ಮಹಿಳಾ ಮೀಸಲಾತಿಗಾಗಿ ನಾಳೆ ಮಂಗಳೂರು ಚಲೋ
Team Udayavani, Feb 25, 2019, 12:30 AM IST
ಬೆಂಗಳೂರು : ಕೇಂದ್ರ ಸರ್ಕಾರ ಮಹಿಳೆಯರಿಗೆ ಶೇ.33 ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಫೆ. 26ರಂದು ಮಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಅಪ್ಸರಾ ರೆಡ್ಡಿ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಯಾತ್ರೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಮಹಿಳೆಯರನ್ನೂ ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದೆ. ಕೇಂದ್ರದ ಮಹತ್ವಾಕಾಂಕ್ಷಿ ಬೇಟಿ ಬಚಾವೊ, ಬೇಟಿ ಪಡಾವೋ ವಿಫಲ ಯೋಜನೆಗಳಾಗಿವೆ. ಮಹಿಳೆಯರ ಸಬಲೀಕರಣ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಮಾತನಾಡಿ, ಮಹಿಳಾ ಮೀಸಲಾತಿ ಯಿಂದಲೇ ನಾನು ಉನ್ನತ ಹುದ್ದೆಗೇರಿದ್ದು, ಶೇ.33 ರಷ್ಟು ಅವಕಾಶ ಪಡೆಯುವುದು ಮಹಿಳೆಯರ ಹಕ್ಕು. ರಾಹುಲ್ ಗಾಂಧಿ ಮಹಿಳಾ ಮೀಸಲಾತಿಗೆ ಸಹಕಾರ ನೀಡಲು ಮುಂದಾಗಿದ್ದಾರೆ. ಬಿಜೆಪಿ ನಾಯಕರು ಏಕೆ ಮೀಸಲಾತಿ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ