ಮೈಸೂರಿಲ್ಲೂ ಲವ್ ಜಿಹಾದ್ ?: ಸುಂದರ ಯುವತಿ ನಾಪತ್ತೆ
Team Udayavani, Dec 19, 2017, 11:38 AM IST
ಶಿವಮೊಗ್ಗ: ಜಿಲ್ಲೆಯ ಜಯನಗರ ಠಾಣೆಯಲ್ಲಿ ಲವ್ ಜಿಹಾದ್ ಪ್ರಕರಣವೊಂದು ದಾಖಲಾಗಿದ್ದು, ಮುಸ್ಲಿಂ ಯುವಕನೊಬ್ಬನನ್ನು ವಿವಾಹವಾಗಿ ನಾಪತ್ತೆಯಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.
ಅನುಷಾ ಹೆಗಡೆ ಎಂಬ ಬಿಇ ವ್ಯಾಸಂಗ ಮಾಡುತ್ತಿದ್ದಾಕೆ ಜಾವೀದ್ ಖಾನ್ ಎಂಬಾತನೊಂದಿಗೆ ಪೋಷಕರ ವಿರೋಧದ ನಡುವೆಯೂ ವಿವಾಹವಾಗಿದ್ದಳು.
ಶಿವಮೊಗ್ಗ ಮೂಲದ ಸಂಗೀತ ವಿದ್ವಾನ್ ಓರ್ವರ ಪುತ್ರಿ ಅನುಷಾ ಮೈಸೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವೇಳೆ ಜಾವೀದ್ನ ಬಲೆಗೆ ಬಿದ್ದಿದ್ದಳು .
ಅನುಷಾ ಪೋಷಕರ ವಿರೋಧದ ನಡೆವೆಯೂ ಜಾವೀದ್ನನ್ನು ವಿವಾಹವಾಗಿದ್ದು, ಆ ಬಳಿಕ ಕೆಲ ದಿನಗಳ ಬಳಿಕ ಮನೆಗೆ ವಾಪಾಸಾಗಿ ತಾನು ಅನುಭವಿಸುತ್ತಿದ್ದ ಚಿತ್ರ ಹಿಂಸೆ ಬಗ್ಗೆ ಹೇಳಿಕೊಂಡಿದ್ದಾಳೆ. ನನ್ನನ್ನು ಜಾವೀದ್ ಗೃಹ ಬಂಧನದಲ್ಲಿರಿಸಿ ಹಿಂಸಿಸುತ್ತಿದ್ದಾನೆ. ಆತನ 2 ಹೆಂಡತಿಯ ಮಗುವಿನ ಕೆಲಸವನ್ನೂ ಮಾಡಿಸಿಕೊಳ್ಳುತ್ತಿದ್ದಾನೆ ಎಂದು ನೋವು ತೋಡಿಕೊಂಡಿರುವುದಾಗಿ ಪೋಷಕರು ಪೊಲೀಸರ ಬಳಿ ಹೇಳಿದ್ದಾರೆ.
ಇದೀಗ ಆಕೆ ಮತ್ತೆ ಜಾವೀದ್ನೊಂದಿಗೆ ತೆರಳಿದ್ದು ಆತ ಆಕೆಯ ಬ್ರೈನ್ ವಾಷ್ ಮಾಡಿದ್ದಾನೆ. ಈಗಾಗಲೇ ಆತನಿಗೆ 2 ಮದುವೆಯಾಗಿದೆ ಎಂದು ಪೋಷಕರು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಮಗಳ ಅಂತಧರ್ಮೀಯ ವಿವಾದದಿಂದ ತೀವ್ರವಾಗಿ ನೊಂದಿದ್ದ ಪೋಷಕರು ಇದೀಗ ಮಗಳು ನಾಪತ್ತೆಯಾಗಿರುವುದರಿಂದ ಇನ್ನಷ್ಟು ಕಂಗಾಲಾಗಿದ್ದಾರೆ.
ಅನುಷಾ ಪೋಷಕರು 12 ವರ್ಷದ ಹಿಂದೆ ಮೈಸೂರಿಗೆ ಬಂದು ನೆಲೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ