸಮಯದಲ್ಲಿ ಭಾರಿ ಶಬ್ದ ಕೇಳಿ ಬಂದ ಅನುಭವ ಜನರಿಗಾಗಿದ್ದು ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ರೀತಿಯ ಭಾರಿ ಶಬ್ದವನ್ನು ನಾವು ಹಿಂದೆ ಕೇಳಿರಲಿಲ್ಲ. ಈ ಶಬ್ದ ಕೇಳಿಬಂದ ಅನೇಕ ಸೆಕೆಂಡ್‌ಗಳವರೆಗೂ ಶಬ್ದದ ತರಂಗ ಕೇಳಿಬರುತ್ತಿತ್ತು ಎಂದು ಗ್ರಾಮಸ್ಥರು ತಿಳಿಸಿದರು.

ಈ ನಿಗೂಢ ಶಬ್ದಕ್ಕೆ ಕಾರಣವೇನು? ಎಂದು ಜನರು ಆತಂಕಗೊಂಡಿದ್ದರು. ಇದೇ ರೀತಿಯ ಶಬ್ದ ತಾಲೂಕಿನ ದಡದಹಳ್ಳಿ, ಬಸಪ್ಪನಪಾಳ್ಯ ಗ್ರಾಮಗಳಲ್ಲಿ ಮೂರು ದಿನಗಳ ಹಿಂದೆ ಕೇಳಿಬಂದಿತ್ತು.

ಈ ಬಗ್ಗೆ ಉದಯವಾಣಿ ಹಿರಿಯ ಭೂವಿಜ್ಞಾನಿ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರ ಡಾ. ಜಿ.ಎಸ್. ಶ್ರೀನಿವಾಸರೆಡ್ಡಿ ಅವರನ್ನು ಸಂಪರ್ಕಿಸಿದಾಗ, ಅವರು ಪ್ರತಿಕ್ರಿಯಿಸಿ, ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲಿ ಅಪರೂಪಕ್ಕೆ ಹೆಚ್ಚಿನ ಮಳೆ ಬಿದ್ದಾಗ, ಅಂತರ್ಜಲ ಮಟ್ಟ ಹೆಚ್ಚಾಗಿ ಭೂಮಿಯಲ್ಲಿ ನೀರಿನ ಒತ್ತಡ ಜಾಸ್ತಿಯಾಗುತ್ತದೆ. ಭೂಮಿಯೊಳಗೆ ಅನೇಕ ಟೊಳ್ಳು ಜಾಗಗಳಿರುತ್ತವೆ. ಅತೀವ ಮಳೆಯಿಂದಾಗಿ ಭೂಮಿಯೊಳಗಿನ ಬಂಡೆಗಳು ಸರಿದಾಡಿದಾಗ ಈ ರೀತಿಯ ಶಬ್ದಗಳು ಕೇಳಿ ಬರುವ ಸಾಧ್ಯತೆಗಳಿವೆ ಎಂದರು.

ರಾಜ್ಯದ ಯಾವುದೇ ಭಾಗದಲ್ಲಿ ಇಂದು ಭೂಕಂಪನ ದಾಖಲಾಗಿಲ್ಲ. ಹಾಗಾಗಿ ಇದು ಭೂಕಂಪನವಲ್ಲ. ಜನರು ಆತಂಕಕ್ಕೊಳಗಾಬಾರದು ಎಂದು ಅವರು ಸ್ಪಷ್ಟಪಡಿಸಿದರು.

ಯಳಂದೂರು ವರದಿ
ಪಟ್ಟಣವೂ ಸೇರಿದಂತೆ ತಾಲೂಕಿನ ಯರಿಯೂರು, ಕಂದಹಳ್ಳಿ, ಮೆಳ್ಳಹಳ್ಳಿ, ದುಗ್ಗಹಟ್ಟಿ, ಸಮೀಪದ ಸಂತೆಮರಹಳ್ಳಿ ಗ್ರಾಮಗಳಲ್ಲಿ ಶುಕ್ರವಾರ ಸಂಜೆ 3.40 ರ ಸಮಯದಲ್ಲಿ ಗಂಟೆ ವೇಳೆ ಭಾರಿ ಶಬ್ಧವಾಗಿದ್ದು ಸಾರ್ವಜನಿಕರು ಬೆಚ್ಚಿಬಿದ್ದಿರುವ ಘಟನೆ ಜರುಗಿದೆ.

ಇದ್ದಕ್ಕಿಂತೆಯೇ ಕಿವಿಗಪ್ಪಳಿಸಿದ ಭಾರಿ ಶಬ್ಧದಿಂದ ಸಾರ್ವಜನಿಕರು ಕ್ಷಣ ಕಾಲ ಬೆಚ್ಚಿದ್ದಾರೆ. ಅಲ್ಲದೆ ಕೆಲವು ಮನೆಗಳಲ್ಲಿ ಫ್ಯಾನ್, ಅಡುಗೆ ಪಾತ್ರೆಗಳು, ಟಿವಿಗಳು ಅಲುಗಾಡಿರುವುದಾಗಿ ಕೆಲವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಇದ್ದಕ್ಕಿದಂತೆಯೇ ಭೂಮಿ ಕಂಪಿಸಿದ ಅನುಭವವಾಗಿದ್ದು ಕೆಲ ನಾಗರೀಕರು ಮನೆಯಿಂದ ಹೊರಬಂದಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಶಬ್ಧ ಎಲ್ಲಿಂದ ಬಂತು ಎಂಬುದರ ಬಗ್ಗೆ ಯಾರಿಗೂ ಖಾತ್ರಿಯಾಗಿಲ್ಲ. ಈಚೆಗೆ ಚಾಮರಾಜನಗರ ತಾಲೂಕಿನ ಕೆಲ ಗ್ರಾಮಗಳಲ್ಲಿ ಇದೆ ತೆರನಾದ ಅನುಭವವಾಗಿತ್ತು. ಈ ಬಗ್ಗೆ ಸಂಬಂಧಪಟ್ಟ ಗಣಿ, ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಮಾಹಿತಿ ನೀಡಬೇಕಿದೆ.

ಕೆ.ಎಂ. ನಂಜುಂಡಸ್ವಾಮಿ, ಉಪ ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚಾಮರಾಜನಗರ : ಸತತ ಮಳೆಯಿಂದ ಭೂಗರ್ಭದೊಳಗೆ ಹೆಚ್ಚು ನೀರು ಸೇರುತ್ತದೆ. ಈ ಭಾಗವೆಲ್ಲಾ ಸುವರ್ಣಾವತಿ ನದಿ ದಡದಲ್ಲಿದ್ದು ಪ್ರವಾಹದಿಂದ ಬಂದಿರುವ ನೀರು ಭೂಮಿಯೊಳೆಗೆ ಸೇರಿದೆ. ಗಾಳಿಯ ಒತ್ತಡ ಹೆಚ್ಚಾಗಿ ಹೀಗಾಗುತ್ತದೆ. ಇದೊಂದು ಭೂಗರ್ಭದ ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಇದನ್ನು ಡೈನಾಮಿಕ್ ಪ್ರೆಷರ್ ಎಂದು ಕರೆಯಲಾಗುವುದರಿಂದ ಇಂತಹ ಶಬ್ಧ ಬಂದಿರಬಹುದು ಇದು ಭೂಕಂಪವಲ್ಲ. ಸಾರ್ವಜನಿಕರು ಹೆದರುವ ಅಗತ್ಯವಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.