ಮಲೆ ಮಹದೇಶ್ವರ ರಥೋತ್ಸವ ಸಂಪನ್ನ
Team Udayavani, Oct 30, 2019, 3:00 AM IST
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆ 7.45 ರಿಂದ 9 ರವರೆಗಿನ ಶುಭ ಕಾಲದಲ್ಲಿ ಮಹಾರಥೋತ್ಸವ ನಡೆಯಿತು. ಮಹಾರಥೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆ 7.45ರ ವೇಳೆಗೆ ಸಾಲೂರು ಬೃಹನ್ಮಠದ ಪಟ್ಟದ ಗುರುಸ್ವಾಮಿಗಳನ್ನು ಸತ್ತಿಗೆ ಸುರಪಾನಿ, ಮಂಗಳವಾದ್ಯಗಳ ಸಮೇತ ದೇವಾಲಯದ ಪ್ರಾಂಗಣಕ್ಕೆ ಕರೆ ತರಲಾಯಿತು.
ಬಳಿಕ, ಪಟ್ಟದ ಗುರುಸ್ವಾಮಿಗಳ ಸಾನ್ನಿಧ್ಯದಲ್ಲಿ ಬೇಡಗಂಪಣ ಅರ್ಚಕರು ಉತ್ಸವಮೂರ್ತಿಯನ್ನು ಸಿದ್ಧಗೊಳಿಸಿ ಧೂಪ, ದೀಪ, ಮಂಗಳಾರತಿ ಸೇರಿ ವಿಧಿ ವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ಕೈಗೊಂಡು ಬಿಳಿ ಆನೆ ಉತ್ಸವ ನೆರವೇರಿಸಿದರು. ಬಳಿಕ, ಉತ್ಸವಮೂರ್ತಿಯನ್ನು ಹೂ ತಳಿರು ತೋರಣಗಳಿಂದ ಸಿಂಗರಿಸಿ, ಸಿದ್ಧಗೊಳಿಸಿದ್ದ ರಥೋತ್ಸವಕ್ಕೆ ಇಟ್ಟು ಬೂದುಗುಂಬಳಕಾಯಿ ಆರತಿ ಬೆಳಗುವ ಮೂಲಕ ಮಹಾರಥೋತ್ಸವಕ್ಕೆ 8.30ರ ವೇಳೆಗೆ ಚಾಲನೆ ನೀಡಲಾಯಿತು.
ಮಹಾರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಭಕ್ತರು ಉಘೇ.. ಮಾದಪ್ಪ ಉಘೇ… ಮಾದಪ್ಪ ಎಂದು ಜಯ ಘೋಷಗಳನ್ನು ಕೂಗುತ್ತಾ ಭಕ್ತಿ ಮೆರೆದರು. ಮಹಾರಥೋತ್ಸವಕ್ಕೆ ಬೇಡಗಂಪಣ ಕುಲದ 101 ಹೆಣ್ಣುಮಕ್ಕಳು ಬೆಲ್ಲದ ಆರತಿ ಬೆಳಗಿ ರಂಗು ತಂದರು. ದೇವಾಲಯದ ಸುತ್ತಲೂ ಒಂದು ಸುತ್ತು ಪ್ರದಕ್ಷಿಣೆ ಹಾಕಿ ರಥೋತ್ಸವಕ್ಕೆ ತೆರೆ ಎಳೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
MUST WATCH
ಹೊಸ ಸೇರ್ಪಡೆ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ