ನ್ಯಾಯಾಂಗ ಸಾಕ್ಷಿ ಪರಿಗಣಿಸದೆ ಬಾಬರಿ ಮಸೀದಿ ತೀರ್ಪುನೀಡಿದ್ದು ಸರಿಕಾಣುತ್ತಿಲ್ಲ: ಖರ್ಗೆ ಬೇಸರ
ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಹೋಗುತ್ತದೆ
Team Udayavani, Oct 1, 2020, 4:23 PM IST
ಬೆಂಗಳೂರು: ಬಾಬರಿ ಮಸೀದಿ ಧ್ವಂಸದ ಅನೇಕ ಸಾಕ್ಷಿಗಳನ್ನ ಜನ ನೋಡಿದ್ದಾರೆ. 1992 ಡಿಸೆಂಬರ್ ಆರರ ಘಟನೆ ಎಲ್ಲರೂ ನೋಡಿದ್ದಾರೆ. ಯಾರು ಮೇಲೆ ಹತ್ತಿದ್ದರು, ಯಾರು ಕೂತಿದ್ದರು ಎಲ್ಲವೂ ಗೊತ್ತಿದೆ. ವಿಶ್ವದ ಎಲ್ಲಾ ಪತ್ರಿಕೆಗಳಲ್ಲಿ ದೃಶ್ಯ ರೂಪದ ವರದಿಯಾಗಿದೆ. ಆದರೆ ವಿಶೇಷ ಸಾಕ್ಷಿ ಇಲ್ಲವೆಂದು ಸಿಬಿಐ ಕೋರ್ಟ್ ಖುಲಾಸೆ ಮಾಡಿದೆ. ಇದು ನಮ್ಮೆಲ್ಲರಿಗೆ ಬೇಸರ ತರುವ ಸಂಗತಿ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಂಗ ಕೂಡ ಸಾಕ್ಷಿ ಪರಿಗಣಿಸದೆ ತೀರ್ಪು ನೀಡಿದ್ದು ಸರಿಕಾಣುತ್ತಿಲ್ಲ. ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಹೋಗುತ್ತದೆ. ಕಾರ್ಯಾಂಗ, ನ್ಯಾಯಾಂಗ ಎರಡೂ ಬೇರೆ ಬೇರೆ. ಬಡಜನರಿಗೆ ಸಿಗುವ ತೀರ್ಪು, ಶಿಕ್ಷೆ ಮೊಟಕಾಗಿದೆ, ಇದರಲ್ಲಿ ಪಾರದರ್ಶಕತೆ ಇಲ್ಲ ಎನ್ನುತ್ತಿದ್ದಾರೆ ಎಂದರು.
ಇದನ್ನೂ ಓದಿ:ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸರ್ಪ್ರೈಸ್ ಅಭ್ಯರ್ಥಿ? ಮಲ್ಲಿಕಾರ್ಜುನ ಖರ್ಗೆ ಸುಳಿವು
ಪ್ರಕರಣಕ್ಕೆ ಬಿಜೆಪಿಯವರೇ ಇದಕ್ಕೆ ಕುಮ್ಮಕ್ಕುಕೊಟ್ಟಿದ್ದರು. ಕರಸೇವಕರು ಎಲ್ಲಿಂದ ಬಂದರು? ಇಟ್ಟಿಗೆ, ಕಟ್ಟಡ ನಿರ್ಮಾಣ ವಸ್ತು ಎಲ್ಲಿಂದ ಬಂದವು? ಕರಸೇವಕರು ಅಲ್ಲಿ ಏಕಾಏಕಿ ಹೋಗಲು ಸಾಧ್ಯವೇ? ಅದಕ್ಕೆ ಯಾರದಾದರೂ ಸಾಥ್ ಬೇಕಲ್ಲವೇ. ಹಾಗಾದರೆ ಬಾಬರಿ ಮಸೀದಿ ಹೊಡೆದಿದ್ದು ಯಾರು? ಎಂದು ಖರ್ಗೆ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್