ಇಬ್ಬರು ಒಪ್ಪಿದ್ದಾರೆ, ಅದು ಅತ್ಯಾಚಾರವಾಗಲ್ಲ: ಜಾರಕಿಹೊಳಿ ಬೆಂಬಲಕ್ಕೆ ರೇಣುಕಾಚಾರ್ಯ
Team Udayavani, Mar 5, 2021, 12:17 PM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ರಮೇಶ್ ಜಾರಕಿಹೊಳಿ ಬೆಂಬಲಕ್ಕೆ ನಿಂತಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ರೇಣುಕಾಚಾರ್ಯ, ಇಬ್ಬರು ಒಪ್ಪಿದ್ದಾರೆ, ಹಾಗಾಗಿ ಅದು ಅತ್ಯಾಚಾರವಾಗಲ್ಲ. ರಮೇಶ್ ಜಾರಕಿಹೊಳಿ ಬಲಿಪಶು ಮಾಡಲು ಪ್ರಯತ್ನಿಸಲಾಗಿದೆ. ಷಡ್ಯಂತ್ರದಿಂದ ಈ ರೀತಿ ಮಾಡಲಾಗಿದೆ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯ ಯಾವ ಹಿನ್ನೆಲೆಯಿಂದ ಬಂದಿದ್ದಾರೆ? ಅವರ ಹಿನ್ನೆಲೆ ಏನು? ಯಡಿಯೂರಪ್ಪ
ಈ ಷಡ್ಯಂತ್ರದ ಬಗ್ಗೆ ತನಿಖೆಯಾಗಬೇಕು. ಆರೋಪ ಮಾಡಿರುವ ದಿನೇಶ್ ಕಲ್ಲಳ್ಳಿಯನ್ನು ಬಂಧಿಸಬೇಕು ಎಂದು ರೇಣುಕಾಚಾರ್ಯ ಒತ್ತಾಯ ಮಾಡಿದರು.
ಇದನ್ನೂ ಓದಿ: ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!