ಆಸ್ಟ್ರೇಲಿಯದ ಮೆಲ್ಬರ್ನ್ನಲ್ಲಿ ಮಧ್ವರ ವಿಗ್ರಹ ಪ್ರತಿಷ್ಠೆ ನಾಳೆ
Team Udayavani, Feb 2, 2020, 3:03 AM IST
ಉಡುಪಿ: ಆಸ್ಟ್ರೇಲಿಯಾದ ಮೆಲ್ಬರ್ನ್ ನಗರದಲ್ಲಿ ಆಚಾರ್ಯ ಮಧ್ವರ ವಿಗ್ರಹವನ್ನು ಮಧ್ವನವಮಿ ದಿನವಾದ ಫೆ. 3ರಂದು ಶ್ರೀ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಪ್ರತಿಷ್ಠಾಪಿಸಲಿದ್ದಾರೆ. ಪುತ್ತಿಗೆ ಮಠಾಧೀಶರ ಶ್ರೀಕೃಷ್ಣ ಭಕ್ತಿ ಪ್ರಚಾರದಂಗವಾಗಿ ಈ ಕಾರ್ಯಕ್ರಮ ನಡೆಯುತ್ತಿದೆ. ಜಗತ್ತಿನ ವಿವಿಧೆಡೆಗಳಲ್ಲಿ ಶ್ರೀಕೃಷ್ಣ ಭಕ್ತಿಯ ಸಂದೇಶ ಸಿಗಬೇಕೆಂಬುದು ಅವರ ಇರಾದೆ.
ಜಗತ್ತಿನ ರಾಜಕೀಯಕ್ಕೆ ವಿಶ್ವಶಾಂತಿ ಮತ್ತು ಆಧ್ಯಾತ್ಮಿಕ ಆಯಾಮ ಸಿಗಬೇಕೆಂಬುದು ಶ್ರೀಗಳ ಉದ್ದೇಶ. ಮಧ್ವಾಚಾರ್ಯರ ಸಾಂಪ್ರದಾಯಿಕ ಮತ್ತು ಶಾಸ್ತ್ರೀಯ ಭಂಗಿಯ ವಿಗ್ರಹವನ್ನು ಪ್ರತಿಷ್ಠಾಪಿಸುವ ಗುರಿ ಇರಿಸಿ ಕೊಂಡಿದ್ದು, ಈಗಾಗಲೇ ಅಮೆರಿಕದ ಹ್ಯೂಸ್ಟನ್ ಮತ್ತು ಒಮಾನ್ನ ಮಸ್ಕತ್ನಲ್ಲಿ ಪ್ರತಿಷ್ಠಾಪಿಸಲಾಗಿದೆ.
ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಮೆಲ್ಬರ್ನ್ನ ಶ್ರೀ ವೆಂಕಟಕೃಷ್ಣ ವೃಂದಾವನದಲ್ಲಿ ಮಧ್ವನವಮಿಯಂದು ಮಧ್ವಾಚಾರ್ಯರ ವಿಗ್ರಹ ಪ್ರತಿಷ್ಠಾಪನೆ ಮತ್ತು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಲಾಗುತ್ತಿದೆ. ಅಂದು ಬೆಳಗ್ಗೆ ಸುದರ್ಶನ ಹೋಮ, ಮುದ್ರಾಧಾರಣ, ವಿಗ್ರಹ ಪ್ರತಿಷ್ಠಾಪನೆ, ವಾಯುಸ್ತುತಿ ಪುರಶ್ಚರಣದೊಂದಿಗೆ ಮಧು ಅಭಿಷೇಕ, ಮಹಾಪೂಜೆ, ತೀರ್ಥ ಪ್ರಸಾದ, ಸಂಜೆ ಭಜನೆ, ಧಾರ್ಮಿಕ ಸಭೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?