ಬಾಕಿ ವೇತನ ನೀಡಲು ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಲ ಆಗ್ರಹ
Team Udayavani, Jul 7, 2022, 8:47 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಅಥವಾ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 189 ಸಿಬಂದಿಗೆ ಮೂರು ವರ್ಷಗಳ ವೇತನ ಬಾಕಿಯಿದ್ದು, ಅದನ್ನು ಕೂಡಲೇ ನೀಡಬೇಕು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಲ ಆಗ್ರಹಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಜಿ.ಆರ್. ಶಿವಶಂಕರ್, ರಾಜ್ಯದ 21 ಅಂಗನವಾಡಿ ಕಾರ್ಯಕರ್ತೆಯರ ತರಬೇತಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 189 ಸಿಬಂದಿಗೆ ಬಾಕಿ ಇರುವ ವೇತನವನ್ನು ನೀಡಬೇಕು ಹಾಗೂ ಸ್ಥಗಿತಗೊಳಿಸಿರುವ ತರಬೇತಿ ಕೇಂದ್ರಗಳನ್ನು ಪುನರ್ ಆರಂಭಿಸಬೇಕು. ಸರಕಾರವು ಹೊಸ ಕೇಂದ್ರಗಳನ್ನು ಆರಂಭಿಸುವುದಾದರೆ, ಈಗಿರುವ ಸಿಬಂದಿಯನ್ನೇ ನೇಮಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಿಗೆ ಮನವಿ ಮಾಡಿದರು.
ತಮ್ಮ ಬೇಡಿಕೆಗಳ ಬಗ್ಗೆ 15 ದಿನಗಳ ಒಳಗೆ ನಿರ್ಧರಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್