ಮಹೇಂದ್ರ ಜೇಲೋ ಪಲ್ಟಿ; ನಾಲ್ವರ ಸಾವು
Team Udayavani, Aug 25, 2019, 3:03 AM IST
ದೇವನಹಳ್ಳಿ: ತಾಲೂಕಿನ ಹಂದರಹಳ್ಳಿ ಗ್ರಾಮದ ಬಳಿ ಶನಿವಾರ ಮಹೇಂದ್ರ ಜೇಲೋ ವಾಹನ ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ. ಬಾಗೇಪಲ್ಲಿ ತಾಲೂಕಿನ ನಕ್ಕಲಪಲ್ಲಿ ಗ್ರಾಮದ ಮಲ್ಲಿಕಾರ್ಜುನ್ ರೆಡ್ಡಿ (26), ಚೇಳೂರು ಹೋಬಳಿಯ ಚಾಕ್ವೆಲು ಗ್ರಾಮದ ನಾಗರಾಜ್ (25), ಮರವಪಲ್ಲಿ ಗ್ರಾಮದ ಅಶೋಕ್ ರೆಡ್ಡಿ (24), ಶಿಡ್ಲಘಟ್ಟ ತಾಲೂಕಿನ ಸೊಣ್ಣೇನಹಳ್ಳಿ ಸುಂದರ್ (25) ಮೃತಪಟ್ಟಿರುವ ದುರ್ದೈವಿಗಳು.
ಮಲ್ಲಿಕಾರ್ಜುನ ರೆಡ್ಡಿ ಜಿಕೆವಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಅಶೋಕ ರೆಡ್ಡಿಯವರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ನಾಗರಾಜ್ ಕೆಲಸ ಹುಡುಕುತ್ತಿದ್ದರು. ಬಾಗೇಪಲ್ಲಿ ತಾಲೂಕಿನ ನಕ್ಕಲಪಲ್ಲಿ ಗ್ರಾಮದ ಗಿರೀಶ್, ರಮೇಶ್, ಮಂಜುನಾಥ್, ಅಶೋಕ್ ರೆಡ್ಡಿ ಹಾಗೂ ರಘುನಾಥ ರೆಡ್ಡಿ ಎಂಬುವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ಕೆ.ಆರ್. ಪುರಂ ಸಮೀಪದಲ್ಲಿರುವ ಅವಲಹಳ್ಳಿಯಿಂದ ಬೆಳಗ್ಗೆ 4 ಗಂಟೆ ಸುಮಾರಿನಲ್ಲಿ ಬೂದಿಗೆರೆ ಕ್ರಾಸ್ ಮಾರ್ಗವಾಗಿ ನಂದಿಬೆಟ್ಟಕ್ಕೆ ಹೋಗುವ ವೇಳೆಯಲ್ಲಿ ಹಂದರಹಳ್ಳಿ ಸಮೀಪದಲ್ಲಿ ಕಾರು ಅತಿ ವೇಗವಾಗಿ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ನಾಲ್ಕು ಮಂದಿ ಹೊಸಕೋಟೆಯ ಸಿಲಿಕಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವರಲ್ಲಿ ಇಬ್ಬರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ