ಮಹದಾಯಿ; ಬಿಜೆಪಿಗೆ ತಿರುಗುಬಾಣ: ರೆಡ್ಡಿ
Team Udayavani, Dec 28, 2017, 8:41 AM IST
ಬೆಂಗಳೂರು: ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿ ಮಾಡಿದ ನಾಟಕ ಅವರಿಗೇ ತಿರುಗುಬಾಣವಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನೀರು ತರಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ರೈತರ ಬಳಿ ಹೋಗಿ 15 ದಿನದಲ್ಲಿ ಸಿಹಿಸುದ್ದಿ ತರುತ್ತೇನೆ ಎಂದು ಮಾತು ಕೊಟ್ಟಿದ್ದಾರೆ. ಗೋವಾ ಮುಖ್ಯಮಂತ್ರಿ ರಾಜ್ಯದ ಸಿಎಂ ಅಥವಾ ಸರ್ಕಾರಕ್ಕೆ ಪತ್ರ ಬರೆಯದೇ ಬಿಎಸ್
ವೈಗೆ ಬರೆದರು. ಇದರಿಂದ ಯಾವುದೇ ಉಪಯೋಗವಿಲ್ಲ.
ಬಿಜೆಪಿಯವರ ನಾಟಕಗಳು ರೈತರಿಗೆ ಗೊತ್ತಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಗೊಂದಲಗಳಿಗೆ ಬಿಜೆಪಿಯೇ ನೇರಕಾರಣ ಎಂದು ಟೀಕಿಸಿದರು. ಕೈಲಾಗದವರು ಮೈ ಪರಚಿಕೊಂಡಂತೆ ಬಿಜೆಪಿ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡಲು ಮುಂದಾಗಿದೆ. ಪ್ರತಿಭಟನೆ ಮಾಡಲಿ ನಾವೇನು ಬೇಡ ಎಂದು ಹೇಳಿಲ್ಲ. ರೈತರಿಗೆ ಪ್ರಾಣ ಸಂಕಟ, ಇವರಿಗೆ ಚೆಲ್ಲಾಟವಾದಂತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ