ಆನೆ ಜೊತೆ Love,ಓವೈಸಿ ಜೊತೆ Dating,ಮದುವೆ ಕಾಂಗ್ರೆಸ್ ಜೊತೆ !
Team Udayavani, May 23, 2018, 1:31 PM IST
ಬೆಂಗಳೂರು: ಜೆಡಿಎಸ್ ಆನೆ ಜೊತೆ (ಬಿಎಸ್ಪಿ ) ಪ್ರೀತಿ ಮಾಡಿ, ಓವೈಸಿ ಜೊತೆ ಡೇಟಿಂಗ್ ಮಾಡಿ ಮದುವೆ ಮಾತ್ರ ಕಾಂಗ್ರೆಸ್ ಜೊತೆ ಮಾಡಿಕೊಂಡಿದೆ ಎಂದು ಮಾಜಿ ಡಿಸಿಎಂ , ಬಿಜೆಪಿ ಶಾಸಕ ಆರ್.ಅಶೋಕ್ ಅವರು ಲೇವಡಿ ಮಾಡಿದ್ದಾರೆ.
ಮೌರ್ಯ ಸರ್ಕಲ್ನಲ್ಲಿ ಬುಧವಾರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರ ಪ್ರತಿಭಟನೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಎಲ್ಲಿ ಹೋಗುತ್ತೆ,ಯಾರ ಜೊತೆ ತಿರುಗಾಡುತ್ತೆ,ಎನು ಮಾಡುತ್ತದೆ ಎನ್ನುವ ಕುರಿತು ಏನೂ ಗೊತ್ತಾಗುವುದಿಲ್ಲ ಎಂದರು.
ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರ,ಅವರ ತಾಯಿನಾಡಿನಲ್ಲೇ , ಅವರು ಹುಟ್ಟಿ ಬೆಳೆದಲ್ಲೇ ಜನ ಹೀನಾಯವಾಗಿ ಸೋಲಿಸಿದ್ದಾರೆ.ಅವರು ಮಾನ ಮರ್ಯಾದೆ ಇದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯಬೇಕು ಎಂದರು.
ಜನ ನೋಡುತ್ತಿದ್ದಾರೆ. ಈ ಸರ್ಕಾರ 3 ತಿಂಗಳು ಬದುಕುವುದಿಲ್ಲ ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ , ಶೋಭಾ ಕರಂದ್ಲಾಜೆ , ನಟ ಜಗ್ಗೇಶ್,ನಟಿ ತಾರಾ, ಬಿಜೆಪಿ ಸಂಸದ ಪಿ.ಸಿ.ಮೋಹನ್ ಸೇರಿದಂತೆ ನೂರಾರು ಮುಖಂಡರು ಕಪ್ಪು ಪಟ್ಟಿ ಧರಿಸಿ ಜೆಡಿಎಸ್ ,ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ಶಾಸಕರು, ಬಿಬಿಎಂಪಿ ಸದಸ್ಯರು,ಪ್ರಮುಖ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದು ಸಮ್ಮಿಶ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಬಿಜೆಪಿ ರಾಜ್ಯಾಧ್ಯಂತ ಇಂದು ಕರಾಳ ದಿನ ಆಚರಿಸುತ್ತಿದ್ದು, ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ