ನ್ಯೂಸ್‌ಪ್ರಿಂಟ್‌ ಮೇಲಿನ ತೆರಿಗೆ ಇಳಿಸಿ; ಪ್ರಧಾನ ಮಂತ್ರಿಗೆ ಸಿದ್ದರಾಮಯ್ಯ ಪತ್ರ


Team Udayavani, Apr 28, 2022, 6:40 AM IST

ನ್ಯೂಸ್‌ಪ್ರಿಂಟ್‌ ಮೇಲಿನ ತೆರಿಗೆ ಇಳಿಸಿ; ಪ್ರಧಾನ ಮಂತ್ರಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ದಿನ ಪತ್ರಿಕೆಗಳಿಗೆ ಅಗತ್ಯವಾದ ಕಾಗದದ ಮೇಲಿನ ತೆರಿಗೆ ಹೊರೆ ತಗ್ಗಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ದೇಶೀಯ ಮುದ್ರಣ ಕಾಗದದ ಗುಣಮಟ್ಟ ಹೆಚ್ಚಿಸಲು ಇನ್ಸೆಂಟಿವ್‌ಗಳನ್ನು ಕೊಡಬೇಕು. ಜಿಎಸ್‌ಟಿ ಪ್ರಮಾಣ ಇಳಿಸಬೇಕು. ಪತ್ರಿಕಾ ಸಂಸ್ಥೆಗಳಿಗೆ ಮುದ್ರಣ ಕಾಗದದ ಲಭ್ಯತೆ ಸುಗಮವಾಗಿ ಮತ್ತು ಸರಳವಾಗಿರುವಂತೆ ನೀತಿ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಲಯಗಳು ಕಾಗದದ ಮೇಲೆ ನೀಡಬೇಕಿದ್ದ ತೆರಿಗೆಯ ಪ್ರಮಾಣ ಈಗ ಶೇ. 68ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಗೆ ಬರುವ ಮುನ್ನ ಮುದ್ರಣ ಕಾಗದದ ಮೇಲೆ ಒಟ್ಟಾರೆ ಶೇ. 3ರಷ್ಟು ಮಾತ್ರ ತೆರಿಗೆ ಬೀಳುತ್ತಿತ್ತು. ಆದರೆ ಜಿಎಸ್‌ಟಿ ಬಳಿಕ ಮುದ್ರಣ ಕಾಗದದ ಮೇಲೆ ಶೇ. 5ರಷ್ಟು ತೆರಿಗೆ ಹೇರಲಾಗಿದೆ.

ಆರ್‌ಎನ್‌ಐ ನೋಂದಾಯಿತ ಪತ್ರಿಕಾ ಸಂಸ್ಥೆಗಳಿಗೆ ಶೇ. 5ರಷ್ಟು ಜಿಎಸ್‌ಟಿ ನಿಗದಿ ಮಾಡಲಾಗಿದ್ದರೆ, ನೋಂದಾಯಿತವಲ್ಲದ ಸಂಸ್ಥೆಗಳು ಮತ್ತು ಪುಸ್ತಕ ಪ್ರಕಾಶನ ಸಂಸ್ಥೆಗಳಿಗೆ ಶೇ. 12ರಷ್ಟು ಜಿಎಸ್‌ಟಿ ನಿಗದಿ ಮಾಡಲಾಗುತ್ತಿದೆ. ಹೀಗಾಗಿ ಪತ್ರಿಕಾ ಸಂಸ್ಥೆಗಳಿಗೆ ಅಗತ್ಯ ಪ್ರಮಾಣದಲ್ಲಿ ಕಾಗದ ದೊರಕುತ್ತಿಲ್ಲ. ಇದರ ಒಟ್ಟು ಪರಿಣಾಮದಲ್ಲಿ ಪತ್ರಿಕೆಗಳ ದರ ಹೆಚ್ಚಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಕಾಗದದ ದರ ಭಾರೀ ಏರಿಕೆ
1 ಟನ್‌ ಮುದ್ರಣ ಕಾಗದವನ್ನು ಆಮದು ಮಾಡಿಕೊಳ್ಳುವ ದರ ಮೊದಲಿದ್ದ 23,000 ರೂ.ನಿಂದ ಈಗ 55ರಿಂದ 60,000 ರೂ.ಗೆ ಏರಿಕೆಯಾಗಿದೆ. ಸದ್ಯ ಶೇ. 56ರಷ್ಟು ಮುದ್ರಣ ಕಾಗದ ವಿದೇಶಗಳಿಂದ ಭಾರತಕ್ಕೆ ರಫ್ತಾಗುತ್ತಿದ್ದರೆ ಶೇ. 44ರಷ್ಟು ದೇಶದ ಒಳಗೆ ಉತ್ಪಾದನೆ ಆಗುತ್ತಿದೆ. ಕಳೆದ 2 ವರ್ಷಗಳಲ್ಲಿ ಪತ್ರಿಕೆಗಳ ಮುದ್ರಣ ವೆಚ್ಚ ಕೂಡ ದುಪ್ಪಟ್ಟಾಗಿದೆ. ಹೀಗಾಗಿ, ಕೇಂದ್ರ ಸರಕಾರ ಮುದ್ರಣ ಮಾಧ್ಯಮದ ನೆರವಿಗೆ ಧಾವಿಸಬೇಕು ಎಂದವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

 

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.