“ವೀರಶೈವ-ಲಿಂಗಾಯತ ಧರ್ಮ ಜೈ’ ಎಂದಿದ್ದ ಮಾತೆ ಮಹಾದೇವಿ


Team Udayavani, Aug 2, 2017, 8:20 AM IST

mahadevi.jpg

ಬೆಂಗಳೂರು: ವೀರಶೈವವನ್ನು ಹೊರತುಪಡಿಸಿ ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಯಾಗಬೇಕೆಂದು ಪ್ರತಿಪಾದಿಸುತ್ತಿರುವ ಬಸವ ಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಈ ಹಿಂದೆ ವೀರಶೈವ ಲಿಂಗಾಯತ ಎರಡೂ ಒಂದೇಯಾಗಿದ್ದು, “ವೀರಶೈವ ಧರ್ಮ’ ಸ್ಥಾಪನೆಗೆ ಒತ್ತಾಯಿಸುವ ವೀರಶೈವ ಮಹಾಸಭೆಯ ನಿರ್ಣಯಕ್ಕೆ ಸಹಿ ಹಾಕಿರುವ ಸಂಗತಿ ಈಗ ಬೆಳಕಿಗೆ ಬಂದಿದೆ.

“ವೀರಶೈವರು ಲಿಂಗಾಯತರೇ ಅಲ್ಲ, ಬಸವಣ್ಣನವರ ಅನುಯಾಯಿಗಳೂ ಅವರಲ್ಲ’ ಎಂದು ಈಗ ಬಹಿರಂಗ ಹೇಳಿಕೆ ನೀಡಿ, ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ರ್ಯಾಲಿಗಳನ್ನು ನಡೆಸುತ್ತಿರುವ ಮಾತೆ ಮಹಾದೇವಿ ಅವರು ಈ ಹಿಂದೆ ವೀರಶೈವ ಲಿಂಗಾಯತ ಧರ್ಮ ಸ್ಥಾಪನೆಗೆ ತಾವೇ ಆಸಕ್ತಿ ವಹಿಸಿ ಮಹಾಸಭೆಯ ಕಾರ್ಯಕ್ರಮದಲ್ಲಿ ನಿರ್ಣಯ
ಬೆಂಬಲಿಸಿ ಅಂಕಿತ ಹಾಕಿದ್ದ ಹಸ್ತಾಕ್ಷರದ ಪ್ರತಿ “ಉದಯವಾಣಿ’ಗೆ ಲಭ್ಯವಾಗಿದೆ.

ಬೆಂಗಳೂರಿನ ಶೇಷಾದ್ರಿ ರಸ್ತೆಯ ಕೇಂದ್ರ ಕಚೇರಿಯಲ್ಲಿ 1987 ಸೆಪ್ಟೆಂಬರ್‌ 20 ರಂದು ಐ.ಎಂ. ಮಗುªಂ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 59 ಜನ ಪಾಲ್ಗೊಂಡಿದ್ದು, ಈ ಸಭೆಯಲ್ಲಿ ಮಾತೆ ಮಹಾದೇವಿ ಹಾಗೂ ಸದ್ಗುರು ಲಿಂಗಾನಂದ ಸ್ವಾಮೀಜಿ ಪಾಲ್ಗೊಂಡಿದ್ದಾರೆ. ಅಲ್ಲದೇ ಮಾತೆ ಮಹಾದೇವಿಯವರೇ ಪ್ರಾಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಆ ಸಭೆಯಲ್ಲಿ ಪ್ರಮುಖವಾಗಿ ವೀರಶೈವ ಪ್ರತ್ಯೇಕ ಧರ್ಮದ ಬೇಡಿಕೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು,
ವೀರಶೈವರೆಲ್ಲರೂ ವರ್ಷಕ್ಕೆ ಒಂದು ಬಾರಿ ಒಂದು ನಿರ್ದಿಷ್ಠ ಸ್ಥಳದಲ್ಲಿ ಒಂದುಗೂಡಬೇಕು. ಆ ಕಾರ್ಯಕ್ರಮಕ್ಕೆ
ಶರಣ ಮೇಳ ಎಂದು ಹೆಸರಿಸುವುದಾಗಿಯೂ, ಸಮ್ಮೇಳನ ಸೇರಲು ಕೂಡಲ ಸಂಗಮ ಕ್ಷೇತ್ರ ಸೂಕ್ತ ಸ್ಥಳವೆಂದು ಮಾತೆ ಮಹಾದೇವಿ ಭಾಷಣ ಮಾಡಿದ್ದರು.

ಈ ಶರಣ ಮೇಳದಿಂದ ವೀರಶೈವರೆಲ್ಲ ಒಂದೇ ಎಂಬ ಭಾವನೆ ಮೈಗೂಡುತ್ತದೆ. ಎಲ್ಲ ಭಾಗದಿಂದ ಬಂದವರಿಗೆ ಎಲ್ಲರೊಂದಿಗೆ ಬೆರೆಯುವುದರಿಂದ ಎಲ್ಲರಿಗೂ ಬಸವ ತತ್ವದ ಅರಿವಾಗುತ್ತದೆ. ಈ ಸಮ್ಮೇಳ ನಕ್ಕೆ ಜಗತ್ತಿನ ಎಲ್ಲ ಬೇರೆ ಬೇರೆ ದೇಶಗಳಿಂದಳೂ ಶರಣರನ್ನು ಆಹ್ವಾನಿಸಿ, ಬಸವ ತತ್ವವನ್ನು ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡುವುದು. ಅಲ್ಲದೇ
ಕ್ರಿಶ್ಚಿಯನ್ನರಿಗೆ ಜೆರುಸಲೇಂ, ಮುಸ್ಲಿಮರಿಗೆ ಮೆಕ್ಕಾ ಹೇಗೋ ಹಾಗೆ ವೀರಶೈವ ಲಿಂಗವಂತರಿಗೆ ಕೂಡಲ ಸಂಗಮ ಒಂದು ಮೆಕ್ಕಾ, ಜೇರುಸಲೇಂ ಇದ್ದಂತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಷ್ಟೇ ಅಲ್ಲದೇ ವೀರಶೈವ ಮಹಾಸಭೆಯಿಂದ ಪ್ರತಿ ವರ್ಷ ಮೂರು ದಿನ ಶರಣ ಮೇಳ ನಡೆಸಲು ತೀರ್ಮಾನಿಸಿ, ಆ ಮೇಳದ ಕೋಶಾಧ್ಯಕ್ಷರಾಗಿಯೂ ಮಾತೆ ಮಹಾದೇವಿ ಕಾರ್ಯ ನಿರ್ವಹಿಸುತ್ತಾರೆ. ಅದೇ ಸಭೆಯಲ್ಲಿ ದಲಿತ ಜನಾಂಗವನ್ನು ವೀರಶೈವ ಲಿಂಗಾಯತ ಧರ್ಮದ ಚೌಕಟ್ಟಿನಲ್ಲಿ ಸೇರಿಸಿಕೊಳ್ಳುವ ಬಗ್ಗೆಯೂ ಮಾತೆ ಮಹಾದೇವಿ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಅಲ್ಲದೇ ಅನೇಕ ಮಠಾಧೀಶರು ಸಿರಿವಂತರಾಗಿದ್ದರೂ, ಪ್ರತಿಯೊಬ್ಬರೂ ಪ್ರತ್ಯೇಕ ಅಸ್ತಿತ್ವಕ್ಕಾಗಿ ಭಾವಿಸಿರುವುದು ವೀರಶೈವರ ಸಂಘಟನೆ ಸಾಧ್ಯವಾಗುತ್ತಿಲ್ಲ. ಯಾರೆಲ್ಲಾ ವೀರಶೈವ ಚೌಕಟ್ಟಿನಲ್ಲಿ ಬರುವರೋ ಅವರೆಲ್ಲಾ ಶರಣರು ಎಂದು ಮಾತೆ ಮಹಾದೇವಿ ಅಂದಿನ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಅಂದಿನ ಸಭೆಯಲ್ಲಿ 1991 ರಲ್ಲಿ ನಡೆಯುವ ಜನಗಣತಿ ವೇಳೆ ವೀರಶೈವರಿಗೆ ಪ್ರತ್ಯೇಕ ಧರ್ಮದ ಕಾಲಂ ನೀಡುವಂತೆ ಹಾಗೂ ವೀರಶೈವರನ್ನು ರಾಷ್ಟ್ರೀಯ ಅಲ್ಪ ಸಂಖ್ಯಾತರೆಂದು ಪರಿಗಣಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂಬ ನಿರ್ಣಯ ಕೈಗೊಳ್ಳಲಾಗಿದೆ.

ಅಂದಿನ ವೀರಶೈವ ಮಹಾಸಭೆಯ ಎಲ್ಲ ನಿರ್ಣಯಗಳಿಗೂ ಬೆಂಬಲ ಸೂಚಿಸಿ ಮಾತೆ ಮಹಾದೇವಿ ಸಹಿ ಹಾಕಿದ್ದಾರೆ. ಅಲ್ಲದೇ ಮಠಾಧೀಶರ ಸ್ವಾರ್ಥಕ್ಕೆ ಧರ್ಮ ಒಡೆಯಬಾರದು ಎಂದು ಹೇಳಿದ್ದ ಮಾತೆ ಮಹಾದೇವಿ ಕ್ರಮೇಣ ವೀರಶೈವ ಮಹಾಸಭೆಯಿಂದ ದೂರ ಸರಿದು. ಲಿಂಗಾನಂದ ಸ್ವಾಮೀಜಿ ಜೊತೆಗೆ ಸೇರಿಕೊಂಡು ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.