ಮಾಜಿ ಸಚಿವರ ಮನೆಗೆ ಮಧು ಬಂಗಾರಪ್ಪ ಭೇಟಿ
Team Udayavani, Apr 11, 2018, 7:00 AM IST
ಬೆಂಗಳೂರು/ಮೈಸೂರು: ಮಾಜಿ ಸಚಿವ, ಬಿಜೆಪಿಯ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಜೆಡಿಎಸ್ಗೆ ಸೆಳೆಯುವ ಪ್ರಯತ್ನ ನಡೆದಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಮಧು ಬಂಗಾರಪ್ಪ ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ.
ಮೈಸೂರು ಪ್ರವಾಸದಲ್ಲಿರುವ ಮಧು ಬಂಗಾರಪ್ಪ ಮಂಗಳವಾರ ಜಯಲಕ್ಷ್ಮೀಪುರದಲ್ಲಿರುವ ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದು, ತಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ಆದರೆ, ಶ್ರೀನಿವಾಸ ಪ್ರಸಾದ್ ಈ
ವಯಸ್ಸಿನಲ್ಲಿ ಪಕ್ಷಾಂತರ ಸರಿ ಹೋಗುವುದಿಲ್ಲವೆಂದು ಹೇಳಿದರು ಎಂದು ತಿಳಿದು ಬಂದಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಶತಾಯ-ಗತಾಯ ಪ್ರಯತ್ನ ನಡೆಸಿರುವ ಜೆಡಿಎಸ್, ಶ್ರೀನಿವಾಸ ಪ್ರಸಾದ್ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಲಾಭವಾಗುವುದರ ಜತೆಗೆ ಹಳೇ ಮೈಸೂರು
ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಬಹುದೆಂಬ ಉದ್ದೇಶದಿಂದ ಈ ಪ್ರಯತ್ನಕ್ಕೆ ಕೈಹಾಕಿದೆ ಎನ್ನಲಾಗಿದೆ.
ಶ್ರೀನಿವಾಸ ಪ್ರಸಾದ್ ಅವರು ಹಿರಿಯ ನಾಯಕರು. ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರೊ. .ಎಸ್.ರಂಗಪ್ಪ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿದ್ದೆ. ಅದನ್ನು ಬಿಟ್ಟರೆ ಬೇರೆನಿಲ್ಲ.
● ಮಧು ಬಂಗಾರಪ್ಪ, ಶಾಸಕ
ನನ್ನ ಹಾಗೂ ಮಧು ಬಂಗಾರಪ್ಪ ಅವರದ್ದು ವಿಶ್ವಾಸದ ಭೇಟಿ. ನಾನು ಕಂದಾಯ ಸಚಿವನಾಗಿದ್ದ ಅವಧಿಯಲ್ಲಿ ಅವರಿಗೆ
ಅನುಕೂಲ ಮಾಡಿಕೊಟ್ಟಿದ್ದ ಕಾರಣಕ್ಕೆ ಕೃತಜ್ಞತೆ ತಿಳಿಸಲು ಮನೆಗೆ ಬಂದಿದ್ದರು.
● ಶ್ರೀನಿವಾಸಪ್ರಸಾದ್, ಮಾಜಿ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ
Rebel star ಅಂಬರೀಶ್ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್
AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ
Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ
Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ