ದಾಂಡೇಲಿ ಮೂಲದ ವ್ಯಕ್ತಿಗೆ ಗುಂಡಿಕ್ಕಿ ಕೊಲೆ
Team Udayavani, Sep 26, 2019, 3:03 AM IST
ಧಾರವಾಡ: ಕಳೆದ ವಾರ ಹುಬ್ಬಳ್ಳಿಯಲ್ಲಿ ನಡೆದ ಬಿಹಾರ ಮೂಲದ ವ್ಯಕ್ತಿ ಶೂಟೌಟ್ ಘಟನೆ ಮಾಸುವ ಮುನ್ನವೇ ಒಂದೇ ವಾರದ ಅಂತರದಲ್ಲಿ ಮತ್ತೂಂದು ಶೂಟೌಟ್ ನಡೆದಿರುವುದು ಆತಂಕ ಸೃಷ್ಟಿಸಿದೆ. ಕಾರನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು ದಾಂಡೇಲಿ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ದಾಂಡೇಲಿಯ ಶ್ಯಾಮ್ಸುಂದರ್ ದೇವರಾಜ್ (42) ಹತ್ಯೆಯಾದವರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲು ದಾಂಡೇಲಿಯಿಂದ ತಮ್ಮ ಕಾರಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದತ್ತ ಹೊರಟಿದ್ದರು. ದಾಂಡೇಲಿಯಿಂದ ಕಾರು ಹಿಂಬಾಲಿಸಿಕೊಂಡೇ ಪಲ್ಸರ್ ಬೈಕ್ನಲ್ಲಿ ಬಂದ ಮೂವರು, ಸಲಕಿನಕೊಪ್ಪ ಗ್ರಾಮ ದಾಟುತ್ತಿದ್ದಂತೆಯೇ ಬೆಳಗ್ಗೆ 9.30ರ ಸುಮಾರಿಗೆ ಕಾರು ಅಡ್ಡಗಟ್ಟಿದ್ದಾರೆ. ಕಾರು ನಿಲ್ಲಿಸುವಷ್ಟರಲ್ಲಿ ಚಾಲಕನ ಪಕ್ಕ ಕುಳಿತಿದ್ದ ಶ್ಯಾಮ್ಸುಂದರ್ ಅವರತ್ತ ಗುಂಡು ಹಾರಿಸಿದ್ದಾರೆ.
ಶ್ಯಾಮ್ಸುಂದರ್ ಎಡಭುಜಕ್ಕೆ ತಾಗಿ ಗುಂಡು ಎದೆ ಪ್ರವೇಶಿಸಿದೆ. ಈ ವೇಳೆ ಭಯಗೊಂಡ ಕಾರು ಚಾಲಕ ಅಬ್ದುಲ್, ಕಾರು ಸಮೇತ ರಕ್ತಸಿಕ್ತರಾಗಿದ್ದ ಶ್ಯಾಮ್ಸುಂದರ್ರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆ ತಂದರು. ಕೆಲ ಹೊತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಶ್ಯಾಮ್ಸುಂದರ್ ಮೃತಪಟ್ಟಿದ್ದಾರೆ. ಹತ್ಯೆಗೆ ವೈಯಕ್ತಿಕ ವೈಷಮ್ಯವೋ ಅಥವಾ ರಾಜಕೀಯ ವೈರತ್ವವೋ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ