ಮಲೆನಾಡು ಕರ್ನಾಟಕ ಘೋಷಣೆ ಮಾಡಿ: ಎಚ್.ಕೆ. ಕುಮಾರಸ್ವಾಮಿ
Team Udayavani, Mar 25, 2022, 9:30 PM IST
ವಿಧಾನಸಭೆ: ಮಲೆನಾಡು ಪ್ರದೇಶ ಹೊಂದಿರುವ ಜಿಲ್ಲೆಗಳನ್ನು ಒಟ್ಟುಗೂಡಿಸಿ ಅಭಿವೃದ್ಧಿ ದೃಷ್ಟಿಯಿಂದ ಮಲೆನಾಡು ಕರ್ನಾಟಕ ಎಂದು ಘೋಷಣೆ ಮಾಡಬೇಕೆಂದು ಜೆಡಿಎಸ್ ಶಾಸಕ ಎಚ್.ಕೆ. ಕುಮಾರಸ್ವಾಮಿ ಮನವಿ ಮಾಡಿದರು.
ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅಭಿವೃದ್ಧಿ ದೃಷ್ಟಿಯಿಂದ ಕಿತ್ತೂರು ಕರ್ನಾಟಕ ಘೋಷಣೆ ಮಾಡಿದಂತೆ ಮಲೆನಾಡು ಕರ್ನಾಟಕ ಘೋಷಣೆ ಮಾಡಿ, ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದರು. ಅನುದಾನದ ಹಂಚಿಕೆಯಲ್ಲಿ ಸಾಕಷ್ಟು ತಾರತಮ್ಯವಾಗುತ್ತಿದೆ. ಜನಸಂಖ್ಯೆ ಆಧಾರದ ಮೇಲೆ ಅನುದಾನ ನೀಡುವ ವವ್ಯಸ್ಥೆ ಆಗಬೇಕು. ಉಡುಪಿ, ದಕ್ಷಿಣ ಕನ್ನಡದಲ್ಲಿ ಜನಸಂಖ್ಯೆ ಕಡಿಮೆ ಇದ್ದರೂ, ಅಲ್ಲಿಗೆ 30 ಕೋಟಿ ರೂ. ನೀಡುತ್ತಾರೆ. ನಮಗೆ 2 ಕೋಟಿ ಕೊಡುತ್ತಾರೆ. ಈ ತಾರತಮ್ಯ ನಿಲ್ಲಬೇಕು. ಇಲ್ಲದಿದ್ದರೇ ಕಾನೂನು ಮೆಟ್ಟಿಲು ಹತ್ತಬೇಕಾಗುತ್ತದೆ ಎಂದರು.
ಆಡಳಿತದಲ್ಲಿ ಸುಧಾರಣೆ ತರುವ ಕೆಲಸ ಮಾಡಬೇಕು.ತಹಸೀಲ್ದಾರ್ ಹುದ್ದೆಯನ್ನು ಮೇಲ್ದರ್ಜೆಗೇರಿಸಿ ಎಸಿ ಹುದ್ದೆ ನೀಡಿ, ಡಿಸಿ ವರದಿ ಕೊಟ್ಟ ಮೇಲೆ ಸರ್ಕಾದಲ್ಲಿ ಮತ್ತೆ ಏಕೆ ಪರಿಶೀಲನೆ ಮಾಡಬೇಕು. ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಮತ್ತು ಸೆಕ್ರೆಟರಿಗಳು ಇಬ್ಬರೂ ಯಾಕೆ ಬೇಕು. ಅವರು ಒಬ್ಬರಿಗೊಬ್ಬರು ಹೊಡೆದಾಡುತ್ತಿದ್ದಾರೆ. ಅನಗತ್ಯ ಹುದ್ದೆಗಳನ್ನು ಕಡಿತ ಮಾಡಿ, ಅರಣ್ಯ ಇಲಾಖೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ, ಯುರೋಪಿಯನ್ ದೇಶಗಳು ಪ್ರವಾಸೋದ್ಯಮದಿಂದಲೇ ದೇಶವನ್ನು ನಡೆಸುತ್ತಿವೆ. ಪಶ್ಚಿಮ ಘಟ್ಟದಲ್ಲಿಯೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಇದೆ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ